ಕಾಯ್ದೆ ವಿರುದ್ಧ ಧ್ವನಿ ಎತ್ತದ ಜನಪ್ರತಿನಿಧಿಗಳು: ಅಂಶುಮಂತ್‌


Team Udayavani, Sep 30, 2020, 7:00 PM IST

ಕಾಯ್ದೆ ವಿರುದ್ಧ ಧ್ವನಿ ಎತ್ತದ ಜನಪ್ರತಿನಿಧಿಗಳು: ಅಂಶುಮಂತ್‌

ಎನ್‌ ಆರ್‌ ಪುರ: ಜಿಲ್ಲೆಯ ಜನರ ಬದುಕಿಗೆ ಮಾರಕವಾಗಿರುವ ಪರಿಸರ ಸೂಕ್ಷ್ಮ ವಲಯದ ಬಗ್ಗೆ ಜವಾಬ್ದಾರಿ ಸ್ಥಾನದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಹಾಗೂ ತರೀಕೆರೆಯ ಬಿಜೆಪಿ ಶಾಸಕರು ಸದನದಲ್ಲಿ ಧ್ವನಿ ಎತ್ತಲಿಲ್ಲ ಎಂದು ಜಿಲ್ಲಾ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಡಾ| ಕೆ.ಪಿ. ಅಂಶುಮಂತ್‌ ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಟಿ.ಡಿ. ರಾಜೇಗೌಡರು ಸದನದಲ್ಲಿ ದೊರೆತ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಕ್ಷೇತ್ರದ ಜನರ ಸಮಸ್ಯೆಯ ಬಗ್ಗೆ ಧ್ವನಿ ಎತ್ತುವ ಕೆಲಸ ಮಾಡಿದ್ದಾರೆ ಎಂದರು. ಪರಿಸರ ಸೂಕ್ಷ್ಮವಲಯ, ಮೀಸಲು ಅರಣ್ಯ 4(1) ಅ ಸೂಚನೆ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆಯವರು ಮೌನ ವಹಿಸಿರುವುದು ರೈತಪರ ಕಾಳಜಿ ತೋರಿಸುತ್ತದೆ ಎಂದು ವ್ಯಂಗ್ಯವಾಡಿದರು.

ಮೀಸಲು ಅರಣ್ಯ ಅಧಿಸೂಚನೆ ಬಗ್ಗೆ ಜನರಿಗೆ ಸರಿಯಾದ ಮಾಹಿತಿ ನೀಡಿ ಬದ್ಧತೆಯಿಂದ ಅರಣ್ಯ ವ್ಯವಸ್ಥಾಪನಾ ಅ ಧಿಕಾರಿ ಸ್ಥಳಕ್ಕೆ ಬಂದುಅರ್ಜಿ ಸ್ವೀಕರಿಸಬೇಕೆಂದು ಆಗ್ರಹಿಸಿದರು. ಮೀಸಲು ಅರಣ್ಯಕ್ಕೆ ಆಕ್ಷೇಪಣೆ ಸಲ್ಲಿಸಲು ಕಾಂಗ್ರೆಸ್‌ನಿಂದ ಜನರಿಗೆ ಅರ್ಜಿ ನೀಡಿರುವ ವಿಚಾರದಲ್ಲಿ ಭ್ರಷ್ಟಾಚಾರವಿದೆ ಎಂದಿರುವ ಮಾಜಿ ಶಾಸಕ ಜೀವರಾಜ್‌ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ದೂರಿದರು. ರೈತರಿಗೆ ಭೂಮಿ ಕೊಡುವ ವಿಚಾರದಲ್ಲಿ ದಾಖಲೆಗಳನ್ನು ತಿದ್ದಿ ಲೋಕಾಯುಕ್ತದಲ್ಲಿ ತನಿಖೆ ಎದುರಿಸುತ್ತಿರುವವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವುದು ತಾ ಕಳ್ಳ ಪರರ ನಂಬ ಎಂಬ ಮಾತಿನಂತಿದೆ ಎಂದು ಆರೋಪಿಸಿದರು.

2008ರಲ್ಲಿ ತಾಲೂಕಿನ ರಾವೂರು,ಲಿಂಗಾಪುರ ಆಡುವಳ್ಳಿ ಮತ್ತಿತರ ಗ್ರಾಮಗಳಲ್ಲಿ ಖಾತೆ ಇದ್ದ ನೂರಾರು ಎಕರೆ ಕಂದಾಯ ಭೂಮಿ ಮೀಸಲು ಹಾಗೂ ಕಿರು ಅರಣ್ಯಕ್ಕೆ ಸೇರಿಸುವಾಗ ಶಾಸಕರಾಗಿದ್ದ ಜೀವರಾಜ್‌ ಸದನದಲ್ಲಿ ಏನು ಮಾಡುತ್ತಿದ್ದರುಎಂದು ಪ್ರಶ್ನಿಸಿದರು. ಪ್ರಜಾಪ್ರಭುತ್ವದ ದೇಗುಲವಾಗಿರುವ ಸದನದಲ್ಲಿ ಹಿಂದಿನ ಬಿಜೆಪಿ ಸರ್ಕಾರದಲ್ಲಿನ ಮೂವರು ಸಚಿವರು ಏನು ಮಾಡಿದ್ದರು ಎಂಬುದನ್ನು ಮಾಜಿ ಶಾಸಕರು ನೆನಪಿಸಿಕೊಳ್ಳಲಿ. ಶಾಸಕ ಟಿ.ಡಿ. ರಾಜೇಗೌಡರಿಗೆ ಅತ್ಯಂತ ಕನಿಷ್ಠ ಪದಗಳನ್ನು ಬಳಸಿ ಬೇಜವಾಬ್ದಾರಿಯಿಂದ ಹೇಳಿಕೆ ನೀಡಿರುವ ಮಾಜಿ ಶಾಸಕರಿಗೆ ತಿಳುವಳಿಕೆ ಕೊರತೆಯಿದೆ ಎಂದು ಆರೋಪಿಸಿದರು. ಮುಖಂಡರಾದ ಗೇರುಬೈಲು ನಟರಾಜ್‌, ಸದಾಶಿವ, ಪ್ರಶಾಂತ್‌ ಶೆಟ್ಟಿ ಮತ್ತಿತರರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara-Bill

Kottigehara: 35 ವರ್ಷಗಳ ಹಿಂದೆ ಸೇವಿಸಿದ್ದ ಊಟದ ಬಿಲ್‌ ಪಾವತಿ!

13-kudremukh-1

Kudremukh-ಎಸ್.ಕೆ.ಬಾರ್ಡರ್ ರಾಜ್ಯ ಹೆದ್ದಾರಿ; ಗುಂಡಿಗಳ ರಸ್ತೆ

1-ckm

Chikkamagaluru: ಕಿರುಕುಳ, ಮಹಿಳೆ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಸರ್ವೇ ಸಿಬಂದಿ ಆತ್ಮಹತ್ಯೆ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

12

Mudigere: ನೇಣು ಬಿಗಿದುಕೊಂಡು‌ ಆತ್ಮಹ*ತ್ಯೆಗೆ ಶರಣಾದ ಸರ್ವೇ ಅಧಿಕಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.