Mudigere: ರಾತ್ರಿ ಬೆಳಗಾಗುವುದರೊಳಗೆ ಕಿಡಿಗೇಡಿಗಳಿಂದ ವಾಮಾಚಾರ, ಬೆಚ್ಚಿಬಿದ್ದ ಮಲೆನಾಡು
Team Udayavani, Oct 19, 2024, 10:25 AM IST
ಚಿಕ್ಕಮಗಳೂರು: ಕಿಡಿಗೇಡಿಗಳ ಗುಂಪೊಂದು ಬೆಳ್ಳಂಬೆಳಗ್ಗೆ ವಾಮಾಚಾರ ನಡೆಸಿರುವ ಘಟನೆ ಮೂಡಿಗೆರೆ ತಾಲೂಕಿನ ಹೆಡದಾಳು ಗ್ರಾಮದಲ್ಲಿ ಶನಿವಾರ(ಅ.19) ಬೆಳಕಿಗೆ ಬಂದಿದ್ದು ಇದರಿಂದ ಮಲೆನಾಡಿನ ಜನ ಬೆಚ್ಚಿ ಬಿದ್ದಿದ್ದಾರೆ.
ಶನಿವಾರ ಮುಂಜಾನೆ ಸುಮಾರು ಐದು ಗಂಟೆಯ ಸುಮಾರಿಗೆ ಹಡೆದಾಳು ಗ್ರಾಮದ ಮೂರೂ ರಸ್ತೆ ಕೂಡುವ ಜಾಗದಲ್ಲಿ ಕಿಡಿಗೇಡಿಗಳ ಗುಂಪು ಬಾಳೆಎಲೆ ಮೇಲೆ ಹಸಿರು ಬಳೆ ಮೇಲೆ ಮಣ್ಣಿನ ಬೊಂಬೆ ಇಟ್ಟು ವಾಮಾವಾರ(ಬಾಳೆಎಲೆ, ಹಸಿರು ಬಳೆ, ಮಡಕೆಗೆ ಕಾಳಿ ರೂಪ ನೀಡಿ ಮಾಟ) ನಡೆಸಿದ್ದಾರೆ.
ಹೆಡದಾಳು ಗ್ರಾಮದ ಚೇತನ್ ಎಂಬುವರ ಮನೆ ಮುಂದೆಯೇ ವಾಮಾಚಾರ ನಡೆದಿದ್ದು ಇದನ್ನು ಈ ಹಳ್ಳಿಯ ಜನರು ಕಂಡಿದ್ದಾರೆ, ಆದರೆ ವಾಮಾಚಾರಕ್ಕೆ ಹೆದರಿ ಮನೆಯಿಂದ ಹೊರಬರದ ಹಳ್ಳಿಗರು.
ಸ್ಥಳದಲ್ಲಿ ಅರಿಶಿನ-ಕುಂಕುಮ, ಕಾಯಿ, ಹಣ್ಣು ಸೇರಿದಂತೆ ವಿವಿಧ ವಸ್ತುಗಳು ಪತ್ತೆಯಾಗಿದ್ದು ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ.
ಇದನ್ನೂ ಓದಿ: Tender Scam: ಹಿರಿಯ ಐಎಎಸ್ ಅಧಿಕಾರಿ, ಮಾಜಿ ಆರ್ಜೆಡಿ ಶಾಸಕ ಅರೆಸ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಲಿ: ಸಂಸದ ಯದುವೀರ್
Kalaburagi ಕಾರಾಗೃಹದಲ್ಲಿ ರಾಜಾತಿಥ್ಯ ಪ್ರಕರಣ: ಇಬ್ಬರು ಜೈಲಾಧಿಕಾರಿಗಳ ಅಮಾನತ್ತು
ByPoll: ಚನ್ನಪಟ್ಟಣ ಕ್ಷೇತ್ರದ ಬಗ್ಗೆ ಹಪಾಹಪಿ ಇಲ್ಲ; ಎನ್ಡಿಎ ನಿರ್ಧಾರಕ್ಕೆ ಬದ್ಧ: ನಿಖಿಲ್
Mudhol: ಘಟಪ್ರಭಾ ನದಿಗೆ ಹರಿದು ಬಂದ ಹೆಚ್ಚಿನ ನೀರು… ಮುಳುಗಿದ ಬ್ಯಾರೇಜ್
Vijayapura: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಕೇಸ್ ದಾಖಲು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.