ಶುಂಠಿ 350 ಹಸಿ ಮೆಣಸು 130 ಬೀನ್ಸ್‌ 120 ರೂ.!


Team Udayavani, Jul 9, 2023, 3:24 PM IST

ಶುಂಠಿ 350 ಹಸಿ ಮೆಣಸು 130 ಬೀನ್ಸ್‌ 120 ರೂ.!

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ತರಕಾರಿ ದರ ಸಮರ ದಾಖಲೆಯ ಪ್ರಮಾಣದಲ್ಲಿ ತಾರಕಕ್ಕೇರಿದೆ. ಟೊಮೆಟೋ 100ರ ಗಡಿ ದಾಟಿ ಗ್ರಾಹಕರನ್ನು ಹೈರಾಣಗಿಸಿರುವ ಬೆನ್ನಲೇ, ಒಂದರೆಡು ವಾರಗಳಿಂದ ತರಕಾರಿ ಬೆಲೆ ಗಗನಕ್ಕೇರಿ ಗ್ರಾಹಕರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.

ಎರಡು ಮೂರು ವಾರಗಳಿಂದ ಮಾರುಕಟ್ಟೆಯಲ್ಲಿ ಟೊಮೆಟೋ ಬೆಲೆ ಅಲ್ಲೋಲಕಲ್ಲೋಲ ಸೃಷ್ಟಿಸಿರುವ ಬೆನ್ನಲೇ ಈಗ ಬೀನ್ಸ್‌, ಶುಂಠಿ, ಹಸಿ ಮೆಣಸಿನ ಕಾಯಿ ಬೆಲೆ ಮಾರುಕಟ್ಟೆಯಲ್ಲಿ ದಾಖಲೆ ಪ್ರಮಾಣದಲ್ಲಿ ಹೆಚ್ಚಿಸಿಕೊಂಡು ಗ್ರಾಹಕರನ್ನು ಕಂಗಾಲಾಗುವಂತೆ ಮಾಡುತ್ತಿದೆ. ಮಳೆಗಾಲದಲ್ಲೇ ಅಗತ್ಯವಾದ ತರಕಾರಿ ಬೆಳೆಗಳು ಗಗನಕ್ಕೇರುತ್ತಿರುವುದು ಜನ ಸಾಮಾನ್ಯರ ನಿದ್ದೆಗೆಡಿಸಿದೆ. ಈಗಾಗಲೇ ಮಾರುಕಟ್ಟೆಯಲ್ಲಿ ಕೆ.ಜಿ. ಟೊಮೆಟೋ 120, 130 ರು ತಲುಪಿದೆ. ಈಗ ದರ ಏರಿಕೆ ಸರದಿ ಶುಂಠಿ, ಬೀನ್ಸ್‌ ಹಾಗೂ ಹಸಿಮೆಣಸಿನ ಕಾಯಿ ಸೇರಿದೆ. ಶುಂಠಿ ವಾರದ ಹಿಂದೆ 250ರಿಂದ 300 ರು ಇತ್ತು ಕೆ.ಜಿ.. ಈಗ 300 ರೂ. ಗಡಿ ದಾಟಿದೆ. ಬೀನ್ಸ್‌ ಕೂಡ 120 ರೂ.ಕೆ.ಜಿ. ಮಾರಾಟವಾಗುತ್ತಿದೆ. ಜಿಲ್ಲೆಯಲ್ಲಿ ಮಳೆ ಗಾಲ ದಲ್ಲಿ ಸಾಮಾನ್ಯ ತರಕಾರಿ ಬೆಲೆ ಕಡಿಮೆ ಇರುತ್ತದೆ. ಆದರೆ, ಈ ಬಾರಿ ಮಳೆ ಕೈ ಕೊಟ್ಟಿರುವ ಪರಿಣಾಮ ತರಕಾರಿ ನಿರೀಕ್ಷಿತ ಪ್ರಮಾಣ ದಲ್ಲಿ ಮಾರುಕಟ್ಟೆಗೆ ಬರುತ್ತಿಲ್ಲ. ಜನವರಿ, ಫೆಬ್ರವರಿ ತಿಂಗಳಲ್ಲಿ ಬಿದ್ದ ಬಿರುಗಾಳಿ, ಆಲಿಕಲ್ಲು ಸಹಿತ ಮಳೆಯಿಂದಾಗಿ ರೈತರು ಬೆಳೆದಿದ್ದ ಅಪಾರ ಪ್ರಮಾ ಣದ ತರಕಾರಿ ನೆಲಕಚ್ಚಿದೆ. ಹೀಗಾಗಿ ಮಾರು ಕಟ್ಟೆಯಲ್ಲಿ ತರಕಾರಿ ಬೆಳೆಗಳ ಬೆಲೆ ವಿಪರೀತ ಏರಿಕೆ ಆಗಿವೆ. ಕ್ಯಾರೆಟ್‌, ಆಲೂಗಡ್ಡೆ, ಹಾಗಲಕಾಯಿ, ಪಡ ವಲಕಾಯಿ, ಹೀರೆಕಾಯಿ ಮತ್ತಿತರ ತರಕಾರಿ ಕೆ.ಜಿ. 50 ರಿಂದ 60 ರೂ. ಮೇಲೆ ಮಾರಾಟವಾಗುತ್ತಿದೆ.

ಶತಕ ಬಾರಿಸಿರುವ ತರಕಾರಿ: ಬೆಲೆಗೆ ಗ್ರಾಹಕರು ಹೈರಾಣು: ಜಿಲ್ಲೆಯ ಮಾರುಕಟ್ಟೆಯಲ್ಲಿ ಸದ್ಯ ಟೊಮೆಟೋ ಕೆ.ಜಿ. 100 ರಿಂದ 110, ಸ್ವಲ್ಪ ಗುಣಮಟ್ಟದ ಟೊಮೆಟೋ 120 ರೂ. ವರೆಗೂ ಮಾರಾಟವಾಗುತ್ತಿದೆ. ಶುಂಠಿ ಅಂತೂ ಕೆ.ಜಿ. ಈಗ 300 ರೂ. ಗಡಿ ದಾಟಿದೆ. ಎರಡು ವಾರಗಳ ಹಿಂದೆ ಶುಂಠಿ ಬರೀ 200ರಿಂದ 250 ರೂ. ಇತ್ತು. ಈಗ ಹೆಚ್ಚಳ ಕಂಡಿದೆ. ಆದೇ ರೀತಿ ಬೀನ್ಸ್‌ ಕೂಡ ಕೆ.ಜಿ. 100 ರಿಂದ 120ರು ವರೊ ಮಾರಾಟ ಆಗುತ್ತಿದ್ದಂತೆ ಹಸಿ ಮೆಣಸಿನಕಾಯಿ ಕೆ.ಜಿ. 100 ರೂ. ಗಡಿ ದಾಟಿ ಗ್ರಾಹಕರನ್ನು ಹೈರಾಣ ಮಾಡುತ್ತಿದೆ.

ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಸದ್ಯ ಸೊಪ್ಪುಗಳು ಮಾತ್ರ ಸಲೀಸು: ಮಾರುಕಟ್ಟೆಯಲ್ಲಿ ಸೊಪ್ಪು ಮಾತ್ರ ಗ್ರಾಹಕರಿಗೆ ಸಲೀಸು ಆಗಿದ್ದು, ಬಡವರ ಹಾಗೂ ಮಧ್ಯವ ವರ್ಗದ ಜನರ ಕೈ ಹಿಡಿದಿದೆ. ತರಕಾರಿ ಬೆಲೆ ಹೆಚ್ಚಳದಿಂದ ಕಂಗಾಲಾಗಿರುವ ಗ್ರಾಹಕರು ಈಗ ಸೊಪ್ಪು ಕಡೆ ವಾಲಿದ್ದಾರೆ. ವಿವಿಧ ಬಗೆಯ ಪಾಲಕ್‌, ಮೆಂತೆ ಸೊಪ್ಪು, ದಂಟು, ನಗ್ಗೆ ಸೊಪ್ಪು, ಪುದೀನಾ ಕಟ್ಟು 20 ರೂ.ಗೆ ಮಾರಾಟವಾಗುತ್ತಿದೆ. ಏರಿಕೆ ಆಗಿರುವ ತರಕಾರಿ ಬೆಳೆಗಳಿಗೆ ಹೋಲಿಸಿಕೊಂಡರೆ ಸದ್ಯ ಸೊಪ್ಪುಗಳೇ ಬಡವರ ಕೈ ಹಿಡಿದಿವೆ. ಕೆಲವೊಮ್ಮೆ ಸೊಪ್ಪುಗಳ ಬೆಲೆ ಕಟ್ಟು 30 ರೂ. ಏರಿಕೆ ಆಗಿತ್ತು. ಆದರೆ, ಮಳೆ ಬೀಳುತ್ತಿರುವುದರಿಂದ ಉತ್ಪಾದನೆ ಹೆಚ್ಚಾಗಿದ್ದು, ಕಟ್ಟು 15ರಿಂದ 20 ರೂ.ಗೆ ಮಾರಾಟವಾಗುತ್ತಿವೆ.

ಮಾರುಕಟ್ಟೆಯಲ್ಲಿ ಶುಂಠಿ ದರ ಇಷ್ಟೊಂದು ಬೆಲೆ ಹೆಚ್ಚಳ ಕಂಡಿರುವುದನ್ನು ನಾವು ನೋಡಿರಲಿಲ್ಲ. ಶುಂಠಿ, ಟೊಮೆಟೋ, ಬೀನ್ಸ್‌ ಹಾಗೂ ಹಸಿ ಮೆಣಸಿನಕಾಯಿ ಸಾಕಷ್ಟು ದುಬಾರಿ ಆಗಿದೆ. ● ಸೌಜನ್ಯ, ಗೃಹಿಣಿ, ಚಿಕ್ಕಬಳ್ಳಾಪುರ

-ಕಾಗತಿ ನಾಗರಾಜಪ್ಪ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.