ಸಿದ್ದರಾಮಯ್ಯ ತಾಲಿಬಾನ್ ಗೆ ಕಡಿಮೆ ಇಲ್ಲದ ಮನಸ್ಥಿತಿಯವರು: ಸಿ.ಟಿ.ರವಿ ಟೀಕೆ


Team Udayavani, Feb 28, 2022, 3:34 PM IST

ಸಿದ್ದರಾಮಯ್ಯ ತಾಲಿಬಾನ್ ಗೆ ಕಡಿಮೆ ಇಲ್ಲದ ಮನಸ್ಥಿತಿಯವರು: ಸಿ.ಟಿ.ರವಿ ಟೀಕೆ

ಚಿಕ್ಕಮಗಳೂರು: ಕೇಸರಿ ಶಾಲು ತಿರಸ್ಕರಿಸುವ ಸಿದ್ದರಾಮಯ್ಯ ಮುಸ್ಲಿಂ ಧರ್ಮದ ಟೋಪಿ ಧರಿಸುತ್ತಾರೆ. ಕೇಸರಿ ಪೇಟವನ್ನು ನೋಡಿದರೆ ಸಿದ್ದರಾಮಯ್ಯ ಉರಿದು ಬೀಳುತ್ತಾರೆ. ಸಿದ್ದರಾಮಯ್ಯ ಒಬ್ಬರು ಮತೀಯವಾದಿ, ಸಿದ್ದರಾಮಯ್ಯ ತಾಲಿಬಾನ್ ಕ್ಕಿಂತ ಕಡಿಮೆ ಇಲ್ಲದ ಮನಸ್ಥಿತಿಯವರು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕಿಡಿಕಾರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿವಾದದ ಮೂಲಕ ಕಾಂಗ್ರೆಸ್ ಮತಿಯ ವಾದವನ್ನು ಹೊರಹಾಕಿದೆ. ಕಾಂಗ್ರೇಸ್ ನ ಜಾತ್ಯತೀತವಾದ ಎನ್ನುವುದು ನಾಟಕ, ಹಿಂದೂಗಳನ್ನು ಮೋಸ ಮಾಡುವುದಕ್ಕೆ ಮಾತ್ರ ಉಪಯೋಗವಾಗುತ್ತದೆ ಎಂದರು.

ಕೇಸರ ಪೇಟ ನೋಡಿದರೆ ಉರಿದುಬೀಳುವ ಸಿದ್ದರಾಮಯ್ಯನವರು ಸ್ಕಲ್ ಟೋಪಿ ಹಾಕಿಕೊಂಡು ಹೋಗಿದ್ದು ನೋಡಿದಾಗ ಅವರು ಜಾತ್ಯಾತೀತವೆಂದು ಯಾವ ಲೇಬಲ್ ನಲ್ಲಿ ಬರೆದುಕೊಂಡರೂ ನಂಬಲಾಗದು. ಕುಂಕುಮ ಕಂಡರೆ ಹೆದರಿಕೆಯಾಗುತ್ತದೆಂದು ಹೇಳಿದ್ದರು. ಅವರ ತಾಯಿಯ ಹಣೆಯಲ್ಲಿ ಕುಂಕುಮ ಇದೆ, ಪತ್ನಿಯ ಹಣೆಮೇಲೂ ಕುಂಕಮವಿದೆ. ಸೊಸೆಯ ಹಣೆಮೇಲೂ ಕುಂಕುಮವಿದೆ. ಅವರಿಗೆ ಹೆಣ್ಣು ಮಕ್ಕಳಿದ್ದರೆ ಅವರ ಹಣೆಯಲ್ಲಿಯೂ ಕುಂಕುಮ ಇದೆ ಎಂದರು.

ಕುಂಕುಮದಿಂದ ಜಗತ್ತಿನಲ್ಲಿ ಎಲ್ಲೂ ಭಯೋತ್ಪಾದನೆ ನಡೆದಿಲ್ಲ. ಸ್ಕಲ್ ಟೋಪಿಯ ಜನ ತಮ್ಮವರನ್ನು ಕೊಂದಿದ್ದಾರೆ ಬೇರೆಯವರನ್ನೂ ಕೊಂದಿದ್ದಾರೆ, ಬಹುಶಃ ಇವನ್ನೆಲ್ಲ ನೋಡಿದರೆ ಅವರ ತಂದೆ ಸಿದ್ದರಾಮಯ್ಯ ಎಂದು ಹೆಸರು ಇಡುತ್ತಿರಲಿಲ್ಲ. ಹಿಂದೆ ರಾಮನ ಹೆಸರಿದೆ ಎಂದಿದ್ದರು, ಅಂದಿನ ಕಾಲದ ಸಮಾಜ ಸುಧಾರಕ ಸಿದ್ದರಾಮನ ಹೆಸರಿದೆ. ಆದರೆ ಇವರು ನಡೆದುಕೊಳ್ಳುತ್ತಿರುವ ರೀತಿಗೂ ಅವ್ರಿಗೂ ಸಂಬಂಧವಿಲ್ಲ ಎನ್ನುವುದು ವ್ಯಕ್ತವಾಗುತ್ತದೆ ಎಂದು ಸಿ.ಟಿ ರವಿ ಟೀಕೆ ಮಾಡಿದರು.

ಇದನ್ನೂ ಓದಿ:ಯುದ್ಧದಿಂದ ಭಾರತದ ಕೃಷಿ ಕ್ಷೇತ್ರದ ಮೇಲೆ ಪರಿಣಾಮದ ಬಗ್ಗೆ ಚಿಂತೆ

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿ.ಟಿ ರವಿ, ರಾಜಕಾರಣ ಬಿಟ್ಟರೆ ಬೇರೆನೂ ಇಲ್ಲವೆಂದು ಎಲ್ಲರಿಗೂ ಸ್ಪಷ್ಟವಾಗಿದೆ. ನಮ್ಮ ಪ್ರಶ್ನೆಗಳಿಗೆ ಇವತ್ತಿನವರೆಗೂ ಉತ್ತರ ಕೊಟ್ಟಿಲ್ಲ. ನೀವು ಇಲ್ಲಿ ಪಾದಯಾತ್ರೆ ನಾಟಕವನ್ನು ಮಾಡುವುದರ ಬದಲಿಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನಿಯೋಗ ಕರೆದುಕೊಂಡು ತಮಿಳುನಾಡಗೆ ಹೋಗಿ. ಅಲ್ಲಿರುವ ಚಿದಂಬರಂ, ಡಿಎಂಕೆ ಸ್ಟಾಲಿನ್ ಅವರನ್ನು ಒಪ್ಪಿಸಿದರೆ ಸುಲಭವಾಗುತ್ತದೆ. ಅವರು ಅಕ್ಷೇಪಣೆ ಇಲ್ಲವೆಂದರೆ ಎಲ್ಲಾ ರೀತಿಯ ಅಡೆತಡೆಗಳು ನಿವಾರಣೆಯಾಗುತ್ತದೆ. ಅದನ್ನು ಮಾಡುವುದು ಬಿಟ್ಟು ಪಾದಯಾತ್ರೆ ಮಾಡುತ್ತಿದ್ದಾರೆ. ಪಾದಯಾತ್ರೆ ಕೇವಲ ದೈಹಿಕ ಕಸರತ್ತು ಕೊಡಬಹುದು ಎಂದರು.

ತಮಿಳುನಾಡನ್ನು ಒಪ್ಪಿಸುವ ತಾಕತ್ತು ಸಿದ್ದರಾಮಯ್ಯನವರಿಗಿದೆ. ಸಿದ್ದರಾಮಯ್ಯ ಗುಟುರು ಹಾಕಿದರೆ ಸೋನಿಯಾ ಗಾಂಧಿ ಅಲರ್ಟ್ ಆಗುತ್ತಾರೆ. ಸೋನಿಯಾ ಗಾಂದಿ ಮಾತು ಹೇಳಿದರೆ ಚಿದಂಬರಂ ತೆಗೆದುಹಾಕಲ್ಲ. ಚಿದಂಬರಂ ಒಂದು ಮಾತು ಹೇಳಿದರೆ ಸ್ಟಾಲಿನ್ ತೆಗೆದುಹಾಕಲ್ಲ. ಇದು ಸುಲಭದಲ್ಲಿ ಅಗಲಿರುವ ಸಂಗತಿ. ಆದರೆ ಇಲ್ಲಿ ಮಾಡುತ್ತಿರುವುದು ರಾಜಕಾರಣ ಅದು ಬಿಟ್ಟು ಬೇರೆನೂ ಇಲ್ಲ ಎಂದು ಸಿ.ಟಿ ರವಿ ಹೇಳಿದರು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara-Bill

Kottigehara: 35 ವರ್ಷಗಳ ಹಿಂದೆ ಸೇವಿಸಿದ್ದ ಊಟದ ಬಿಲ್‌ ಪಾವತಿ!

13-kudremukh-1

Kudremukh-ಎಸ್.ಕೆ.ಬಾರ್ಡರ್ ರಾಜ್ಯ ಹೆದ್ದಾರಿ; ಗುಂಡಿಗಳ ರಸ್ತೆ

1-ckm

Chikkamagaluru: ಕಿರುಕುಳ, ಮಹಿಳೆ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಸರ್ವೇ ಸಿಬಂದಿ ಆತ್ಮಹತ್ಯೆ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

12

Mudigere: ನೇಣು ಬಿಗಿದುಕೊಂಡು‌ ಆತ್ಮಹ*ತ್ಯೆಗೆ ಶರಣಾದ ಸರ್ವೇ ಅಧಿಕಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.