ಶೇ. 7ಕ್ಕೆ ಇಳಿದ ಕಾಫಿನಾಡಿನ ಕೋವಿಡ್‌ ಪಾಸಿಟಿವಿಟಿ ರೇಟ್‌


Team Udayavani, Jun 18, 2021, 10:28 PM IST

18-16

ಚಿಕ್ಕಮಗಳೂರು: ಕೋವಿಡ್‌ ಪಾಸಿಟಿವಿಟಿ ರೇಟ್‌ನಲ್ಲಿ ಚಿಕ್ಕಮಗಳೂರು ಜಿಲ್ಲೆ ಇತ್ತೀಚೆಗೆ ರಾಜ್ಯದಲ್ಲೇ ಮೊದಲ ಸ್ಥಾನ ಪಡೆದುಕೊಂಡು ಇಡೀ ರಾಜ್ಯದ ಗಮನ ಸೆಳೆದಿತ್ತು. ಕಾಫಿನಾಡಿನಲ್ಲಿ ಸೋಂಕಿನ ಪಾಸಿಟಿವಿಟಿ ರೇಟ್‌ ಸದ್ಯ ಶೇ.7ಕ್ಕೆ ಇಳಿಕೆ ಕಂಡಿದ್ದು ಜಿಲ್ಲೆಯ ಜನತೆಯಲ್ಲಿ ನೆಮ್ಮದಿ ಮೂಡಿಸಿದೆ. ಸೋಂಕಿನ ಪ್ರಮಾಣ ಇದೇ ರೀತಿ ಕಡಿಮೆಯಾದರೆ ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್‌ ಒಂದು ವಾರದಲ್ಲಿ ಶೇ.5ಕ್ಕೆ ಇಳಿಕೆಯಾಗುವ ಆಶಾಭಾವನೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿ ಕಾರಿಗಳು ಮತ್ತು ವೈದ್ಯರು ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್‌ ಹೆಚ್ಚಳಗೊಳ್ಳುತ್ತಿದ್ದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ|ಕೆ.ಸುಧಾಕರ್‌ ಜಿಲ್ಲೆಯಲ್ಲಿ ತೆರೆಯಲಾಗಿರುವ ಕೋವಿಡ್‌ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದರು.

ಜಿಪಂ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಮತ್ತು ಜಿಲ್ಲಾ ಮಟ್ಟದ ಅಧಿ ಕಾರಿಗಳ ಸಭೆ ನಡೆಸಿ ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದರು. ಎಚ್ಚೆತ್ತುಕೊಂಡ ಜಿಲ್ಲಾಡಳಿತ ಹಗಲಿರುಳು ಶ್ರಮಿಸುತ್ತಿದ್ದು ಪಾಸಿಟಿವಿಟಿ ರೇಟ್‌ ಶೇ.7ಕ್ಕೆ ತರುವಲ್ಲಿ ಯಶಸ್ವಿಯಾಗಿದೆ. ಜೂ.1ರಂದು ಜಿಲ್ಲೆಯಲ್ಲಿ 504 ಪಾಸಿಟಿವ್‌ ಪ್ರಕರಣ ಪತ್ತೆಯಾಗಿತ್ತು. ಜೂ.2ರಂದು214, ಜೂ.3ರಂದು742, ಜೂ.4ರಂದು 595, ಜೂ.5ರಂದು378, ಜೂ.6ರಂದು 416, ಜೂ.7ರಂದು 365, ಜೂ.8ರಂದು 287, ಜೂ.9ರಂದು 339, ಜೂ.10ರಂದು 397, ಜೂ.11ರಂದು 332, ಜೂ.12ರಂದು 342, ಜೂ.13ರಂದು 223, ಜೂ.14ರಂದು 185, ಜೂ.15ರಂದು 224 ಹಾಗೂ ಜೂ.16ರಂದು 254 ಕೋವಿಡ್‌ ಪಾಸಿಟಿವ್‌ ಪ್ರಕರಣ ಪತ್ತೆಯಾಗಿದೆ.

ಈ ಪಾಸಿಟಿವ್‌ ಸಂಖ್ಯೆಗಳನ್ನು ಗಮನಿಸಿದಾಗ ಸೋಂಕು ನಿಧಾನವಾಗಿ ಕ್ಷೀಣಿಸುತ್ತಿದೆ ಎಂಬುದು ಖಾತ್ರಿಯಾಗುತ್ತಿದೆ. ಕೋವಿಡ್‌ ಪರೀಕ್ಷೆಯನ್ನು ಜಿಲ್ಲೆಯಲ್ಲಿ ಹೆಚ್ಚಿಸಲಾಗಿದ್ದು ಪ್ರತೀ ದಿನ ನಾಲ್ಕು ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಮತ್ತು ಸೋಂಕಿತರ ಸಂಪರ್ಕಕ್ಕೆ ಬರುವ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಪರೀಕ್ಷೆಗೆ ತಾಲೂಕು ಕೇಂದ್ರಗಳಲ್ಲಿ  ಕೋವಿಡ್‌ ಆಸ್ಪತ್ರೆಗಳಲ್ಲಿ ವೆಂಟಿಲೇಟರ್‌ಗಳಿಗೆ ಚಾಲನೆ ನೀಡಲಾಗಿದೆ. ಈ ವಾರದಲ್ಲೇ ಕೋವಿಡ್‌ ಸೋಂಕಿನ ಪಾಸಿಟಿವಿಟಿ ಪ್ರಮಾಣ ಶೇ.5ಕ್ಕೆ ಇಳಿಕೆಯಾಗಲಿದೆ ಎಂಬ ಆಶಾಭಾವನೆಯನ್ನು ಹೊಂದಿದ್ದು ಜಿಲ್ಲೆಯ ಜನತೆ ನಿಟ್ಟುಸಿರುವ ಬಿಡುವಂತೆ ಮಾಡಿದೆ. ಸೋಂಕು ಪ್ರಮಾಣ ಇಳಕೆಯಾಗುತ್ತಿದೆ ಎಂದು ಜನರು ಮೈಮರೆಯಬಾರದು. ಜಾಗ್ರತೆ ವಹಿಸಬೇಕಿದೆ.

ಜಿಲ್ಲೆಯಲ್ಲಿ ಕೋವಿಡ್‌ ಪಾಸಿಟಿವಿಟಿ ರೇಟ್‌ ಕಡಿಮೆಯಾಗುತ್ತಿದೆ. ಶೇ.7ಕ್ಕೆ ಇಳಿಕೆಯಾಗಿದೆ. ಈ ವಾರದಲ್ಲೇ ಶೇ.5ಕ್ಕೆ ಇಳಿಕೆಯಾಗಲಿದೆ. ಕೋವಿಡ್‌ ಪರೀಕ್ಷೆಯ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಬುಧವಾರ 1,400 ಜನರನ್ನು ಆರ್‌ಟಿಪಿಸಿಆರ್‌ ಪರೀಕ್ಷೆಗೆ ಒಳಪಡಿಸಿದ್ದು, 160 ಪಾಸಿಟಿವ್‌ ಬಂದಿದೆ. ಸರ್ಕಾರ ನಿಗದಿಪಡಿಸಿದ ಆದ್ಯತೆ ಮೇರೆಗೆ ಲಸಿಕೆ ವಿತರಣೆ ಮಾಡಲಾಗುತ್ತಿದೆ. ಮೂರನೇ ಅಲೆಯ ನಿಯಂತ್ರಣಕ್ಕೂ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ತಜ್ಞ ವೈದ್ಯರ ಸಭೆಗಳನ್ನು
ಮಾಡಲಾಗಿದೆ. ಜಿಲ್ಲೆಯಲ್ಲಿ 11ಬ್ಲಾಕ್‌ ಫಂಗಸ್‌ ಪ್ರಕರಣ ಕಂಡುಬಂದಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಸೋಂಕಿನ ಪಾಸಿಟಿವಿಟಿ ಕಡಿಮೆಯಾಗುತ್ತಿದ್ದು. ಈ ವಾರಾಂತ್ಯದಲ್ಲಿ ಕಡಿಮೆಯಾಗಲಿದೆ.
ಡಾ| ಉಮೇಶ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

29

Gujjadi: ನಾಪತ್ತೆಯಾಗಿದ್ದ ವ್ಯಕ್ತಿ ಶವ ಹೊಳೆಯಲ್ಲಿ ಪತ್ತೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.