ನಾಳೆಯಿಂದ ಲಾಕ್‌ಡೌನ್‌ ನಿಯಮ ಸಡಿಲಿಕೆ


Team Udayavani, Jun 27, 2021, 9:26 PM IST

27-17

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ ಲಾಕ್‌ಡೌನ್‌ ನಿಯಮಗಳನ್ನು ಸಡಿಲಿಸಿ ಬೆಳಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ವ್ಯಾಪಾರ- ವಹಿವಾಟು ನಡೆಸಲು ಅವಕಾಶ ನೀಡಿ ಜಿಲ್ಲಾ ಧಿಕಾರಿ ಕೆ.ಎನ್‌. ರಮೇಶ್‌ ಆದೇಶ ಹೊರಡಿಸಿದ್ದಾರೆ.

ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಆದೇಶವು ಜೂ.28ರಿಂದ ಜು.5ರ ವರೆಗೆ ಜಾರಿಯಲ್ಲಿದ್ದು ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತದೆ. ಕೈಗಾರಿಕೆ ಮತ್ತು ಉತ್ಪಾದನಾ ಘಟಕಗಳು ಶೇ.50ರಷ್ಟು ಸಿಬ್ಬಂದಿಗಳನ್ನು ಬಳಸಿಕೊಂಡು ಕಾರ್ಯ ನಿರ್ವಹಿಸಬಹುದಾಗಿದೆ. ಜಿಲ್ಲೆಯಲ್ಲಿನ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿರುವ ಎಲ್ಲಾ ಅಂಗಡಿ- ಮುಂಗಟ್ಟುಗಳು ಬೆಳಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ತೆರೆಯಲು ಅವಕಾಶ ನೀಡಲಾಗಿದೆ.

ಆದರೆ ಹವಾ ನಿಯಂತ್ರಿತ ಶಾಪ್‌ ಗಳು, ಮಾಲ್‌ಗ‌ಳು ಕಾರ್ಯ ನಿರ್ವಹಿಸುವುದನ್ನು ನಿರ್ಬಂ ಧಿಸಲಾಗಿದೆ ಎಂದು ತಿಳಿಸಿದ್ದಾರೆ. ಸಾರ್ವಜನಿಕರು ವಿನಾಕಾರಣ ಮನೆಯಿಂದ ಹೊರಬರುವುದನ್ನು ತಪ್ಪಿಸಲು ದಿನದ 24 ಗಂಟೆಯೂ ಹೋಮ್‌ ಡೆಲಿವರಿಗೆ ಅವಕಾಶ ನೀಡಲಾಗಿದೆ. ಹೊಟೇಲ್‌, ರೆಸ್ಟೋರೆಂಟ್‌ ಬಾರ್‌, ಕ್ಲಬ್‌ಗಳು ಬೆಳಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ಕಾರ್ಯ ನಿರ್ವಹಿಸಲು ಅವಕಾಶ ನೀಡಿದ್ದು ಶೇ.50ರಷ್ಟು ಸಾಮರ್ಥ್ಯದಷ್ಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಕುಳಿತು ಆಹಾರ, ಪಾನೀಯಗಳ ಸೇವನೆಯನ್ನು ನಿರ್ಬಂಧಿ ಸಲಾಗಿದೆ ಎಂದು ಹೇಳಿದ್ದಾರೆ.

ಲಾಡ್ಜ್, ರೆಸಾರ್ಟ್‌ಗಳಲ್ಲಿ ಶೇ.50ರಷ್ಟು ಬಳಕೆಗೆ ಅವಕಾಶವಿದೆ. ಎಲ್ಲಾ ರೀತಿಯ ಕಾಮಗಾರಿ ನಡೆಸಲು ಅನುಮತಿಸಲಾಗಿದೆ. ನಿರ್ಮಾಣ ಕಾಮಗಾರಿ ಸಲಕರಣೆಗಳಿಗೆ ಸಂಬಂಧಿಸಿದ ಅಂಗಡಿ- ಮುಂಗಟ್ಟುಗಳಲ್ಲಿ ವ್ಯವಹಾರ ನಡೆಸಬಹು ದಾಗಿದೆ. ಬೆಳಗ್ಗೆ 5 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ವಾಯು ವಿಹಾರ ಉದ್ದೇಶಕ್ಕಾಗಿ ಉದ್ಯಾನವನಗಳನ್ನು ತೆರೆಯಲು ಅವಕಾಶ ನೀಡಿದ್ದು, ಗುಂಪು ಚಟುವಟಿಕೆಗಳನ್ನು ನಿರ್ಬಂ ಧಿಸಲಾಗಿದೆ. ಹವಾ ನಿಯಂತ್ರಿತವಲ್ಲದ ವ್ಯಾಯಾಮ ಶಾಲೆಗಳಲ್ಲಿ ಶೇ.50ರಷ್ಟು ಬಳಕೆಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಟ್ಯಾಕ್ಸಿ ಮತ್ತು ಆಟೋರಿûಾಗಳು ಗರಿಷ್ಟ ಎರಡು ಪ್ರಯಾಣಿಕರಿಗೆ ಸೀಮಿತಗೊಳಿಸಿ ಕಾರ್ಯ ನಿರ್ವಹಿಸಲು ಅನುಮತಿಸಿದೆ. ಅದರೊಂದಿಗೆ ಎಲ್ಲ ಹೊರಾಂಗಣ ಕ್ರೀಡಾ ಚಟುವಟಿಕೆಗಳನ್ನು ಪ್ರೇಕ್ಷಕರು ಹೊಂದಿಲ್ಲದಂತೆ ನಿಯಮಾನುಸಾರ ನಡೆಸಬಹುದಾಗಿದೆ. ಎಲ್ಲಾ ರೀತಿಯ ಸರ್ಕಾರಿ ಮತ್ತು ಖಾಸಗಿ ಕಚೇರಿಗಳು ಶೇ.50 ಸಿಬ್ಬಂದಿಗಳನ್ನು ಒಳಗೊಂಡು ಕಾರ್ಯ ನಿರ್ವಹಿಸಬಹುದಾಗಿದೆ ಎಂದು ಹೇಳಿದ್ದಾರೆ.

ರಾತ್ರಿ ಕರ್ಫ್ಯೂ ವೇಳೆಯಲ್ಲಿ ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ಅಗತ್ಯ ಚಟುವಟಿಕೆ ಹೊರತುಪಡಿಸಿ ಸಾರ್ವಜನಿಕರ ಸಂಚಾರವನ್ನು ಕಟ್ಟುನಿಟ್ಟಾಗಿ ನಿರ್ಬಂಧಿ ಸಲಾಗಿದೆ. ರಾತ್ರಿ ವೇಳೆ ಕಾರ್ಯ ನಿರ್ವಹಿಸುವ ಕೈಗಾರಿಕೆಗಳು, ಕಂಪೆನಿಗಳು, ಸಂಸ್ಥೆಗಳು ಕಾರ್ಯ ನಿರ್ವಹಿಸಲು ಅನುಮತಿಸಲಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

29

Gujjadi: ನಾಪತ್ತೆಯಾಗಿದ್ದ ವ್ಯಕ್ತಿ ಶವ ಹೊಳೆಯಲ್ಲಿ ಪತ್ತೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.