ಗುತ್ತಿಗೆದಾರನ ನಿರ್ಲಕ್ಷ್ಯದಿಂದ ಕಾಮಗಾರಿ ಅಪೂರ್ಣ


Team Udayavani, Jun 5, 2019, 3:00 AM IST

gittigedara

ಗೌರಿಬಿದನೂರು: ಗುತ್ತಿಗೆದಾರನ ನಿರ್ಲಕ್ಷ್ಯದಿಂದ ಗೌರಿಬಿದನೂರು ನಗರ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ ಸಿಮೆಂಟ್‌ರಸ್ತೆ ಮತ್ತು ಚರಂಡಿ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡು ಒಂದೂವರೆ ವರ್ಷವಾದರೂ ಯಾವುದೇ ಕ್ರಮಕೈಗೊಳ್ಳದಿರುವುದು ಶೋಚನೀಯ ಸಂಗತಿಯಾಗಿದೆ.
ಇದರ ಪರಿಣಾಮ ಬೇಸಿಗೆಯ ಬೇಗೆ ಜೊತೆಗೆ ಚರಂಡಿ ನೀರು ತುಂಬಿರುವುದರಿಂದ ಸಾಂಕ್ರಾಮಿಕ ರೋಗಗಳ ಭೀತಿಯಲ್ಲಿ ನಗರವಿದೆ.

ಗೌರಿಬಿದನೂರು ನಗರಸಭೆ ವ್ಯಾಪ್ತಿಯಲ್ಲಿನ ರಸ್ತೆಗಳನ್ನು ಮತ್ತು ಚರಂಡಿಗಳನ್ನು ದುರಸ್ತಿಗೊಳಿಸಿ ಹಾಗೂ ಹೊಸದಾಗಿ ನಿರ್ಮಿಸಲು ನಗರೋತ್ಥಾನ ಯೋಜನೆಯಲ್ಲಿ 4.27ಕೋಟಿ ರೂ.ಗಳ ಟೆಂಡರ್‌ ಬಿಡುಗಡೆಯಾಗಿ ಒಂದೂವರೆ ವರ್ಷ ಕಳೆದಿದೆ. ಕಾಮಗಾರಿ ಪೂರ್ಣಗೊಳ್ಳದೇ ಸ್ಥಗಿತಗೊಂಡಿದ್ದು ರಸ್ತೆಗಳು ಪೂರ್ಣಗೊಳ್ಳದೇ ಚರಂಡಿಗಳ ದುರಸ್ತಿಯೂ ಪ್ರಾಂಭವಾಗದೆ, ಚರಂಡಿ ಕೊಳಚೆ ನೀರು ತುಂಬಿ ರೋಗ ಭೀತಿಯಲ್ಲಿ ಜನತೆ ಜೀವನ ಸಾಗಿಸುವಂತಾಗಿದೆ.

ಗೌರಿಬಿದನೂರು ನಗರಸಭೆಗೆ ನಗರೋತ್ಥಾನ ಯೋಜನೆ 3ರಲ್ಲಿ 4.27ಕೋಟಿ ರೂ. ಟೆಂಡರ್‌ ನ್ನು 19 ಫೆಬ್ರವರಿಯಲ್ಲಿ ಪ್ರಾರಂಭಿ ಸಿ 18ನೇ ನವೆಂಬರ್‌ 2018ರಲ್ಲಿ ಪೂರ್ಣಗೊಳಿಸಬೇಕೆಂದು ಸೂಚಿಸಿದ್ದರು. 9ತಿಂಗಳಲ್ಲಿ ಪೂರ್ಣಗೊಳ್ಳಬೇಕಿದ್ದ ಕಾಮಗಾರಿ ಒಂದೂವರೆ ವರ್ಷ ಕಳೆದರೂ ಬಹುತೇಕ ಕಾಮಗಾರಿ ಪ್ರಾರಂಭವಾಗಿಲ್ಲ ಎನ್ನಲಾಗಿದೆ.

ನಗರದ ಬಿ.ಎಚ್‌. ರಸ್ತೆ ಅಗಲೀಕರಣದ ನಂತರ ರಸ್ತೆಯ ಎರಡೂ ಕಡೆಗಳಲ್ಲಿ ಹೊಸದಾಗಿ ನಿರ್ಮಿಸಿದ್ದು ಸುಮಾರು 9ಕ್ಕೂ ಹೆಚ್ಚು ವಾರ್ಡ್‌ ಗಳಿಂದ ಬರುವಂತಹ ತ್ಯಾಜ್ಯ ನೀರು ಸರಾಗವಾಗಿ ಹರಿಯುತ್ತಿಲ್ಲ ಮಾಧವ ನಗರ ಮರಿಯಮ್ಮ ದೇವಸ್ಥಾನ ಮತ್ತು ಅಭಿಲಾಷ್‌ ವೃತ್ತದಲ್ಲಿ ಮಾತ್ರ ಕೆಲವೆಡೆ ನೀರು ಹರಿಯುತ್ತಿದ್ದು, ಉಳಿದಂತೆ ನಗರದಿಂದ ಅಯ್ಯಪ್ಪಸ್ವಾಮಿ ದೇವಸ್ಥಾನದವರೆಗೂ ಸುಮಾರು 2.5 ಕಿ.ಮೀ. ಉದ್ದವಿರುವ ಚರಂಡಿಯಲ್ಲಿ ನೀರು ಸರಾಗವಾಗಿ ಸಾಗುತ್ತಿಲ್ಲ ಇದು ಒಂದೆಡೆಯಾದರೆ ನಗರಸಭೆಯ ನಗರೋತ್ಥಾನ ವಿಶೇಷ ನಿಧಿ,

ಪುರಸಭೆ ನಿಧಿ, 14ನೇ ಹಣಕಾಸು ನಿಧಿ ಸೇರಿದಂತೆ ಹಲವಾರು ನಿಧಿಗಳನ್ನು ಬಳಸಿಕೊಂಡು ಒಟ್ಟಾರೆ 25ಕೋಟಿ ರೂ.ಗಳಷ್ಟು ಕಾಮಗಾರಿಗಳಿಗೆ ಚಾಲನೆ ನೀಡಿದ್ದರೂ ವೈಜ್ಞಾನಿಕವಾಗಿ ಮಾಡದೇ ಇರುವ ಕಾರಣ ಮಳೆಗಾಲದಲ್ಲಿ ಚರಂಡಿ ನೀರು ರಸ್ತೆ ಮತ್ತು ಅಂಗಡಿ ಮನೆಗಳಿಗೆ ನುಗ್ಗುತ್ತದೆ ಎಂದು ಸಾರ್ವಜನಿಕರು ದೂರುತ್ತಿದ್ದಾರೆ.

ಪ್ರತಿವಾರ್ಡುಗಳಲ್ಲಿ ಚಂರಡಿ ಮತ್ತು ಸಿಮೆಂಟ್‌ ರಸ್ತೆಗಳಾಗಬೇಕು ಎಂಬ ಕಾರಣದಿಂದ ಎಲ್ಲಾ ಸದಸ್ಯರೂ ಸೇರಿ ಅನುಮೋದನೆ ನೀಡಿ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಗುತ್ತಿಗೆದಾರ ಅಪೂರ್ಣಕಾಮಗಾರಿ ಮಾಡಿ ನಾಪತ್ತೆಯಾಗಿದ್ದಾನೆ. ಅಧಿಕಾರಿಗಳು ಶಾಮೀಲಾಗಿರುವುದರಿಂದ ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಂಡಿಲ್ಲ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು.
-ಮಾರ್ಕೆಟ್‌ ಮೋಹನ್‌, ನಗರಸಭೆ ಮಾಜಿ ಸದಸ್ಯ

ನಾನು ಆಯುಕ್ತನಾಗಿ ಅಧಿಕಾರ ಸ್ವೀಕರಿಸಿದ ನಂತರ ಎರಡು ಬಾರಿ ಗುತ್ತಿಗೆದಾರನಿಗೆ ನೋಟೀಸ್‌ ನೀಡಿ ಕಾಮಗಾರಿಯನ್ನು ಪ್ರಾರಂಭಿಸಬೇಕೆಂದು ಸೂಚಿಸಿದ್ದೇನೆ ಅದನ್ನೂ ಮೀರಿ ಗುತ್ತಿಗೆದಾರ ವಿಳಂಬ ಮಾಡಿದರೆ ದಂಡವಿಧಿಸುವ ಜೊತೆಗೆ ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿಗಳಿಗೆ ವರದಿನೀಡಲಾಗುವುದು.
-ಉಮಾಕಾಂತ್‌, ಆಯುಕ್ತರು ನಗರಸಭೆ ಗೌರಿಬಿದನೂರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.