ಮತದಾನಕ್ಕೆ ಭಯ ಹುಟ್ಟಿಸಿದರೆ ಜೈಲು ಗ್ಯಾರಂಟಿ


Team Udayavani, Apr 4, 2023, 11:09 AM IST

ಮತದಾನಕ್ಕೆ ಭಯ ಹುಟ್ಟಿಸಿದರೆ ಜೈಲು ಗ್ಯಾರಂಟಿ

ಶಿಡ್ಲಘಟ್ಟ: ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದಲ್ಲಿ ಮುಕ್ತ ಹಾಗೂ ಪಾರದರ್ಶಕವಾಗಿ ಮತದಾನ ಮಾಡಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿ ಕೊಂಡಿದೆ. ಮತದಾರರಿಗೆ ಮತದಾನ ಮಾಡಲು ಅಡ್ಡಿಪಡಿಸಿದರೆ ಅಥವಾ ಭೀತಿವುಂಟು ಮಾಡಿದರೆ ಗೂಂಡಾಕಾಯ್ದೆಯಡಿ ಬಂಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎನ್‌.ಎಂ.ನಾಗರಾಜ್‌ ಎಚ್ಚರಿಸಿದರು.

ನಗರದ ಕೋಟೆ ವೃತ್ತದ ಬಾಲಕರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿ ಸಿದ್ದ ಮತದಾನ ಅರಿವು ಕಾರ್ಯಕ್ರಮದಲ್ಲಿ ಮಾತ ನಾಡಿದರು. ಜಿಲ್ಲೆಯಲ್ಲಿ ದೌರ್ಜನ್ಯ ಮತ್ತು ದಬ್ಟಾಳಿಕೆ ನಡೆಸಿ ಮತದಾನ ಮಾಡಲು ಯಾವುದೇ ರೀತಿಯ ಅವಕಾಶಗಳು ನೀಡುವುದಿಲ್ಲ ಮತದಾರರಿಗೆ ಮುಕ್ತ ವಾತಾವರಣದಲ್ಲಿ ಮತದಾನ ಮಾಡಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಮತದಾರರಿಗೆ ಯಾರಾದರೂ ಬೆದರಿಸಿದರೆ ಅಥವಾ ಆಮಿಷಗಳನ್ನು ಒಡ್ಡಿದರೆ ಕಾನೂನು ರೀತಿಯ ಕ್ರಮ ಜರುಗಿಸ ಲಾಗುವುದು ಎಂದು ಹೇಳಿದರು.

ಚುನಾವಣೆ ವೇಳೆಯಲ್ಲಿ ಯಾರಿಗಾದರೂ ಮತ ದಾನ ಮಾಡಿ ಆದರೆ ಗೌಪ್ಯತೆಯನ್ನು ಬಹಿರಂಗಪಡಿಸ ಬೇಡಿ ಎಂದು ಸಲಹೆ ನೀಡಿದ ಜಿಲ್ಲಾಧಿಕಾರಿಗಳು ಇದೇ ವಿಚಾರವನ್ನು ಮುಂದಿಟ್ಟುಕೊಂಡು ಕೆಲವರು ದ್ವೇಷ ಸಾಧಿಸುವ ಅವಕಾಶಗಳಿವೆ ಎಂದ ಜಿಲ್ಲಾಧಿ ಕಾರಿಗಳು ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಮೊದಲು ಕಾನೂನು ಅಡಿ ಕ್ರಮ ಜರುಗಿಸುತ್ತೇವೆ. ಅಲ್ಲಿಗೂ ಅವರು ಬದಲಾಗದಿದ್ದ ಪಕ್ಷದಲ್ಲಿ ಕ್ಷೇತ್ರದಿಂದ ಗಡಿಪಾರು ಮಾಡಿ ಅನಂತರ ಗೂಂಡಾಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲೆಯಲ್ಲಿ ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.80 ಮತದಾನ ದಾಖಲಾಗಿದೆ. ಆ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶ ದಲ್ಲಿ ವ್ಯಾಪಕವಾಗಿ ಅರಿವು ಮತ್ತು ಜಾಗೃತಿ ಮೂಡಿÓ ಲಾಗುತ್ತಿದೆ. ನಾಗರಿಕರು ಮತದಾನ ಮಾಡುವ ಮೂಲಕ ದೇಶ ಕಟ್ಟುವ ಕೆಲಸವನ್ನು ಮಾಡಬೇಕು ಅದುವೇ ನಿಜವಾದ ದೇಶಪ್ರೇಮ ಎಂದರು.

ಈ ಬಾರಿಯ ಚುನಾವಣೆಯಲ್ಲಿ ಯಾರೂ ಸಹ ಮತದಾನದಿಂದ ವಂಚಿತರಾಗಬಾರದೆಂದು ಕೇಂದ್ರ ಚುನಾವಣಾ ಆಯೋಗವು ಅನೇಕ ರೀತಿಯ ಅನುಕೂಲಗಳನ್ನು ಕಲ್ಪಿಸಿದ್ದು ವಿಶೇಷವಾಗಿ 80 ವರ್ಷ ದಾಟಿದ ವಯೋವೃದ್ದರೂ ಮನೆಯಿಂದಲೇ ಮತ ದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಮತದಾನ ಮಾಡಲು ಬಯಸುವವರು ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡುವ ಕೆಲಸವನ್ನು ಆಗಬೇಕು ಅರ್ಹ ಮತದಾರರು ಯಾವುದೇ ಕಾರಣಕ್ಕೂ ಮತದಾನ ದಿಂದ ವಂಚಿತಗೊಳ್ಳಬಾರದು ಎಂದರು.

ಈ ವೇಳೆ ಕಡ್ಡಾಯವಾಗಿ ಮತದಾನ ಮಾಡುವ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು. ಜಿಪಂ ಸಿಇಒ ಪ್ರಕಾಶ್‌ ಜಿ.ಟಿ. ನಿಟ್ಟಾಲಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿ ಕಾರಿ ಡಿ.ಎಲ್‌. ನಾಗೇಶ್‌, ಚುನಾವಣಾಧಿಕಾರಿ ಜಾವೀದಾ ನಸೀಮಾ ಖಾನಂ, ನಗರಸಭೆ ಪೌರಾಯುಕ್ತ ಆರ್‌. ಶ್ರೀಕಾಂತ್‌, ಸಿಪಿಐ ನಂದಕುಮಾರ್‌, ಪಿಎಸ್‌ಐ ಸುನೀಲ್‌ಕುಮಾರ್‌, ವೇಣುಗೋಪಾಲ್‌, ಎಎಸ್‌ಐ ನವಾಜ್‌ ಇತರರು ಹಾಜರಿದ್ದರು.

ಏ.11ರವರೆಗೂ ನೋಂದಣಿಗೆ ಅವಕಾಶ : ಚುನಾವಣೆ ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡಲಾಗಿದೆ ಎಂಬ ದೂರು ಸಾಮಾನ್ಯವಾಗಿ ಕೇಳಿ ಬರುತ್ತಿದೆ ಅದನ್ನು ತಡೆಗಟ್ಟುವ ಸಲುವಾಗಿ ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಇದಿಯೋ ಅಥವಾ ಇಲ್ಲವೋ ಎಂಬುದರ ವಿಚಾರವನ್ನು ತಿಳಿದುಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ. ಜತೆಗೆ 18 ವರ್ಷ ಮೇಲ್ಪಟ್ಟ ಯುವಕ ಯುವತಿಯರು ತಮ್ಮ ಹೆಸರುಗಳನ್ನು ಮತದಾನ ಪಟ್ಟಿಯಲ್ಲಿ ನೋಂದಣಿಗೆ ಏ. 11 ವರೆಗೆ ಅವಕಾಶ ಕಲ್ಪಿಸಲಾಗಿದೆ ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಾಗರಾಜ್‌ ಮನವಿ ಮಾಡಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.