ಮಾವು ಭರಪೂರ ಫಸಲು ನಿರೀಕ್ಷೆ!

•ತರೀಕೆರೆ ಭಾಗದಲ್ಲಿ ಬಂದಿದೆ ಹೆಚ್ಚು ಮಾವು •ಸಿಗುತ್ತಿದೆ ಸರ್ಕಾರ ನೆರವು

Team Udayavani, Apr 28, 2019, 12:44 PM IST

28-April-17

ಚಿಕ್ಕಮಗಳೂರು: ನಗರದ ಹಣ್ಣಿನ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿರುವ ಮಾವಿನ ಹಣ್ಣುಗಳು.

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅಧಿಕ ಗಾಳಿ, ಆಲಿಕಲ್ಲು ಬೀಳದಿದ್ದರೆ ಈ ವರ್ಷ ಹಣ್ಣಿನ ರಾಜ ಮಾವಿನ ಬಂಪರ್‌ ಫಸಲನ್ನು ನಿರೀಕ್ಷಿಸಲಾಗಿದೆ.

ಜಿಲ್ಲೆಯಲ್ಲಿ ಒಟ್ಟು 4244 ಹೆಕ್ಟೇರ್‌ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತಿದೆ. ತರೀಕೆರೆ ತಾಲೂಕಿನಲ್ಲಿ 2861 ಹೆಕ್ಟೇರ್‌, ಕಡೂರಿನಲ್ಲಿ 534 ಹೆಕ್ಟೇರ್‌, ಚಿಕ್ಕಮಗಳೂರು ತಾಲೂಕಿನಲ್ಲಿ 590 ಹೆಕ್ಟೇರ್‌ ಪ್ರದೇಶದಲ್ಲಿ ಮಾವನ್ನು ಬೆಳೆಯುತ್ತಿದ್ದಾರೆ. ಆಲ್ಪೋನ್ಸ್‌ ಮಲ್ಲಿಗೆ, ತೋತಾಪುರಿಯನ್ನು ಮುಖ್ಯವಾಗಿ ಈ ಜಿಲ್ಲೆಯಲ್ಲಿ ಬೆಳೆಯಲಾಗುತ್ತಿದೆ.

ತರೀಕೆರೆ ತಾಲೂಕಿನ ಅಜ್ಜಂಪುರ, ಲಿಂಗದಹಳ್ಳಿ, ಅಮೃತಾಪುರ, ಕಸಬಾದಲ್ಲಿ ಹೆಚ್ಚಾಗಿ ಬೆಳೆಯಲಾಗುತ್ತಿದೆ. ಕಡೂರು ತಾಲೂಕಿನ ಕಸಬಾ ಹೋಬಳಿ, ತಂಗಲಿ, ಚಿಕ್ಕಮಗಳೂರು ತಾಲೂಕಿನ ಅಂಬಳೆ ಮತ್ತು ಲಕ್ಯಾ ಹೋಬಳಿಯಲ್ಲಿ ಮಾವು ಬೆಳೆಯಲಾಗುತ್ತಿದ್ದು, ಈ ವರ್ಷ ಮಾವಿನ ಹೂವು ಅಧಿಕವಾಗಿ ಬಿಟ್ಟಿರುವುದರಿಂದ ಹೆಚ್ಚಿನ ಫಸಲು ನಿರೀಕ್ಷಿಸಲು ಕಾರಣವಾಗಿದೆ.

ರಾಷ್ಟ್ರೀಯ ತೋಟಗಾರಿಕಾ ಮಿಷನ್‌ ಯೋಜನೆಯಡಿ 250 ರಿಂದ 300 ಹೆಕ್ಟೇರ್‌ ಪ್ರದೇಶದಲ್ಲಿ ಈ ಬೆಳೆಯನ್ನು 2006 ನೆಯ ಸಾಲಿನಿಂದ ವಿಸ್ತರಿಸಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಪ್ರದೇಶ ವಿಸ್ತರಣೆಗೆ ಒತ್ತು ನೀಡಲಾಗಿದೆ. 1 ಹೆಕ್ಟೇರ್‌ ಮಾವಿನ ಬೆಳೆಗೆ 7900 ರೂ. ಸಹಾಯಧನ ನೀಡಲಾಗುತ್ತಿದೆ. ತಾಲೂಕು ಪಂಚಾಯತ್‌ ವತಿಯಿಂದ 1 ಹೆಕ್ಟೇರ್‌ಗೆ 2 ಸಾವಿರ ರೂ. ಸಹಾಯಧನವನ್ನು ರೈತರು ಪಡೆದುಕೊಳ್ಳುತ್ತಿದ್ದಾರೆ.

ಈ ಹಿಂದೆ ಕಾರ್ಬೈಡ್‌ ಬೆಳೆಸಿ ಮಾವಿನಕಾಯಿಯನ್ನು ಬೇಗ ಹಣ್ಣು ಮಾಡಲಾಗುತ್ತಿತ್ತು. ಇದು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರಿಂದ ಇಥಿಲಿನ್‌ ಬಳಸಿ ಹಣ್ಣು ಮಾಡುವಂತೆ ರೈತರಿಗೆ ಸಲಹೆ ನೀಡಲಾಗುತ್ತಿದೆ. ಈ ರೀತಿ ಹಣ್ಣು ಮಾಡುವ ಒಂದು ಘಟಕಕ್ಕೆ 8 ಲಕ್ಷ ರೂ. ಸಹಾಯಧನ ನೀಡಲಾಗುವುದು ಎಂದು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಬಿ.ಲೋಹಿತ್‌ ಮಾಹಿತಿ ನೀಡಿದರು.

ಹಣ್ಣು ಮಾಗಿಸುವ(ಪಾಕ್‌ಹೌಸ್‌) ಘಟಕ ಸ್ಥಾಪಿಸುವ ಯೋಜನೆ ಕಳೆದ ವರ್ಷದಿಂದ ಜಾರಿಗೊಳಿಸಿದ್ದು, ರೈತರು ಕನಿಷ್ಠ 2 ಹೆಕ್ಟೇರ್‌ ಜಾಗ ಹೊಂದಿರಬೇಕು. ಈ ಘಟಕಕ್ಕೆ ಇತ್ತೀಚಿನ ದಿನಗಳಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ಇದನ್ನು ಸ್ಥಾಪಿಸುವ ರೈತರು ಬೇರೆ ರೈತರಿಂದ ಮಾವು ಖರೀದಿಸುವ ಬಗ್ಗೆ ಒಪ್ಪಿಗೆ ಕರಾರು ಪತ್ರವನ್ನು ಮಾಡಿಕೊಂಡಿರಬೇಕು ಎಂದು ಮಾಹಿತಿ ನೀಡಿದರು.

ಮಾವಿನ ಹಣ್ಣನ್ನು ಸಂಗ್ರಹಿಸಿಡಲು ಗೋದಾಮು ನಿರ್ಮಿಸಿಕೊಳ್ಳಲು ಸಾಮಾನ್ಯ ವರ್ಗಕ್ಕೆ ಶೇ.50 ಸಹಾಯಧನ ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಶೇ.90 ಸಹಾಯಧನ ನೀಡಲಾಗುತ್ತಿದೆ. ಮಾವು ಬೆಳೆಗಾರರ ಒಕ್ಕೂಟವನ್ನು ಸ್ಥಾಪಿಸಿಕೊಂಡರೆ ರೈತರು ಹೆಚ್ಚಿನ ಸವಲತ್ತನ್ನು ಪಡೆದುಕೊಳ್ಳಲು ಸಹಾಯವಾಗಲಿದೆ.

ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಕುರಿತು ಕರಪತ್ರ ಮುದ್ರಿಸಿ ಹಂಚಲು ಯೋಚಿಸಲಾಗಿದೆ. ಈ ವರ್ಷ ಜಿಲ್ಲೆಯಲ್ಲಿ ಮಾವು ಮೇಳ ನಡೆಸಲು ನಿರ್ಧರಿಸಿದ್ದು, ಅನುದಾನ ಬಿಡುಗಡೆಗೆ ಕೋರಲಾಗಿದೆ. ಅನುಮತಿ ದೊರೆತರೆ ಕಚೇರಿ ಆವರಣ, ಎಪಿಎಂಸಿ ಪ್ರಾಂಗಣ ಅಥವಾ ತರೀಕೆರೆಯಲ್ಲಿ ಮೇಳ ನಡೆಸಲು ಯೋಜಿಸಲಾಗಿದೆ ಎಂದು ಹೇಳಿದರು.

ತರೀಕೆರೆ ತಾಲೂಕಿನಲ್ಲಿ ಈರುಳ್ಳಿ ಬೆಳೆಗಾರರು ಸಂಘ ರಚಿಸಿಕೊಂಡಿದ್ದಾರೆ. ಚಿಕ್ಕಮಗಳೂರು ತಾಲೂಕಿನಲ್ಲಿ ತರಕಾರಿ ಬೆಳೆಯುವ ರೈತರು ಸಂಘ ಮಾಡಿಕೊಂಡಿದ್ದಾರೆ. ಈ ರೀತಿ ಸಂಘ ರಚಿಸಿಕೊಳ್ಳುವುದರಿಂದ ಇಲಾಖೆಯಿಂದ ದೊರೆಯುವ ಹೆಚ್ಚಿನ ಸವಲತ್ತುಗಳನ್ನು ನೀಡಲು ಸಾಧ್ಯವೆಂದು ನುಡಿದರು.

ತರೀಕೆರೆ ತಾಲೂಕಿನ ನಂದಿಹೊಸಳ್ಳಿಯ ಮಾವು ಬೆಳೆಗಾರ ಅಸ್ಲಾಂಖಾನ್‌ ಪತ್ರಿಕೆಯೊಂದಿಗೆ ಮಾತನಾಡಿ, ಮಾವಿನ ಚೇಣಿ ಮಾಡಿದವರು ಮತ್ತು ಈ ಬೆಳೆಯನ್ನೇ ನಂಬಿಕೊಂಡಿರುವವರು ನೆಲಹತ್ತಿ ಹೋಗಿದ್ದಾರೆಂದು ತಿಳಿಸಿ, ಈ ವರ್ಷ ಮಾವಿನ ತೆನೆಯೇ ಇಲ್ಲ. ದರ ಕಟ್ಕೊಂಡು ಏನು ಮಾಡಲು ಸಾಧ್ಯವೆಂದು ಪ್ರಶ್ನಿಸಿ, ಕಳೆದೆರಡು ವರ್ಷಗಳ ಹಿಂದೆ ಈ ಬೆಳೆಯಿಂದ ಯಾವ ಲಾಭವೂ ಆಗಲಿಲ್ಲ. ಕನಿಷ್ಠ ಪ್ರತಿ ಕೆ.ಜಿ.ಗೆ 30 ರೂ.ಗಳಾದರೂ ದೊರೆಯಬೇಕು. ಈ ಬಾರಿ ಸಗಟಾಗಿ 60 ರಿಂದ 80 ರೂ.ಕೆ.ಜಿ ಮಾವಿನಹಣ್ಣು ಮಾರಾಟವಾಗುತ್ತಿದೆ ಎಂದು ಮಾಹಿತಿ ನೀಡಿದರು.

ತಾವು 100 ಎಕರೆಯಲ್ಲಿ 6 ಸಾವಿರ ಮಾವಿನ ಗಿಡಗಳನ್ನು ಬೆಳೆದಿದ್ದು, ಫಸಲು ಬಹಳ ಕಡಿಮೆ ಇದೆ. ನಾವೆ ಮಾವಿನ ಕಾಯಿಯನ್ನು ಕೊಯಲು ಮಾಡಿ ಮಾರಾಟ ಮಾಡುತ್ತಿದ್ದೇವೆ. ಚೇಣಿ ಮಾಡಲು ಮುಂದಾಗುತ್ತಿಲ್ಲ. ಮಾವಿನ ಹೂ ಬಿಟ್ಟಾಗ ಜಿಗಿ ಹುಳು ಬಾಧೆ, ಕಟಾವು ಸಂದರ್ಭದಲ್ಲಿ ನೊಣದ ಬಾಧೆ ಉಂಟಾಗುತ್ತಿದ್ದು, ಇದರ ನಿಯಂತ್ರಣ ಮಾಡದಿದ್ದರೆ ಬೆಳೆ ಸರ್ವನಾಶವಾಗುತ್ತದೆ. ಇದರ ಹತೋಟಿಗೆ ಸರ್ಕಾರ ಬಲೆ ಕೊಡಲು ಮುಂದಾಗಬೇಕೆಂದು ಮನವಿ ಮಾಡಿದರು.

ಈ ಹಿಂದೆ ಕಾರ್ಬೈಡ್‌ ಬೆಳೆಸಿ ಮಾವಿನಕಾಯಿಯನ್ನು ಬೇಗ ಹಣ್ಣು ಮಾಡಲಾಗುತ್ತಿತ್ತು. ಇದು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರಿಂದ ಇಥಿಲಿನ್‌ ಬಳಸಿ ಹಣ್ಣು ಮಾಡುವಂತೆ ರೈತರಿಗೆ ಸಲಹೆ ನೀಡಲಾಗುತ್ತಿದೆ. ಈ ರೀತಿ ಹಣ್ಣು ಮಾಡುವ ಒಂದು ಘಟಕಕ್ಕೆ 8 ಲಕ್ಷ ರೂ. ಸಹಾಯಧನ ನೀಡಲಾಗುವುದು.
ಎಂ.ಬಿ.ಲೋಹಿತ್‌,
ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ

ಟಾಪ್ ನ್ಯೂಸ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

1

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.