Veerappa Moily: ಮೊಯಿಲಿ ಚುನಾವಣಾ ರಾಜಕಾರಣ ಮುಗಿಯಿತೇ? 


Team Udayavani, Apr 3, 2024, 6:03 PM IST

Veerappa Moily: ಮೊಯಿಲಿ ಚುನಾವಣಾ ರಾಜಕಾರಣ ಮುಗಿಯಿತೇ? 

ಚಿಕ್ಕಬಳ್ಳಾಪುರ: ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ವಿಶೇಷ ಛಾಪು ಮೂಡಿಸಿ ಬಡ ವಿದ್ಯಾರ್ಥಿಗಳು ವೈದ್ಯರು, ಎಂಜನಿಯರಿಂಗ್‌ ಆಗಲು ಸಿಇಟಿ ಪರೀಕ್ಷೆ ಅಸ್ತಿತ್ವಕ್ಕೆ ತಂದ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿಗೆ ಸದ್ಯ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ಕೈ ಜಾರಿದ ಬೆನ್ನಲ್ಲೇ ಅವರ ರಾಜಕೀಯ ಭವಿಷ್ಯದ ಬಗ್ಗೆ ಕ್ಷೇತ್ರದ ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

ಶಾಸಕರಾಗಿ, ಸಚಿವರಾಗಿ ರಾಜ್ಯದ ಮುಖ್ಯ ಮಂತ್ರಿ ಯಾಗಿ, ಕೇಂದ್ರದಲ್ಲಿ ನಾಲ್ಕೈದು ಮಹತ್ವದ ಖಾತೆಗಳನ್ನು ನಿಭಾಯಿಸಿ ದೇಶದ ಎರಡನೇ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ, ಲೋಕಸಭೆಯ ಸಂಸದೀಯ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಮೊಯಿಲಿಗೆ ರಾಜಕೀಯವಾಗಿ ಎರಡನೇ ಬಾರಿಗೆ ಪುನರ್‌ ಜನ್ಮ ನೀಡಿದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕೈ ಟಿಕೆಟ್‌ ತಪ್ಪಿದ್ದು, ಅವರ ಚುನಾವಣಾ ರಾಜಕಾರಣ ಮುಗಿಯಿತೇ ಎನ್ನುವ ಚರ್ಚೆ ಲೋಕಸಭೆ ಚುನಾವಣೆ ಹೊತ್ತಲ್ಲಿ ನಡೆದಿದೆ.

ಕಾರ್ಕಳದಿಂದ 6 ಬಾರಿ ಶಾಸಕ: 1972 ರಿಂದ 1999 ರ ವರೆಗೂ ಸತತ ಆರು ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳದಿಂದ ವಿಧಾನಸಭೆ ಪ್ರವೇಶಿಸಿ ಹಲವು ಮಹತ್ವದ ಖಾತೆಗಳನ್ನು ನಿರ್ವಹಿಸಿದ ಮೊಯಿಲಿ ರಾಜ್ಯದ ಮುಖ್ಯಮಂತ್ರಿಯಾಗಿಯು 1992 ರಿಂದ 1994 ರ ವರೆಗೂ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೇ ಅನೇಕ ಮುಖ್ಯಮಂತ್ರಿಗಳ ಸಚಿವ ಸಂಪುಟದಲ್ಲಿ ಸಣ್ಣ ಕೈಗಾರಿಕೆ, ಹಣಕಾಸು, ವಿರೋಧ ಪಕ್ಷದ ನಾಯಕರಾಗಿ, ಮುಖ್ಯಮಂತ್ರಿಯಾಗಿ, ಕರ್ನಾಟಕ ತೆರಿಗೆ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.

ಮಂಗಳೂರಿನಲ್ಲಿ 2 ಬಾರಿ ಸೋಲು:  ಮುಖ್ಯಮಂತ್ರಿಯಾದ ಬಳಿಕ 1999 ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ನಡೆದ ಮಂಗಳೂರು ಲೋಕಸಭಾ ಚುನಾವಣೆಗೆ ಮೊದಲ ಬಾರಿಗೆ ಸ್ಪರ್ಧಿಸಿದ್ದ ವೀರಪ್ಪ ಮೊಯಲಿ ಬಿಜೆಪಿ ಅಭ್ಯರ್ಥಿ ವಿ.ಧನಂಜಯ್‌ ಕುಮಾರ್‌ ವಿರುದ್ಧ ಕೇವಲ 8,469 ಮತಗಳ ಅಂತರದಲ್ಲಿ ಲೋಕಸಭೆ ಪ್ರವೇಶ ಕೈ ತಪ್ಪಿತು. ನಂತರ 2004 ರ ಲೋಕಸಭಾ ಚುನಾವಣೆಯಲ್ಲಿ ಎರಡನೇ ಬಾರಿಗೆ ತಮ್ಮ ಅದೃಷ್ಠ ಪರೀಕ್ಷೆಗೆ ಮುಂದಾಗುವ ವೀರಪ್ಪ ಮೊಯಿಲಿ ಡಿ.ವಿ.ಸದಾನಂದಗೌಡ ವಿರುದ್ಧ 33,415 ಮತಗಳ ಅಂತರದಿಂದ ಸೋಲು ಕಾಣುತ್ತಾರೆ.

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸ್ಪರ್ಧೆ:  ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಲೋಕಸಭೆ ಕ್ಷೇತ್ರದಲ್ಲಿ ಸತತ 2 ಬಾರಿ ಸೋತ ನಂತರ 2009 ರ ಲೋಕಸಭಾ ಚುನಾವಣೆಗೆ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿ ಅಶ್ವತ್ಥನಾರಾಯಣ ವಿರುದ್ಧ 51,381 ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ. ಬಳಿಕ 2014 ರ ಲೋಕಸಭಾ ಚುನಾವಣೆಯಲೂ ಕೂಡ ಎರಡನೇ ಬಾರಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿ ಬಿ.ಎನ್‌.ಬಚ್ಚೇಗೌಡ ವಿರುದ್ದ (ಮಾಜಿ ಸಿಎಂ ಕುಮಾರಸ್ವಾಮಿ ಸ್ಪರ್ಧಿಸಿದ್ದರು) 9,520 ಮತಗಳ ಅಂತರದಿಂದ ಗೆಲು ಸಾಧಿಸಿದ್ದರು. ನಂತರ 2019 ರಲ್ಲಿ ಅದೇ ಬಿಜೆಪಿಯ ಬಿ.ಎನ್‌.ಬಚ್ಚೇಗೌಡ ವಿರುದ್ಧ ಹ್ಯಾಟ್ರಿಕ್‌ ಗೆಲುವು  ಸಾಧಿಸಲಾಗದೇ ಸೋತರು.

ತಪ್ಪಿದ ಟಿಕೆಟ್‌, ಮುಂದೇನು?  ಸದ್ಯ 2024 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ ಟಿಕೆಟ್‌ 84 ವರ್ಷದ ಮಾಜಿ ಮುಖ್ಯಮಂತ್ರಿ ಮೊಯಿಲಿ ರವರ ಕೈ ತಪ್ಪಿ ರಕ್ಷಾ ರಾಮಯ್ಯಗೆ ಸಿಕ್ಕಿದ್ದು, ಮೊಯಿಲಿ ಮುಂದಿನ ರಾಜಕೀಯ ಭವಿಷ್ಯದ ಬಗ್ಗೆ ಚರ್ಚೆ ನಡೆದಿದೆ. ಅದರಲ್ಲೂ ಚುನಾವಣಾ ರಾಜಕಾರಣ ಮೊಯಿಲಿ ಅವರದು ಈ ಲೋಕಸಭಾ ಚುನಾವಣೆ ಮೂಲಕ ಕೊನೆಗೊಂಡಿದೇ ಎನ್ನುವ ಚರ್ಚೆ ಕೂಡ ಕ್ಷೇತ್ರದ ರಾಜಕೀಯ ವಲಯದಲ್ಲಿ ನಡೆಯುತ್ತಿದೆ.

ಮಾಜಿ ಸಿಎಂ ಮೊಯಿಲಿ ರಾಜಕೀಯ ಪಯಣ :

ಎಲ್‌ಐಸಿ ಉದ್ಯೋಗಿಯಾಗಿದ್ದ ಮಾಜಿ ಸಿಎಂ ವೀರಪ್ಪ ಮೊಯಿಲಿ

ವಕೀಲ ವೃತ್ತಿ ಮೂಲಕ 1968 ರಲ್ಲಿ ರಾಜಕಾರಣ ಪ್ರವೇಶಿಸಿದ ಮೊಯಿಲಿ

ದಕ್ಷಿಣ ಕನ್ನಡ ಜಿಲ್ಲೆಯ ಕರ್ಕಾಳದಿಂದ 6 ಬಾರಿ ವಿಧಾನಸಭೆಗೆ ಸತತ ಆಯ್ಕೆ

ಸಣ್ಣ ಕೈಗಾರಿಕೆ, ಹಣಕಾಸು, ಕಾನೂನು, ಶಿಕ್ಷಣ ಸಚಿವರಾಗಿಯು ಕಾರ್ಯ

1983 ರಿಂದ 1985 ರ ವರೆಗೂ ವಿರೋಧ ಪಕ್ಷದ ನಾಯಕರಾಗಿ ಸೇವೆ

1992 ರಿಂದ 1994 ರ ವರೆಗೂ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಕೆ

2000 ರಿಂದ 2004 ರ ವರೆಗೂ ಕರ್ನಾಟಕ ಕಂದಾಯ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಣೆ

2005 ರಿಂದ 20009 ರವರೆಗೂ ಕೇಂದ್ರದ 2ನೇ ಆಡಳಿತ ಸುಧಾರಣಾ’ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಕ

2009 ರಿಂದ 2014ರ ವರೆಗೂ 2 ಬಾರಿ ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದರು

ಕೇಂದ್ರದಲ್ಲಿ ಕಾನೂನು, ಪೆಟ್ರೋಲ್‌, ಇಂಧನ, ಪರಿಸರ, ಕಾರ್ಪೋರೆಟ್‌, ಅರಣ್ಯ ಹಾಗೂ ಪರಿಸರ ಸಚಿವರಾಗಿ ಕಾರ್ಯನಿರ್ವಹಣೆ

2014 ರಿಂದ 2019 ರ ವರೆಗೂ ಲೋಕಸಭೆಯ ಸಂಸದೀಯ ಹಾಗೂ ಹಣಕಾಸು ಸ್ಥಾಯಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಣೆ

 

- ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.