![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Mar 11, 2022, 4:42 PM IST
ಕೊಟ್ಟಿಗೆಹಾರ: ಬಾಳೂರು ಹೋಬಳಿಯ ಕೂವೆ ಗ್ರಾಪಂ ವ್ಯಾಪ್ತಿಯ ಹೊಳೆಕೂಡಿಗೆ ಗ್ರಾಮದಲ್ಲಿ ಬುಧವಾರ ರಾತ್ರಿ ದಾಳಿ ನಡೆಸಿರುವ ಕಾಡಾನೆಗಳು ರೈತರ ಬಾಳೆ ತೋಟವನ್ನು ತುಳಿದು ನಾಶ ಮಾಡಿವೆ.
ಹೊಳೆಕೂಡಿಗೆಯ ಬಾಸಮ್ಮ ಹಾಗೂ ರಮೇಶ ಅವರ ಎರಡು ತೋಟಗಳಲ್ಲಿ ಮೂರು ಕಾಡಾನೆಗಳು ಸಂಚರಿಸಿ ಬಾಳೆಗಿಡಗಳನ್ನು ತಿಂದು ನಾಶ ಮಾಡಿವೆ. ತೋಟಗಳಲ್ಲಿಯೇ ಲದ್ದಿ ಹಾಕಿ ಹೋಗಿವೆ. ಕಳೆದ ಕೆಲವು ದಿನಗಳ ಹಿಂದೆಯೂ ಈ ಭಾಗದಲ್ಲಿ ಕಾಡಾನೆಗಳು ದಾಳಿ ನಡೆಸಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿತ್ತು.
ಮತ್ತೆ ಕಾಡಾನೆ ದಾಳಿ ಗ್ರಾಮದಲ್ಲಿ ಮುಂದುವರಿದಿದ್ದು ಗ್ರಾಮಸ್ಥರು ಬೆಳೆ ಕಳೆದುಕೊಂಡು ನಷ್ಟ ಅನುಭವಿಸುವಂತಾಗಿದೆ.
You seem to have an Ad Blocker on.
To continue reading, please turn it off or whitelist Udayavani.