Hill Collapse ತಡೆ ಕಾಮಗಾರಿಗೆ 300 ಕೋಟಿ ರೂ.: ಸಚಿವ ಕೃಷ್ಣ ಬೈರೇಗೌಡ
Team Udayavani, Aug 6, 2024, 1:10 AM IST
ಚಿಕ್ಕಮಗಳೂರು: ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ಗುಡ್ಡಕುಸಿತ ತಡೆಗಟ್ಟುವ ಕಾಮಗಾರಿ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಅವರು 300 ಕೋಟಿ ರೂ. ಬಿಡುಗಡೆ ಮಾಡಲು ಒಪ್ಪಿಗೆ ಸೂಚಿಸಿದ್ದು, ಈ ವರ್ಷ 100 ಕೋಟಿ ರೂ., ಮುಂದಿನ ವರ್ಷ 200 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಸೋಮವಾರ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸುದ್ದಿಗಾರರ ಜತೆ ಮಾತನಾಡಿ, ಹವಾಮಾನ ವೈಪರೀತ್ಯದಿಂದ ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತಿವೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಮಳೆ ಕೊರತೆ ಇತ್ತು. ಜುಲೈ ತಿಂಗಳ 20 ದಿನಗಳಲ್ಲಿ ಎರಡು ತಿಂಗಳು ಆಗಬೇಕಾದ ಮಳೆ ಒಮ್ಮೆಗೇ ಆಗಿದೆ. ಇದರ ಪರಿಣಾಮ ಅನೇಕ ಅನಾಹುತಗಳು ಸಂಭವಿಸಿವೆ ಎಂದರು.
ವರದಿ ನೀಡಿದ ಮೇಲೆ ಕಾಮಗಾರಿ
ಗುಡ್ಡ ಕುಸಿತ ತಡೆಗಟ್ಟುವ ನಿಟ್ಟಿನಲ್ಲಿ ಕಳೆದ ವರ್ಷವೇ ಜಿಯಲಾಜಿಕಲ್ ಸರ್ವೇ ಆಫ್ ಇಂಡಿಯಾದಿಂದ ಸರ್ವೇ ನಡೆಸಿ ವರದಿ ನೀಡಿದ್ದು, ಮಲೆನಾಡು ಜಿಲ್ಲೆಗಳ ಜಿಲ್ಲಾ ಧಿಕಾರಿಗಳಿಗೆ ಕಳುಹಿಸಲಾಗಿದೆ. ಸಂಭವನೀಯ ಗುಡ್ಡ ಕುಸಿಯುವ ಜನವಸತಿ ಪ್ರದೇಶಕ್ಕೆ ತೊಂದರೆಯಾಗುವ ಪ್ರದೇಶವನ್ನು ಗುರುತಿಸಿ ವರದಿ ನೀಡುವಂತೆ ಸೂಚಿಸಿದ್ದು, ವರದಿ ನೀಡಿದ ಮೇಲೆ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.
ಸಿಬಂದಿ ಭರ್ತಿಗೆ ಕ್ರಮ
ಕಂದಾಯ ಇಲಾಖೆಯಲ್ಲಿ ಸಿಬಂದಿ ಕೊರತೆ ಇದೆ. 20 ವಿವಿಧ ಹಂತದ ತಹಶೀಲ್ದಾರ್ ಹುದ್ದೆಗಳಿಗೆ ಪೋಸ್ಟಿಂಗ್ ನೀಡಲು ಸಿದ್ಧತೆ ನಡೆಯುತ್ತಿದೆ. ಒಂದು ಸಾವಿರ ಗ್ರಾಮ ಲೆಕ್ಕಾ ಧಿಕಾರಿಗಳು, 750 ಸರ್ವೇಯರ್ ಹಾಗೂ 34 ಎಡಿಎಲ್ಆರ್ ಹುದ್ದೆಗಳ ಭರ್ತಿಗೆ ಸರಕಾರ ಸಿದ್ಧತೆ ಮಾಡಿಕೊಂಡಿದೆ. ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru ಮುಖ್ಯವಾಹಿನಿಗೆ ಮರಳಿದ ನಕ್ಸಲರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮನವಿ
CT Ravi: ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ
Munirathna ʼರಾಜಕೀಯ ಬಂಧನʼ ಖಂಡನೀಯ: ಬಿ.ವೈ.ರಾಘವೇಂದ್ರ
Chikkamagaluru; ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕ್ ರೈಡ್: ವಿಡಿಯೋ ವೈರಲ್
Chikkamagaluru: ರಾಹುಲ್ ಗಾಂಧಿ ಭಾರತ ವಿರೋಧಿ ನಾಯಕರೆಂಬ ಅನುಮಾನ ಕಾಡುತ್ತಿದೆ: ಸಿ.ಟಿ ರವಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.