ನಾಳೆಯಿಂದ ಜಿಲ್ಲಾದ್ಯಂತ ಜಲಮೂಲ ಸಮೀಕ್ಷೆ


Team Udayavani, Jun 14, 2020, 6:14 AM IST

jilladyanta

ಚಿಕ್ಕಬಳ್ಳಾಪುರ: ಸಮರ್ಪಕವಾಗಿ ಮಳೆ ಬೆಳೆ ಆಗದೇ ವರ್ಷದಿಂದ ವರ್ಷಕ್ಕೆ ತೀವ್ರ ಬರಗಾಲಕ್ಕೆ ತುತ್ತಾಗುತ್ತಿರುವ ಬರಪೀಡಿತ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬತ್ತಿ ಹೋಗಿ ಅವಸಾನದ ಅಂಚಿಗೆ ತಲುಪಿರುವ ಜಲ ಮೂಲಗಳನ್ನು ಪತ್ತೆ  ಮಾಡಿ ಪುನಶ್ಚೇತನ ಗೊಳಿಸಿ ಮತ್ತೂಮ್ಮೆ ಅವುಗಳನ್ನು ಜೀವಸೆಲೆಗಳಾಗಿ ರೂಪಿಸಲು ಜಿಲ್ಲಾದ್ಯಂತ ನಾಳೆಯಿಂದ (ಜೂ.15) ಜಲಮೂಲಗಳ ಸಮೀಕ್ಷೆ ನಡೆಯುತ್ತಿದೆ.

ಈಗಾಗಲೇ ಜಿಲ್ಲೆಯ ಅಂತರ್ಜಲ ಪಾತಾಳಕ್ಕೆ ಕುಸಿದು ಸಾವಿರಾರು  ಅಡಿ ಕೊಳವೆ ಬಾವಿ ಕೊರೆದರೂ ಹನಿ ನೀರು ಸಿಗದೇ ಪರದಾಡುತ್ತಿರುವ ಜಿಲ್ಲೆಯ ರೈತಾಪಿ ಕೂಲಿ ಕಾರ್ಮಿಕರ ಬದುಕು ಬರ್ಬರವಾಗಿದೆ. ಕುಡಿಯುವ ನೀರಿಗೆ ಎಲ್ಲಿ ನೋಡಿದರೂ ತೀವ್ರ ಹಾಹಾಕಾರ ಎದುರಾಗಿದೆ. ಇಡೀ ಜಿಲ್ಲೆ ಅಘೋಷಿತ  ಜಲಕ್ಷಾಮ ಎದುರಿಸುತ್ತಿರುವ ಸಂದರ್ಭದಲ್ಲಿ ಜಿಲ್ಲೆಯ ಜಲಮೂಲಗಳ ಪುನಶ್ಚೇತನಕ್ಕೆ ಜಿಪಂ ಶ್ರೀಕಾರ ಹಾಡುತ್ತಿದೆ.

ನಾಳೆಯಿಂದ ಸಮೀಕ್ಷೆ: ಜಿಲ್ಲೆಗೆ ಜೀವ ನದಿಗಳಂತಿದ್ದ ಕೆರೆಗಳು ಇಂದು ಬತ್ತಿ ಹೋಗಿದ್ದು, ಭೂಗಳ್ಳರ ಆರ್ಭಟಕ್ಕೆ ಕೆರೆಗಳ ಸ್ವರೂಪವೇ ಬದಲಾಗಿದೆ. ಜಿಲ್ಲೆಯ ಉದ್ದಗಲಕ್ಕೂ ಹರಿಯುತ್ತಿದ್ದ ಉತ್ತರ ಪಿನಾಕಿನಿ, ವೃಷಭಾವತಿ, ಪಾಲಾರ್‌,  ಪೆನ್ನಾರ್‌, ಚಿತ್ರಾವತಿ ಮತ್ತಿತರ ನದಿಗಳು ನಾಮವೇಶ ಇಲ್ಲದೇ ಹೋಗಿದೆ.

ಐದು ದಿನ ಸಮೀಕ್ಷೆ: ಜಿಲ್ಲೆಯ ಅಂತರ್ಜಲ ಪರಿಸ್ಥಿತಿಯನ್ನು ಕೇಂದ್ರ ಜಲ ಸಂಪನ್ಮೂಲ  ಇಲಾಖೆ ಗಮನಿಸಿ ಕೇಂದ್ರ ಜಲಶಕ್ತಿ ಆಯೋಗದಿಂದ ಹಲವು ಕ್ರಮಗಳನ್ನು ಕೈಗೊಂಡಿದೆ. ಇದೀಗ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ  ಆದೇಶದಂತೆ ಜಿಪಂ ವತಿಯಿಂದ ಜಿಲ್ಲೆಯಲ್ಲಿನ ಜಲ ಮೂಲಗಳಾದ ಕೆರೆ, ಕುಂಟೆ ಕಾಲುವೆ, ಕಲ್ಯಾಣಿ, ಚೆಕ್‌ ಡ್ಯಾಂ ಮತ್ತಿತರ ಜಲಮೂಲಗಳ ಸಮೀಕ್ಷೆಯನ್ನು ಜೂ.15 ರ ಸೋಮವಾರದಿಂದ 20 ರವ ರೆಗೂ ಒಟ್ಟು 5 ದಿನಗಳ ಕಾಲ  ಎಲ್ಲಾ ಜಲ ಮೂಲಗಳ ಸಪ್ತಾಹವನ್ನು ಅಭಿಯಾನ ರೂಪದಲ್ಲಿ ಜಿಲ್ಲಾದ್ಯಂತ ಕೈಗೊಳ್ಳಲು ನಿರ್ಧರಿಸಲಾಗಿದೆ.

ಸಂಬಂಧಪಟ್ಟ ಜಿಲ್ಲೆಯ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ತಾಲೂಕು  ಮಟ್ಟದ ತಾಪಂ ಇಒಗಳು, ಕೃಷಿ ಅಧಿಕಾರಿಗಳು, ವಿಶೇಷವಾಗಿ ಪಂಚಾಯತ್‌ ರಾಜ್‌ ಮತ್ತು ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾ ಯಕ ಕಾರ್ಯಪಾಲಕ ಅಭಿಯಂತರರು, ಸಹಾಯಕ ಹಾಗೂ ಕಿರಿಯ ಅಭಿಯಂತರರ  ಸಹಭಾಗಿತ್ವದಲ್ಲಿ ಸಮೀಕ್ಷೆ ಕಾರ್ಯ ನಡೆಯಲಿದೆ.

ಜಿಲ್ಲೆಯಲ್ಲಿ ಇರುವ ಜಲಮೂಲ ಗಳ ಸಮೀಕ್ಷೆಯನ್ನು ಜಿಲ್ಲಾದ್ಯಂತ ಜೂ.15 ರಿಂದ 20ರ ವರೆಗೂ ಹಮ್ಮಿ ಕೊಳ್ಳಲಾಗಿದೆ. ಸಮೀಕ್ಷೆ ಸಮಯದಲ್ಲಿ ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿನ ಜಲಮೂಲಗಳ ಸಮೀಕ್ಷೆ ನಡೆಸುವಾಗ  ಜಿಲ್ಲೆಯ ಸಾರ್ವಜನಿಕರು ಸಮೀಕ್ಷೆ ಕಾರ್ಯಕ್ಕೆ ಕೈಜೋಡಿಸಿ ಸಹಕರಿಸಬೇಕು. ಇದರಿಂದ ಮುಂದಿನ ದಿನಗಳಲ್ಲಿ ಜಿಲ್ಲೆಯ ಜಲಮೂಲಗಳ ಪುನಶ್ಚೇತನಕ್ಕೆ ಅನುಕೂಲವಾಗಲಿದೆ.
-ಬಿ.ಫೌಝೀಯಾ ತರುನ್ನುಮ್‌, ಜಿಪಂ ಸಿಇಒ

* ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.