ಬಾಕಿ ಅರ್ಜಿ ವಿಲೇಗೆ ಕಂದಾಯ ಅದಾಲತ್‌ ಶೀಘ

ಆಡಳಿತ ಯಂತ್ರ ಚುರುಕಾಗಲಿ ಸಾರ್ವಜನಿಕರ ಕೆಲಸಗಳಿಗೆ ತೊಂದರೆಯಾಗದಿರಲಿ

Team Udayavani, Sep 23, 2019, 7:02 PM IST

Udayavani Kannada Newspaper

ಚಿಕ್ಕಮಗಳೂರು: ಅಕ್ರಮ ಸಕ್ರಮ ಯೋಜನೆಯಡಿ ಬಾಕಿ ಉಳಿದಿರುವ ಅರ್ಜಿಗಳನ್ನು ವಿಲೇವಾರಿ ಮಾಡಲು ಶೀಘ್ರದಲ್ಲಿಯೇ ಜಿಲ್ಲೆಯಲ್ಲಿ ಕಂದಾಯ ಅದಾಲತ್‌ ಆಯೋಜಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಕಾರಣಗಳಿಂದಾಗಿ ಜಿಲ್ಲೆಯಲ್ಲಿ ನಮೂನೆ 50, 53, 90ಸಿ, 90ಸಿಸಿ ಗಳಡಿ ಸಲ್ಲಿಸಿರುವ ಅರ್ಜಿಗಳು ಬಾಕಿ ಉಳಿದಿವೆ. ಇವುಗಳನ್ನು ವಿಲೇವಾರಿ ಮಾಡಲು ಕಂದಾಯ ಅದಾಲತ್‌ ಆಯೋಜಿಸಲಾಗುವುದು. ಅಧಿಕಾರಿಗಳಿಗೆ ಕಾಲಮಿತಿ ನಿಗದಿಗೊಳಿಸಿ ತ್ವರಿತಗತಿಯಲ್ಲಿ ಅರ್ಜಿಗಳನ್ನು ವಿಲೇವಾರಿ ಮಾಡಲು ಸೂಚಿಸಲಾಗುವುದು ಎಂದರು.

ಅ.3ಕ್ಕೆ ಸಭೆ: ನಗರಸಭೆಯಲ್ಲಿ ಆಡಳಿತ ಮಂಡಳಿ ಇಲ್ಲದಿರುವುದರಿಂದ ಕೆಲಸ ಕಾರ್ಯಗಳು ಸರಿಯಾದ ರೀತಿಯಲ್ಲಿ ಆಗುತ್ತಿಲ್ಲವೆಂಬುದು ತಮ್ಮ ಗಮನಕ್ಕೆ ಬಂದಿದೆ. ಅದೇ ಪರಿಸ್ಥಿತಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿಯೂ ಇದೆ. ಆಡಳಿತ ಯಂತ್ರವನ್ನು ಚುರುಕುಗೊಳ್ಳಬೇಕು ಹಾಗೂ ಸಾರ್ವಜನಿಕರ ಕೆಲಸ ಕಾರ್ಯಗಳು ಸರಿಯಾಗಿ ಆಗಬೇಕು. ಈ ನಿಟ್ಟಿನಲ್ಲಿ ಅ.3 ರಂದು ನಗರಸಭೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಸಭೆ ಕರೆಯಲಾಗಿದೆ ಎಂದರು.

ನಗರದಲ್ಲಿ ನಡೆಯುತ್ತಿರುವ ಒಳಚರಂಡಿ ಹಾಗೂ ಅಮೃತ್‌ ಯೋಜನೆಯ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಸೂಚಿಸಲಾಗಿದೆ. ಯುಜಿಡಿ ಕಾಮಗಾರಿಯನ್ನು ಜನವರಿ 2020ರೊಳಗೆ ಪೂರ್ಣಗೊಳಿಸುವುದಾಗಿ ಗುತ್ತಿಗೆದಾರರು ತಿಳಿಸಿದ್ದಾರೆ. ಅದೇ ರೀತಿ ಅಮೃತ್‌ ಯೋಜನೆ ಪೂರ್ಣಗೊಳಿಸಲು 2020 ಡಿಸೆಂಬರ್‌ ವರೆಗೂ ಕಾಲಾವಕಾಶವಿದೆ ಎಂದು ತಿಳಿಸಿದರು.

ನಗರದ ಕೆಲವೆಡೆ ಅಕ್ರಮವಾಗಿ ಕಟ್ಟಡಗಳನ್ನು ನಿರ್ಮಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ರವಿ, ತಮ್ಮ ಗಮನಕ್ಕೆ ಬಂದ ಇಂತಹ ಕಟ್ಟಡಗಳ ಕುರಿತು ಕ್ರಮ ಕೈಗೊಳ್ಳಲು ಈ ಹಿಂದೆಯೇ ಸೂಚಿಸಿದ್ದೆ. ಆದರೆ ಈವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ತೆರವುಗೊಳಿಸಿರುವ ಕುರಿತು ನಗರಸಭೆಯವರು ಸಿಡಿಎ ಮೇಲೆ, ಸಿಡಿಎ ನಗರಸಭೆ ಮೇಲೆ ಜವಾಬ್ದಾರಿ ವಹಿಸಿ ಸುಮ್ಮನಾಗುತ್ತಿದೆ. ನಮಗೆ ಯಾರ ಮೇಲೂ ಪ್ರೀತಿಯೂ ಇಲ್ಲ, ಪೂರ್ವಾಗ್ರಹ ಪೀಡಿತರಾಗಿಯೂ ಇಲ್ಲ. ಪ್ರಕರಣಗಳ ಕುರಿತು ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

ಕಟ್ಟಡ ಸರಿಯಾಗಿದ್ದರೆ ಸರಿ ಇದೆ ಎಂಬ ಹಿಂಬರಹ ಕೊಡಿ. ಅಕ್ರಮವಾಗಿದ್ದರೆ ಕಾನೂನು ರೀತಿಯ ಕ್ರಮ ಕೈಗೊಳ್ಳಿ ಎಂಬ ಆದೇಶ ನೀಡಿರುವುದಾಗಿ ಹೇಳಿದರು. ಕಲ್ಯಾಣನಗರದಲ್ಲಿ ಉದ್ಯಾನವನವನ್ನು ನಿವೃತ್ತ ಸರ್ಕಾರಿ ನೌಕರರೊಬ್ಬರು ಒತ್ತುವರಿ ಮಾಡಿ ಮಾರಾಟ ಮಾಡಿದ್ದಾರೆ ಎಂಬ ದೂರು ಬಂದಿದ್ದು, ಈ ಬಗ್ಗೆಯೂ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.

ನಗರದಲ್ಲಿ ಮೆಡಿಕಲ್‌ ಕಾಲೇಜು ತೆರೆಯುವ ಸಂಬಂಧ ದಾಖಲೆಗಳೊಂದಿಗೆ 2 ದಿನಗಳಲ್ಲಿ ಪ್ರಸ್ತಾವನೆ ಹೋಗಲಿದೆ. ಕೇದ್ರದಲ್ಲಿ 25 ರಂದು ಮೆಡಿಕಲ್‌ ಕೌನ್ಸಿಲ್‌ ಆಫ್‌ ಇಂಡಿಯಾದ ಸಭೆ
ನಡೆಯಲಿದೆ. ಆ ಸಭೆಗೆ ಪ್ರಸ್ತಾವನೆ ಸಲ್ಲಿಸುವ ಯತ್ನ ನಡೆಯುತ್ತಿದೆ. ಇಲ್ಲವಾದಲ್ಲಿ ಪುನಃ 2-3 ತಿಂಗಳು ಕಾಯಬೇಕಾಗುತ್ತದೆ. ಸದರಿ ಸಭೆಯಲ್ಲಿ ಕಾಲೇಜು ಆರಂಭಕ್ಕೆ ಒಪ್ಪಿಗೆ ದೊರೆತಲ್ಲಿ ಕೇಂದ್ರ ಸರ್ಕಾರವು ನೋಡಲ್‌ ಅಧಿಕಾರಿಯನ್ನು ನೇಮಿಸುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.