ಬಿಜೆಪಿಯವರಿಗೆ ಲೂಟಿ ಮಾಡುವುದೇ ಕೆಲಸ


Team Udayavani, Jun 29, 2021, 11:01 PM IST

29-19

ಚಿಕ್ಕಮಗಳೂರು: ಬಿಜೆಪಿ ಜನಪ್ರತಿನಿ  ಧಿಗಳಿಗೆ ಜನರ ಬಗ್ಗೆ ಕಾಳಜಿಯಿಲ್ಲ. ಸರ್ಕಾರ ನೀಡುವ ಸೌಲಭ್ಯಗಳನ್ನು ಲೂಟಿ ಮಾಡುವುದೇ ಇವರ ಕಾಳಜಿಯಾಗಿದೆ ಎಂದು ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಎಚ್‌.ಎಚ್‌. ದೇವರಾಜ್‌ ಆಕ್ರೋಶ ವ್ಯಕ್ತಪಡಿಸಿದರು.

ಸೋಮವಾರ ನಗರದ ತಾಲೂಕು ಕಚೇರಿ ಆವರಣದಲ್ಲಿ ಕಟ್ಟಡ ಕಾರ್ಮಿಕರಿಗೆ ಸರ್ಕಾರ ನೀಡುತ್ತಿರುವ ಪಡಿತರ ಕಿಟ್‌ಗಳನ್ನು ಅ ಧಿಕಾರಿಗಳು, ಶಾಸಕರು ಮತ್ತು ಬಿಜೆಪಿ ಮುಖಂಡರ ಅಣತಿಯಂತೆ ವಿತರಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಭಾರತ ಕಮ್ಯುನಿಸ್ಟ್‌ ಪಕ್ಷ ಹಾಗೂ ಎಐಟಿಯುಸಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಕಾರ್ಮಿಕ ಇಲಾಖೆಯಲ್ಲಿ ನೋಂದಣಿಗೊಂಡ ಕಟ್ಟಡ ಕಾರ್ಮಿಕರಿಗೆ ಸರ್ಕಾರ ಪಡಿತರ ಕಿಟ್‌ಗಳನ್ನು ನೀಡುತ್ತಿದೆ. ಆದರೆ ಇಲಾಖೆ ಅಧಿಕಾರಿಗಳು ಕಿಟ್‌ ಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಿಲ್ಲ, ಶಾಸಕ ಸಿ.ಟಿ. ರವಿ ಮತ್ತು ಬಿಜೆಪಿ ಮುಖಂಡರು ಅಧಿಕಾರಿಗಳ ಮೇಲೆ ಒತ್ತಡ ಹೇರಿ ಇಲಾಖೆಯಿಂದ ಪೂರೈಕೆ ಮಾಡಲಾಗಿದ್ದ ಕಿಟ್‌ಗಳನ್ನು ನಗರದ ವಿವಿಧ ವಾರ್ಡ್‌ಗಳಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದೆ. ಇಲಾಖೆಯಿಂದ ನೀಡುವ ಕಿಟ್‌ ಗಳನ್ನು ಶಾಸಕ ಸಿ.ಟಿ. ರವಿ ಅವರಿಂದ ವಿತರಿಸಿ ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಳ್ಳಲು ಬಿಜೆಪಿಯವರು ಮುಂದಾಗಿದ್ದಾರೆ ಎಂದರು.

ಶಾಸಕರ ಹಿಂಬಾಲಕರು ನಗರದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಅನುದಾನವನ್ನು ಲೂಟಿ ಮಾಡಿದ್ದಾರೆ. ಕಾರ್ಮಿಕ ಇಲಾಖೆಯಿಂದ ನೀಡುತ್ತಿರುವ ಕಿಟ್‌ ಗಳನ್ನು ಲೂಟಿ ಮಾಡಿ ತಮ್ಮ ಬೇಳೆಕಾಯಿ ಬೇಯಿಸಿಕೊಳ್ಳಲು ಮುಂದಾಗಿ ಕೂಲಿ ಕಾರ್ಮಿಕರನ್ನು ವಂಚಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಚ್‌. ಎಂ. ರೇಣುಕಾರಾಧ್ಯ ಮಾತನಾಡಿ, ಜಿಲ್ಲೆಯ ಸಾವಿರಾರು ಕೃಷಿ ಕಾರ್ಮಿಕರು, ಕೂಲಿ ಕಾರ್ಮಿಕರು ಕೆಲಸವಿಲ್ಲದೆ ಸಂಕಷ್ಟದಲ್ಲಿ ದಿನ ದೂಡುತ್ತಿದ್ದಾರೆ. ಜಿಲ್ಲೆ ಯ ಕಾರ್ಮಿಕ ಇಲಾಖೆ ಅ ಧಿಕಾರಿಗಳು ಈ ಕಿಟ್‌ಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡದೆ ಬಿಜೆಪಿಯವರಿಗೆ ಲೂಟಿ ಮಾಡಲು ನೆರವು ನೀಡುತ್ತಿದ್ದಾರೆ ಎಂದ ಅವರು, ಕಿಟ್‌ಗಳನ್ನು ನೀಡಲು ಇಲಾಖೆ ಮುಂದಾಗದಿದ್ದರೆ ಜಿಲ್ಲಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಎಐಟಿಯಿಸಿ ಜಿಲ್ಲಾಧ್ಯಕ್ಷ ವಿಜಯ್‌ಕುಮಾರ್‌ ಮಾತನಾಡಿ, ಜಿಲ್ಲೆಯಲ್ಲಿ 38 ಸಾವಿರ ನೋಂದಾಯಿತ ಕಟ್ಟಡ ಕಾರ್ಮಿಕರಿದ್ದಾರೆ. ಎಲ್ಲಾ ತಾಲೂಕುಗಳಿಗೂ 10 ಸಾವಿರ ಕಿಟ್‌ ಗಳನ್ನು ಸರ್ಕಾರ ಪೂರೈಕೆ ಮಾಡಿದೆ. ಕಿಟ್‌ ಗಳ ವಿತರಣೆ ಬಗ್ಗೆ ಇಲಾಖಾ ಧಿಕಾರಿಗಳು ಎಲ್ಲ ನೋಂದಾಯಿತ ಕಾರ್ಮಿಕರಿಗೂ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು. ತಹಶೀಲ್ದಾರ್‌ ಹಾಗೂ ಕಾರ್ಮಿಕ ಇಲಾಖೆ ಅಧಿ ಕಾರಿಗಳು ಕಿಟ್‌ಗಳ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರತಿಭಟನೆಯಲ್ಲಿ ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ರಘು, ತಾಲೂಕು ಅಧ್ಯಕ್ಷ ಜಯಕುಮಾರ್‌, ಕಾರ್ಯದರ್ಶಿ, ವಸಂತ್‌ಕುಮಾರ್‌, ಜೆಡಿಎಸ್‌ ಪಕ್ಷದ ಜಯಂತಿ, ಮುಖಂಡರಾದ ಮಂಜೇಗೌಡ, ಶಾಂತಕುಮಾರ್‌ ಇತರರು ಇದ್ದರು.

ಟಾಪ್ ನ್ಯೂಸ್

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.