Yuva Nidhi Scheme: ಜಿಲ್ಲೆಯ ಪದವೀಧರರು ಯುವನಿಧಿಗೆ 2 ತಿಂಗಳು ಕಾಯಬೇಕು!


Team Udayavani, Jan 20, 2024, 5:36 PM IST

Yuva Nidhi Scheme: ಜಿಲ್ಲೆಯ ಪದವೀಧರರು ಯುವನಿಧಿಗೆ 2 ತಿಂಗಳು ಕಾಯಬೇಕು!

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಪದವಿ ಪೂರೈಸಿದ ವಿದ್ಯಾ ವಂತ ನಿರುದ್ಯೋಗಿಗಳು ಸರ್ಕಾರದ 5ನೇ ಗ್ಯಾರಂಟಿ ಯಾದ ಯುವನಿಧಿ ಪಡೆಯಲು ತಮ್ಮ ಹೆಸರು ನೋಂದಾಯಿಸಿಕೊಂಡರೂ ಯುವನಿಧಿ ತಮ್ಮ ಖಾತೆಗೆ ಡಿಬಿಟಿ ಮೂಲಕ ಬರಲು ಮಾರ್ಚ್‌ ಅಥವಾ ಎಪ್ರಿಲ್‌ ತಿಂಗಳವರೆಗೂ ಕಾಯಲೇಬೇಕು.

ಹೌದು, ವಿದ್ಯಾವಂತ ನಿರುದ್ಯೋಗಿ ಗಳಿಗೆ ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತಂದಿರುವ 5ನೇ ಗ್ಯಾರಂಟಿ ಯುವ ನಿಧಿ ಯೋಜನೆಗೆ ಜಿಲ್ಲೆಯಲ್ಲಿ ಪದವಿ ಪೂರೈಸಿದ ನಿರುದ್ಯೋಗಿಗಳು ಹೆಸರು ನೋಂದಾಯಿಸಿದರೂ ಯುವನಿಧಿ ಸದ್ಯಕ್ಕೆ ಬರುವುದಿಲ್ಲ. ರಾಜ್ಯ ಸರ್ಕಾರ 2022-23ನೇ ಸಾಲಿನಲ್ಲಿ ಪದವಿ ಪೂರೈಸಿದ ವಿದ್ಯಾವಂತ ನಿರುದ್ಯೋಗಿಗಳನ್ನು ಯುವ ನಿಧಿಗೆ ಅರ್ಹರೆಂದು ಪರಿಗಣಿಸಿದೆ. ಜೊತೆಗೆ ಪದವಿ ಪೂರೈಸಿ 180 ದಿನ ಕಳೆದರೂ ಉದ್ಯೋಗ ಸಿಗದವರಿಗೆ ಯುವನಿಧಿಗೆ ಅರ್ಹರೆಂದು ಷರತ್ತು ವಿಧಿಸಿದೆ. ಹೀಗಾಗಿ ಜಿಲ್ಲೆಯ ಬಹುತೇಕ ಪದವಿ ಕಾಲೇಜುಗಳು ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯ ವ್ಯಾಪ್ತಿಗೆ ಒಳಪಡಿಸಿದ್ದು ಬೆಂಗಳೂರು ಉತ್ತರ ವಿವಿ ಕಳೆದ ಸೆಪ್ಪಂಬರ್‌, ಅಕ್ಟೋಬರ್‌ನಲ್ಲಿ ಪದವಿ ಪರೀಕ್ಷೆಗಳನ್ನು ಮುಗಿಸಿದೆ. ಆದ್ದರಿಂದ ಪದವಿ ಪೂರೈಸಿ 180 ದಿನ ಕಳೆಯಬೇಕಾದರೆ ಬರುವ ಮಾರ್ಚ್‌ ಅಂತ್ಯ ಅಥವಾ ಏಪ್ರಿಲ್‌ವರೆಗೂ ಕಾಯಬೇಕಿರು ವುದರಿಂದ ಯುವನಿಧಿಗೆ ಹೆಸರು ನೋಂದಾಯಿಸಿ ಕೊಂಡಿರುವ ಫ‌ಲಾನುಭವಿಗಳು ಯುವನಿಧಿಗಾಗಿ ಇನ್ನೂ 2, 3 ತಿಂಗಳ ಕಾಯಬೇಕಿದೆ.

ಜಿಲ್ಲೆಯ ಉದ್ಯೋಗ ಹಾಗೂ ಕೌಶಲ್ಯಾಭಿವೃದ್ದಿ ಇಲಾಖೆ ಅಧಿಕಾರಿಗಳ ಮಾಹಿತಿ ಪ್ರಕಾರ ಕೇವಲ ಪಾಲಿಟೆಕ್ನಿಕ್‌ ಹಾಗೂ ಐಟಿಐ ಓದಿರುವ ವಿದ್ಯಾರ್ಥಿ ಗಳಿಗೆ ಮಾತ್ರ ಸರ್ಕಾರದಿಂದ ಯುವನಿಧಿ ಸಿಕ್ಕಿದೆ. ಆದರೆ ಪದವಿ ಪೂರೈಸಿದ ವಿದ್ಯಾವಂತ ನಿರುದ್ಯೋಗಿ ಗಳು 180 ದಿನ ಕಳೆದ ಬಳಿಕ ಅರ್ಹರಾಗಲಿದ್ದಾರೆ. ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯವು ಕಳೆದ ಸೆಪ್ಪಂಬರ್‌ ಹಾಗೂ ಅಕ್ಟೋಬರ್‌ನಲ್ಲಿ ಪದವಿ ಪರೀಕ್ಷೆ ಮುಗಿಸಿರುವುದರಿಂದ ಇನ್ನೂ ಕನಿಷ್ಠ 2, 3 ತಿಂಗಳ ಕಳೆದ ಬಳಿಕವಷ್ಟೇ ಯುವನಿಧಿ ನೋಂದಾಯಿತರ ಬ್ಯಾಂಕ್‌ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಜಮೆಗೊಳ್ಳಲಿದೆ.

ಹೀಗಾಗಿ ಯುವನಿಧಿಗೆ ತಮ್ಮ ಹೆಸರು ನೋಂದಾಯಿಸಿಕೊಂಡಿರುವ ಪದವೀ ಧರರು ಯುವನಿಧಿಗೆ ಇನ್ನಷ್ಟು ತಿಂಗಳ ಕಾಲ ಕಾಯಬೇಕಿದೆ.

ಸರ್ಕಾರ ಆದೇಶದ ಪ್ರಕಾರ ಪದವಿ ಪೂರೈಸಿ 180 ದಿನಗಳು ಕಳೆದ ಬಳಿಕವಷ್ಟೇ ಯುವ ನಿಧಿಗೆ ಅರ್ಹರು. ಆದ್ದರಿಂದ ಜಿಲ್ಲೆಯಲ್ಲಿ ಯುವ ನಿಧಿಗೆ ನೋಂದಾಯಿಸಿಕೊಂಡಿರುವ ವಿದ್ಯಾವಂತ ನಿರುದ್ಯೋಗಿಗಳಿಗೆ ಮಾರ್ಚ್‌ ಅಥವಾ ಏಪ್ರಿಲ್‌ ಮೊದಲ ವಾರದಲ್ಲಿ ಯುವ ನಿಧಿ ಡಿಬಿಟಿ ಮೂಲಕ ಫ‌ಲಾನುಭವಿಗಳ ಖಾತೆಗೆ ನೇರ ವರ್ಗಾವಣೆ ಆಗಲಿದೆ. ಸದ್ಯಕ್ಕೆ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಯುವನಿಧಿ ಸಿಕ್ಕಿದೆ ಎಂಬುದರ ಮಾಹಿತಿ ನಮ್ಮ ಬಳಿ ಇಲ್ಲ. ಕೇಂದ್ರ ಕಚೇರಿಯಿಂದ ಪಡೆಯಬೇಕಿದೆ. ಎಂ.ಪ್ರಸಾದ್‌, ಜಿಲ್ಲಾ ಉದ್ಯೋಗಾಧಿಕಾರಿ

ಕಾಗತಿ ನಾಗರಾಜಪ್ಪ

 

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

0528

Chikkaballapur: ಕೈ ಚೆಲ್ಲಿದ ಜನಪ್ರತಿನಿಧಿಗಳು: ಸುಂಕ ವಸೂಲಿಗೆ ನಗರಸಭೆ ಟೆಂಡರ್‌!

dinesh-gu

COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್‌ ಗುಂಡೂರಾವ್‌

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.