6 ತಿಂಗಳಲ್ಲಿ ಕೆರೆಗಳಿಗೆ ನೀರು: ಸುಧಾಕರ್‌


Team Udayavani, Feb 26, 2019, 7:37 AM IST

6tingal.jpg

ಚಿಕ್ಕಬಳ್ಳಾಪುರ: ಎತ್ತಿನಹೊಳೆ ಯೋಜನೆ ಭೂ ಸ್ವಾಧೀನ ವಿಳಂಬ ಮತ್ತಿತರ ಕಾರಣಗಳಿಂದ ಯೋಜನೆ ಅನುಷ್ಠಾನ ಕುಂಠಿತಗೊಂಡಿದೆ. ಈ ಭಾಗಕ್ಕೆ ಕನಿಷ್ಠ ಅಂತರ್ಜಲ ವೃದ್ಧಿಸಬೇಕೆಂಬ ನಿಟ್ಟಿನಲ್ಲಿ ಹಿಂದಿನ ಸರ್ಕಾರದಲ್ಲಿ ಸಿದ್ದರಾಮಯ್ಯನವರ ಮನವೊಲಿಸಿ ಸಾವಿರ ಕೋಟಿ ರೂ. ವೆಚ್ಚದಲ್ಲಿ ಹೆಚ್‌ಎನ್‌ ವ್ಯಾಲಿ ಯೋಜನೆ ರೂಪಿಸಿದ್ದು, ಆರು ತಿಂಗಳೊಳಗೆ ನೀರು ಹರಿಯಲಿದೆ ಎಂದು ಶಾಸಕ ಡಾ.ಕೆ.ಸುಧಾಕರ್‌ ತಿಳಿಸಿದರು. 

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸೋಮವಾರ 7 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕ ಡಾ.ಕೆ.ಸುಧಾಕರ್‌, ಆರು ತಿಂಗಳೊಳಗೆ ಈ ಭಾಗದ ಕೆರೆಗಳಿಗೆ ಹೆಬ್ಟಾಳ, ನಾಗವಾರ ವ್ಯಾಲಿಯ ಸಂಸ್ಕರಿತ ನೀರು ತುಂಬಲಿದೆ ಎಂದರು.

ಜೆಡಿಎಸ್‌ ಮುಖಂಡರ ವಿರುದ್ಧ ಪರೋಕ್ಷ ಟೀಕೆ: ರಾಜ್ಯದಲ್ಲಿ ನಮ್ಮದೇ ಪಕ್ಷದ ಸರ್ಕಾರ ಬಂದಿದ್ದರೆ ಆ ಶಕ್ತಿ ಬೇರೆ ತರ ಇರುತ್ತಿತ್ತು. ಆದರೆ ಇದು ಸಮ್ಮಿಶ್ರ ಸರ್ಕಾರ ಎಂದು ಒಪ್ಪಿಕೊಳ್ಳುವ ಅನಿರ್ವಾಯತೆ ನಮಗಿದೆ. ಹಿಂದೆ ಇದ್ದಷ್ಟು ಶಕ್ತಿ ಇಲ್ಲದಿದ್ದರೂ ಕೂಡ ಈ ಕ್ಷೇತ್ರಕ್ಕೆ ಏನು ಆಗಬೇಕೊ ಅದನ್ನು ಮಾಡಿಸಿಕೊಂಡು ಬರುವಷ್ಟು ಶಕ್ತಿಯನ್ನು ನೀವು ಕೊಟ್ಟಿದ್ದೀರಿ ಎಂದು ಪರೋಕ್ಷವಾಗಿ ಜೆಡಿಎಸ್‌ ಮುಖಂಡರ ವಿರುದ್ಧ ದೂರಿದರು. 

ಕಳೆದ ಐದು ವರ್ಷದಲ್ಲಿ ಅಭಿವೃದ್ಧಿ ವಿಚಾರದಲ್ಲಿ ಕ್ಷೇತ್ರದಲ್ಲಿ ಭಿನ್ನಮತ ಮಾಡಿಲ್ಲ. ಹಿಂದಿನ ಶಾಸಕರು ತಾರತಾಮ್ಯ ಮಾಡುತ್ತಿದ್ದರೆಂದು ಪರೋಕ್ಷವಾಗಿ ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ವಿರುದ್ಧ ಕಿಡಿಕಾರಿದರು. ಅವರ ಕಾಲದಲ್ಲಿ ಯಾವುದೇ ಸಂಪರ್ಕ ರಸ್ತೆಗೆ ಡಾಂಬರೀಕರಣ ಆಗಲಿಲ್ಲ. ಒಂದು ಗ್ರಾಮಕ್ಕೆ ಪಶು ಆಸ್ಪತ್ರೆ ಸ್ಥಾಪನೆ ಆಗಲಿಲ್ಲ. ನಾವು ಐದು ವರ್ಷದಲ್ಲಿ ಕ್ಷೇತ್ರಕ್ಕೆ ಬೇಕಾದ ಅಗತ್ಯ ಮೂಲ ಸೌಕರ್ಯ ಒದಗಿಸಿದ್ದೇನೆ ಎಂದರು. 

ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ: ಶಾಸಕ ಡಾ.ಕೆ.ಸುಧಾಕರ್‌ ಕ್ಷೇತ್ರದ ನಂದಿ ಹೋಬಳಿ ಕುಪ್ಪಹಳ್ಳಿ ಗ್ರಾಪಂ ಅಂಗಟ್ಟ ಗ್ರಾಮದಿಂದ ನಂದಿ-ಕಾರಹಳ್ಳಿ ಮುಖ್ಯರಸ್ತೆವರೆಗೆ 800 ಮೀ.ಉದ್ದದ ರಸ್ತೆಗೆ 35 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರಿಟ್‌ ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿ, ಚಿಕ್ಕಬಳ್ಳಾಪುರ ನಗರದಲ್ಲಿ 380 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಿರುವ ಲೋಕೋಪಯೋಗಿ ಇಲಾಖೆಯ ನೂತನ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. 

ಮಂಡಿಕಲ್‌ನಿಂದ ಶೆಟ್ಟಿಗೆರೆ, ದೊಡ್ಡಪೈಲಗುರ್ಕಿ ಮಾರ್ಗವಾಗಿ ಶಿಡ್ಲಘಟ್ಟ-ದಿಬ್ಬೂರಹಳ್ಳಿ ಸೇರುವ ರಸ್ತೆ ಸರಪಳಿ 21.0 ಕಿ.ಮೀ ನಿಂದ 22.0 ಕಿ.ಮೀ ವರೆಗೆ 104.27 ಲಕ್ಷ ವೆಚ್ಚದಲ್ಲಿ ಹಾಗೂ 22.0 ಕಿ.ಮೀ ನಿಂದ 22.85 ಕಿ.ಮೀ ವರೆಗೆ 80 ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ, ದೊಡ್ಡಪೈಲಗುರ್ಕಿ ಗ್ರಾಪಂ  ರಾಮಗಾನಪರ್ತಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 10.60 ಲಕ್ಷ ವೆಚ್ಚದಲ್ಲಿ ನೂತನ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿ. 

ತಿಪ್ಪೇನಹಳ್ಳಿ ಗ್ರಾಪಂ ಕಣಜೇನಹಳ್ಳಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ಎಸ್‌ಸಿಪಿ ಯೋಜನೆಯಡಿ 25 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ  ಚರಂಡಿ ನಿರ್ಮಾಣ ಹಾಗೂ ಸಂಪರ್ಕ ರಸ್ತೆಗಳ ಅಭಿವೃದ್ಧಿ ಕಾಮಗಾರಿ, ನಗರ ನಿಮ್ಮಾಕಲಕುಂಟೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 10.60 ಲಕ್ಷ ವೆಚ್ಚದಲ್ಲಿ ನೂತನ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿ.

ಕೊಂಡೇನಹಳ್ಳಿ ಗ್ರಾಪಂ ಕಡಿಸೀಗೇನಹಳ್ಳಿ ಗ್ರಾಮದ ಸರ್ಕಾರಿ  ಪ್ರಾಥಮಿಕ ಶಾಲೆಯಲ್ಲಿ 10.60 ಲಕ್ಷ ವೆಚ್ಚದಲ್ಲಿ ನೂತನ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿ ಸೇರಿ ಒಟ್ಟು 7 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಕೆ.ಸುಧಾಕರ್‌ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು.

ಜಿಪಂ ಸದಸ್ಯರಾದ ಪಿ.ಎನ್‌.ಕೇಶವರೆಡ್ಡಿ, ತಾಪಂ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ, ಕೋಚಿಮುಲ್‌ ಮಾಜಿ ನಿರ್ದೇಶಕ ಕೆ.ವಿ.ನಾಗರಾಜ್‌, ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿ ಮಾಜಿ ಅಧ್ಯಕ್ಷ ಯಲುವಹಳ್ಳಿ ಎನ್‌.ರಮೇಶ್‌, ಹಾಪ್‌ಕಾಮ್ಸ್‌ ಮಾಜಿ ಅಧ್ಯಕ್ಷ ಜಿ.ಆರ್‌.ಶ್ರೀನಿವಾಸ್‌, ಮುಖಂಡರಾದ ಜೆಸಿಬಿ ಮಂಜುನಾಥ್‌, ದೇವಿಶೆಟ್ಟಿಹಳ್ಳಿ ಗಂಗಾಧರ್‌, ಗರಿಗರೆಡ್ಡಿ, ತಾಪಂ ಸದಸ್ಯರಾದ ತಿರುಮಳಪ್ಪ, ಲೋಕೋಪಯೋಗಿ ಇಇ ಅಜಿತ್‌, ಎಇಇ ಚಂದ್ರಶೇಖರ್‌, ತಹಶೀಲ್ದಾರ್‌ ಕೆ.ನರಸಿಂಹಮೂರ್ತಿ, ತಾಪಂ ಇಒ ಕೆ.ಪಿ.ಸಂಜೀವಪ್ಪ ಇದ್ದರು

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.