ನಾಳೆ ಬೇಲೂರಲ್ಲಿ ಕಾಫಿ ಬೆಳೆಗಾರರ ಸಭೆ

•ಕರ್ನಾಟಕ ಕಾಫಿ ಬೆಳೆಗಾರರ ಒಕ್ಕೂಟದ ಉಪಾಧ್ಯಕ್ಷ ಡಿ.ಎಂ.ವಿಜಯ್‌ ಮಾಹಿತಿ

Team Udayavani, Jun 11, 2019, 2:35 PM IST

Udayavani Kannada Newspaper

ಚಿಕ್ಕಮಗಳೂರು: ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಕಾಫಿ ಬೆಳೆಗಾರರ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ಕುರಿತು ಚರ್ಚಿಸುವ ಸಲುವಾಗಿ ಕಾಫಿ ಬೆಳೆಯುವ ಪ್ರದೇಶಗಳ ಜನಪ್ರತಿನಿಧಿಗಳ ಸಭೆಯನ್ನು ಜೂ. 12ರಂದು ಮಧ್ಯಾಹ್ನ 3ಗಂಟೆಗೆ ಹಾಸನ ಜಿಲ್ಲೆ ಬೇಲೂರಿನ ಪ್ಲಾಟರ್ ಕ್ಲಬ್‌ನಲ್ಲಿ ಕರೆಯಲಾಗಿದೆ ಎಂದು ಕರ್ನಾಟಕ ಕಾಫಿ ಬೆಳೆಗಾರರ ಒಕ್ಕೂಟದ ಉಪಾಧ್ಯಕ್ಷ ಡಿ.ಎಂ.ವಿಜಯ್‌ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಫಿ ಉದ್ಯಮ ಬೆಲೆ ಇಳಿಕೆ, ಹವಾಮಾನ ವೈಪರೀತ್ಯ, ಕಾರ್ಮಿಕರ ಬವಣೆ, ಕಾಡುಪ್ರಾಣಿಗಳ ಉಪಟಳ, ಬ್ಯಾಂಕ್‌ಗಳ ಕಾಟ, ಬೆಳೆ ವಿಮೆ, ಒತ್ತುವರಿ ಸಮಸ್ಯೆಯಿಂದ ಸಂಕಷ್ಟಕ್ಕೆ ಸಿಲುಕಿದೆ ಎಂದು ಹೇಳಿದರು.

ಬೆಳೆಗಾರರು ಕಂಗಾಲು: ಈ ಎಲ್ಲ ಸಮಸ್ಯೆಗಳ ನಡುವೆ ಕಳೆದ 10 ವರ್ಷಗಳಿಂದ ಕಾಫಿ ಧಾರಣೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಾರ್ಮಿಕರ ವೇತನ, ರಸಗೊಬ್ಬರ ಮತ್ತು ಯಂತ್ರೋಪಕರಣಗಳ ಬೆಲೆ ಬಹಳ ಹೆಚ್ಚಾಗಿದೆ. ಕಾಫಿ ಉಪ ಬೆಳೆಯಾದ ಕಾಳು ಮೆಣಸು ಆಮದಿನಿಂದ ಬೆಳೆಗಾರರಿಗೆ ತೀವ್ರ ಅನ್ಯಾಯವಾಗುತ್ತಿದೆ. ಈ ರೀತಿಯ ಹಲವು ಸಮಸ್ಯೆಳಿರುವುದರಿಂದ ಕಾಫಿ ತೋಟಗಳನ್ನು ಮುಂದುವರಿಸಲು ಸಾಧ್ಯವಾಗದೆ ಬೆಳೆಗಾರರು ಕಂಗಾಲಾಗಿದ್ದಾರೆ. ಇದರಿಂದಾಗಿ ಸರ್ಕಾರಕ್ಕೂ ಆದಾಯ ಕಡಿಮೆಯಾಗುತ್ತಿದೆ ಎಂದು ತಿಳಿಸಿದರು.

ಸಾಲದ ಬಡ್ಡಿ ಮನ್ನಾ ಮಾಡಿ: ಕಾಫಿ ಉದ್ಯಮವನ್ನು ದೇಶಾದ್ಯಂತ ಸುಮಾರು 50ಲಕ್ಷ ಜನ ಅವಲಂಬಿಸಿದ್ದಾರೆ. ಉದ್ಯಮದಿಂದ ಪ್ರತಿ ವರ್ಷ ಕೇಂದ್ರ ಸರ್ಕಾರಕ್ಕೆ ಕೋಟ್ಯಂತರ ರೂ. ವಿದೇಶಿ ವಿನಿಮಯ ಬರುತ್ತಿದೆ. ಕಾಫಿ ಉದ್ಯಮವನ್ನು ರಕ್ಷಿಸುವ ಜವಾಬ್ದಾರಿ ಬೆಳೆಗಾರರಿಗೆ ಮಾತ್ರವಲ್ಲದೆ, ಸರ್ಕಾರಕ್ಕೂ ಇದೆ. ಕೂಡಲೇ, ಸರ್ಕಾರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

ಕಳೆದ ಹಲವು ವರ್ಷಗಳಿಂದ ಬೆಳೆಗಾರರು ಮಾಡಿರುವ ಸಾಲವನ್ನು ಮರುಪಾವತಿ ಮಾಡಲು ಸಾಧ್ಯವಾಗಿಲ್ಲ. ಇದರಿಂದಾಗಿ ಹಲವು ಬೆಳೆಗಾರರ ಸಾಲದ ಖಾತೆಗಳು ಎನ್‌ಪಿಎ ಆಗಿದೆ. ಮತ್ತೆ ಕೆಲವು ಬೆಳೆಗಾರರ ವಿರುದ್ಧ ಬ್ಯಾಂಕ್‌ಗಳು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿವೆ. ಕೂಡಲೇ, ಸರ್ಕಾರ ಕಾಫಿ ಬೆಳೆಗಾರರ ವಿರುದ್ಧದ ಪ್ರಕರಣಗಳನ್ನು ವಜಾಗೊಳಿಸಬೇಕು. ಬಡ್ಡಿ ರಹಿತ ಸಾಲ ವಿತರಿಸಬೇಕೆಂದು ಆಗ್ರಹಿಸಿದರು.

ಸಮಸ್ಯೆ ಪರಿಹರಿಸಿ: ಈ ಹಿಂದೆ ವಾಣಿಜ್ಯ ಸಚಿವರಾಗಿದ್ದ ನಿರ್ಮಲಾ ಸೀತಾರಾಮನ್‌ ಅವರು ಈಗ ಹಣಕಾಸು ಸಚಿವರಾಗಿದ್ದಾರೆ. ಅವರಿಗೆ ಕಾಫಿ ಬೆಳೆಗಾರರ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ ಇದೆ. ಹಾಗಾಗಿ, ಬೆಳೆಗಾರರ ಸಮಸ್ಯೆ ಪರಿಹರಿಸಲು ಮುಂದಾಗಬೇಕೆಂದು ಒತ್ತಾಯಿಸಿದರು.

ಕಾಫಿ ಬೆಳೆಗಾರರ ಸಮಸ್ಯೆಗಳ ಕುರಿತು ಜೂ.12 ರಂದು ಮಧ್ಯಾಹ್ನ 3ಗಂಟೆಗೆ ಹಾಸನ ಜಿಲ್ಲೆ ಬೇಲೂರಿನ ಪ್ಲಾಟರ್ ಕ್ಲಬ್‌ನಲ್ಲಿ ಸಭೆ ಕರೆಯಲಾಗಿದೆ. ಸಭೆಗೆ ಕಾಫಿ ಬೆಳೆಯುವ ಪ್ರದೇಶಗಳ ಸಂಸದರಾದ ಶೋಭಾ ಕರಂದ್ಲಾಜೆ, ಪ್ರತಾಪ್‌ ಸಿಂಹ, ಪ್ರಜ್ವಲ್ ರೇವಣ್ಣ ಹಾಗೂ ಸ್ವತಃ ಕಾಫಿ ಬೆಳೆಗಾರರಾದ ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಸಿ.ಟಿ.ರವಿ, ಎಂ.ಪಿ.ಕುಮಾರಸ್ವಾಮಿ, ಟಿ.ಡಿ.ರಾಜೇಗೌಡ, ಸುರೇಶ್‌, ಎಚ್.ಕೆ.ಕುಮಾರಸ್ವಾಮಿ, ಕೆ.ಎಸ್‌. ಲಿಂಗೇಶ್‌, ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್‌, ವಿಧಾನ ಪರಿಷತ್‌ ಉಪ ಸಭಾಪತಿ ಎಸ್‌.ಎಲ್.ಧರ್ಮೇಗೌಡ, ಸದಸ್ಯರಾದ ಎಂ.ಕೆ.ಪ್ರಾಣೇಶ್‌, ಎಸ್‌.ಎಲ್.ಬೋಜೇಗೌಡ, ಗೋಪಾಲಸ್ವಾಮಿ, ಕಾಫಿ ಮಂಡಳಿ ಅಧ್ಯಕ್ಷ ಎಂ.ಎಸ್‌.ಬೋಜೇಗೌಡ ಅವರನ್ನು ಆಹ್ವಾನಿಸಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸುರೇಶ್‌, ಶ್ರೀಧರ್‌, ಮಹೇಶ್‌, ರತೀಶ್‌, ರೇವಣ್ಣ, ನಾರಾಯಣಗೌಡ ಉಪಸ್ಥಿತರಿದ್ದರು.

ಕಾಫಿ ಉದ್ಯಮವನ್ನು ದೇಶಾದ್ಯಂತ ಸುಮಾರು 50ಲಕ್ಷ ಜನ ಅವಲಂಬಿಸಿದ್ದಾರೆ. ಉದ್ಯಮದಿಂದ ಪ್ರತಿ ವರ್ಷ ಕೇಂದ್ರ ಸರ್ಕಾರಕ್ಕೆ ಕೋಟ್ಯಂತರ ರೂ. ವಿದೇಶಿ ವಿನಿಮಯ ಬರುತ್ತಿದೆ. ಕಾಫಿ ಉದ್ಯಮವನ್ನು ರಕ್ಷಿಸುವ ಜವಾಬ್ದಾರಿ ಬೆಳೆಗಾರರಿಗೆ ಮಾತ್ರವಲ್ಲದೆ, ಸರ್ಕಾರಕ್ಕೂ ಇದೆ. ಕೂಡಲೇ, ಸರ್ಕಾರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಬೇಕು. ಕಳೆದ ಹಲವು ವರ್ಷಗಳಿಂದ ಬೆಳೆಗಾರರು ಮಾಡಿರುವ ಸಾಲವನ್ನು ಮರುಪಾವತಿ ಮಾಡಲು ಸಾಧ್ಯವಾಗಿಲ್ಲ. ಇದರಿಂದಾಗಿ ಹಲವು ಬೆಳೆಗಾರರ ಸಾಲದ ಖಾತೆಗಳು ಎನ್‌ಪಿಎ ಆಗಿದೆ. ಮತ್ತೆ ಕೆಲವು ಬೆಳೆಗಾರರ ವಿರುದ್ಧ ಬ್ಯಾಂಕ್‌ಗಳು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿವೆ. ಕೂಡಲೇ, ಸರ್ಕಾರ ಕಾಫಿ ಬೆಳೆಗಾರರ ವಿರುದ್ಧದ ಪ್ರಕರಣಗಳನ್ನು ವಜಾಗೊಳಿಸಬೇಕು. ಬಡ್ಡಿ ರಹಿತ ಸಾಲ ವಿತರಿಸಬೇಕು. ಈ ಹಿಂದೆ ವಾಣಿಜ್ಯ ಸಚಿವರಾಗಿದ್ದ ನಿರ್ಮಲಾ ಸೀತಾರಾಮನ್‌ ಅವರು ಈಗ ಹಣಕಾಸು ಸಚಿವರಾಗಿದ್ದಾರೆ. ಅವರಿಗೆ ಕಾಫಿ ಬೆಳೆಗಾರರ ಸಮಸ್ಯೆ ಕುರಿತು ಮಾಹಿತಿ ಇದೆ. ಬೆಳೆಗಾರರ ಸಮಸ್ಯೆ ಪರಿಹರಿಸಲು ಮುಂದಾಗಬೇಕು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara-Bill

Kottigehara: 35 ವರ್ಷಗಳ ಹಿಂದೆ ಸೇವಿಸಿದ್ದ ಊಟದ ಬಿಲ್‌ ಪಾವತಿ!

13-kudremukh-1

Kudremukh-ಎಸ್.ಕೆ.ಬಾರ್ಡರ್ ರಾಜ್ಯ ಹೆದ್ದಾರಿ; ಗುಂಡಿಗಳ ರಸ್ತೆ

1-ckm

Chikkamagaluru: ಕಿರುಕುಳ, ಮಹಿಳೆ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಸರ್ವೇ ಸಿಬಂದಿ ಆತ್ಮಹತ್ಯೆ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

12

Mudigere: ನೇಣು ಬಿಗಿದುಕೊಂಡು‌ ಆತ್ಮಹ*ತ್ಯೆಗೆ ಶರಣಾದ ಸರ್ವೇ ಅಧಿಕಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.