ಅಕ್ರಮ ಗಣಿಗಾರಿಕೆ ನಡೆಯದಂತೆ ಎಚ್ಚರ ವಹಿಸಿ

ಗಣಿಗಾರಿಕೆಯಲ್ಲಿ ಕೊರೆಯುವಿಕೆ,ಸ್ಫೋಟಕ ಬಳಕೆ ಕಾರ್ಯಾಗಾರ ಅಧಿಕಾರಿಗಳಿಗೆ ಎಸ್ಪಿ ಮಿಥುನ್‌ ಕುಮಾರ್‌ ಸೂಚನೆ 

Team Udayavani, Feb 3, 2021, 4:44 PM IST

Workshop on Mining

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಯದಂತೆ ಹಾಗೂ ಪರಿಸರದ ಮೇಲೆ ಹಾನಿ ಉಂಟಾಗದಂತೆ ಎಚ್ಚರ ವಹಿಸಿ ಸಂಬಂಧಿತ ಅಧಿಕಾರಿಗಳು ಹಾಗೂ ಪೊಲೀಸ್‌ ಇಲಾಖೆ ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕು ಎಂದು ಎಸ್ಪಿ ಜಿ. ಕೆ.ಮಿಥುನ್‌ ಕುಮಾರ್‌ ಸೂಚಿಸಿದರು.

ಮಂಗಳವಾರ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ವತಿಯಿಂದ ಪೊಲೀಸ್‌ ಇಲಾಖೆ ಸಿಬ್ಬಂದಿಗಳು, ಗಣಿ ಇಲಾಖೆ ಸಿಬ್ಬಂದಿಗಳು ಹಾಗೂ ಸಂಬಂಧಿತ ಅಧಿಕಾರಿ, ಸಿಬ್ಬಂದಿಗಳಿಗೆ ಆಯೋಜಿಸಲಾಗಿದ್ದ ಗಣಿಗಾರಿಕೆಯಲ್ಲಿ ಕೊರೆಯುವಿಕೆ ಮತ್ತು ಸ್ಫೋಟಕ ಬಳಕೆ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಗಣಿಗಾರಿಕೆಯಲ್ಲಿ ಕೊರೆಯುವಿಕೆ ಮತ್ತು ಸ್ಫೋಟಕಗಳ ಬಳಕೆಯಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಹಾಗೂ ಅಕ್ರಮ ಗಣಿಗಾರಿಕೆಗಳನ್ನು ತಡೆಯುವ ನಿಟ್ಟಿನಲ್ಲಿ ಸಂಬಂಧಿತ ಅಧಿಕಾರಿಗಳು ಹಾಗೂ ಪೊಲೀಸ್‌ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಕೈಗೊಳ್ಳಬೇಕಾದ ಕ್ರಮಗಳ ಅರಿವು ಮೂಡಿಸಲು ಈ ಕಾರ್ಯಾಗಾರ ಆಯೋಜಿಸಲಾಗಿದೆ

ಮಾನದಂಡ ಪಾಲಿಸಿ: ಗಣಿಗಾರಿಕೆ ನಡೆಸಲು ಹಾಗೂ ಗಣಿಗಾರಿಕೆಯಿಂದ ಪರಿಸರದ ಮೇಲೆ ಉಂಟಾಗುವ ಹಾನಿ ತಡೆಗಟ್ಟುವ ನಿಟ್ಟಿನಲ್ಲಿ ಅನುಸರಿಸಬೇಕಾದ ಸುರಕ್ಷಿತ ವಿಧಾನಗಳು, ಗಣಿಗಾರಿಕೆಯಲ್ಲಿ ಕೊರೆಯುವ ವಿಧಾನಗಳು ಮತ್ತು ಸ್ಫೋಟಕ ಬಳಕೆ ವಿಧಾನಗಳು ಬಹಳ ಪ್ರಮುಖ ಪಾತ್ರ ವಹಿಸುತ್ತವೆ. ಸರ್ಕಾರದ ಜಾರಿಗೆ ಗಣಿಗಾರಿಕೆ ಕಾಯ್ದೆನ್ವಯ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಹಾಗೂ ವಿಧಿಸಲಾಗಿರುವ ಮಾನದಂಡಗಳು ಮತ್ತು ಅನುಸರಿಸಬೇಕಾದ ಕ್ರಮಗಳ ಕುರಿತು ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು.

ಗಣಿಗಳ ಸುರಕ್ಷತೆಯ ನಿರ್ದೇಶನಾಲಯದ ವೇಣುಗೋಪಾಲ್‌ ಮಾತನಾಡಿ, ಗಣಿಗಾರಿಕೆ ಪ್ರದೇಶಗಳಲ್ಲಿ ಗಣಿಗಾರಿಕೆಗೆ ಅರ್ಹರಿರುವವರಿಗೆ ಮಾತ್ರ ಗಣಿ ಮತ್ತು ಭೂ ವಿಜ್ಞಾನ ಸಂಸ್ಥೆಯಿಂದ ಪರವಾನಗಿ ಪತ್ರ ನೀಡಲಾಗುತ್ತದೆ. ಗಣಿಗಾರಿಕೆ ಪ್ರದೇಶದಲ್ಲಿ ಕೆಲಸ ನಿರ್ವಹಿಸುವ ಪ್ರತಿಯೊಬ್ಬ ಕಾರ್ಮಿಕನ ಸುರಕ್ಷತೆ ಗಣಿಗಾರಿಕೆ ಸಂಸ್ಥೆಯ ಮಾಲೀಕನ ಹೊಣೆಗಾರಿಕೆಯಾಗಿರುತ್ತದೆ.

ಪಾಲನೆ ಮಾಹಿತಿ: ಯಾವುದೇ ಅನಿರೀಕ್ಷಿತ ಘಟನೆ ನಡೆದರೆ ಅದಕ್ಕೆ ಗಣಿಗಾರಿಕೆಯ ಮಾಲೀಕ, ಮೇಲ್ವಿಚಾರಕ, ಮ್ಯಾನೇಜರ್‌ಗಳು ಜವಾಬ್ದಾರರಾಗಿರುತ್ತಾರೆ. ಒಟ್ಟಾರೆಯಾಗಿ ಗಣಿಗಾರಿಕೆ ಮಾಡಬೇಕಾದರೆ ಯಾವ ರೀತಿ ಅರ್ಹತೆ ಪತ್ರ ಪಡೆಯಬೇಕು,ಯಾವ ರೀತಿ ಸುರಕ್ಷತೆ ಕ್ರಮಗಳನ್ನು ಕೈಗೊಳ್ಳಬೇಕು,ಕೊರೆಯುವ ವೇಳೆ ಅನುಸರಿಸಬೇಕಾದ ಕ್ರಮ ಮತ್ತು ಸ್ಫೋಟಕ ವೇಳೆ ಬಳಕೆ ಮಾಡಬೇಕಾದ ವಿಧಾನಗಳ ಬಗ್ಗೆ ವಿವರಿಸಿದರು. ಅಧಿಕಾರಿಗಳು ಸಿಬ್ಬಂದಿಗಳು ಮತ್ತು ಪೊಲೀಸರು ಗಣಿಗಾರಿಕೆ ಸಸ್ಥಳಗಳಿಗೆ ಭೇಟಿ ನೀಡಿದಾಗ ಪರಿಶೀಲಿಸಬೇಕಾದ ದಾಖಲೆಗಳ ಬಗ್ಗೆ ಮಾಹಿತಿ ನೀಡಿದರು.

  ಇದನ್ನೂ ಓದಿ : ತಹಶೀಲ್ದಾರ್‌ ಗಂಗಪ್ಪ ಸುತ್ತ ಅವ್ಯವಹಾರದ ಹುತ್ತ!

ಕಾರ್ಯಗಾರದಲ್ಲಿ ಡಿ.ವೈ.ಎಸ್‌.ಪಿ ರವಿಶಂಕರ್‌, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ನಂಜುಂಡಸ್ವಾಮಿ ಸೇರಿದಂತೆ ತಾಲೂಕಿನ ಎಲ್ಲಾ ಪೊಲೀಸ್‌ ಅಧಿಕಾರಿಗಳು,ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.