ಗೋಣಿಬೀಡು ಠಾಣೆಗೆ ಐಜಿಪಿ ದೇವ್ಜ್ಯೋತಿ ರೇ ಭೇಟಿ
Team Udayavani, May 25, 2021, 8:57 PM IST
ಚಿಕ್ಕಮಗಳೂರು: ಮೂಡಿಗೆರೆ ತಾಲೂಕು ಗೋಣಿಬೀಡು ಠಾಣೆಯ ಪಿಎಸ್ಐ ಅರ್ಜುನ್ ಯುವಕನ ಮೇಲೆ ದೌರ್ಜನ್ಯ ಎಸಗಿ ಮೂತ್ರ ಕುಡಿಸಿದ್ದಾರೆ ಎಂಬ ಆರೋಪದ ಹಿನ್ನೆಲೆ ಯ ಲ್ಲಿ ಪಶ್ಚಿಮ ವಲಯ ಐಜಿಪಿ ದೇವ್ಜ್ಯೋತಿ ರೇ ಸೋಮ ವಾರ ಗೋಣಿಬೀಡು ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಎಂ.ಎಚ್. ಅಕ್ಷಯ್, ತರೀಕೆರೆ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಡಿವೈಎಸ್ಪಿಗಳೊಂದಿಗೆ ಗೋಣಿಬೀಡು ಪೊಲೀಸ್ ಠಾಣೆಗೆ ಭೇಟಿ ನೀಡಿ ಯುವಕ, ಯುವಕನ ಸಂಬಂ ಧಿಕರು, ದಲಿತ ಸಂಘಟನೆ ಮುಖಂಡರ ಹೇಳಿಕೆ ಪಡೆದುಕೊಂಡು, ಆರೋಪ ಎದುರಿಸುತ್ತಿರುವ ಠಾಣಾಧಿ ಕಾರಿ, ಸಿಬ್ಬಂದಿಯಿಂದ ಮಾಹಿತಿ ಪಡೆದು ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದರು.
ಈಗಾಗಲೇ ಪಿಎಸ್ಐ ಅರ್ಜುನ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಅಮಾನತುಗೊಳಿಸಿ ಉಡುಪಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿದ್ದು ನಿಷ್ಪಕ್ಷಪಾತವಾದ ತನಿಖೆ ನಡೆಸಲಿದ್ದಾರೆ.
ನೊಂದವರಿಗೆ ನ್ಯಾಯ ಸಿಗಲಿದೆ. ಪೊಲೀಸರು ಮತ್ತು ಸಿಐಡಿ ತನಿಖೆಗೆ ಪೂರ್ಣ ಸಹಕಾರ ನೀಡಬೇಕೆಂದು ಯುವಕ ಪುನೀತ್ ಹಾಗೂ ದಲಿತ ಸಂಘಟನೆಗಳ ಮುಖಂಡರಿಗೆ ಐಜಿಪಿ ದೇವ್ ಜ್ಯೋತಿ ರೇ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ
CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ
Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!
Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.