ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ತಯಾರಿ: ಮಲ್ಲೇಶಪ್ಪ
Team Udayavani, Jun 30, 2021, 10:17 PM IST
ಚಿಕ್ಕಮಗಳೂರು : ರಾಜ್ಯ ಸರ್ಕಾರ ಜು.19 ಮತ್ತು ಜು.22ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಮುಂದಾಗಿದೆ. ಅದರಂತೆ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪರೀಕ್ಷೆ ನಡೆಸಲು ಸಕಲ ತಯಾರಿ ನಡೆಸಲಾಗುತ್ತಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಬಿ.ವಿ. ಮಲ್ಲೇಶಪ್ಪ ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟು 14,116 ವಿದ್ಯಾರ್ಥಿಗಳು 85 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. 12,471 ರೆಗ್ಯುಲರ್ ವಿದ್ಯಾರ್ಥಿಗಳು, 1,250 ಪುನರಾವರ್ತಿತ ವಿದ್ಯಾಥಿ ìಗಳು, 275 ಖಾಸಗಿ ವಿದ್ಯಾರ್ಥಿಗಳು, 111 ಖಾಸಗಿ ಪುನರಾವರ್ತಿತ ವಿದ್ಯಾರ್ಥಿಗಳು, 4 ಅಭ್ಯರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ ಎಂದರು.
ಜಿಲ್ಲೆಯ ಶೈಕ್ಷಣಿಕ ವಲಯಗಳಾದ ಬೀರೂರು ವಲಯದಲ್ಲಿ ಈ ಹಿಂದೆ 7 ಪರೀûಾ ಕೇಂದ್ರಗಳನ್ನು ತೆರೆಯಲಾಗುತ್ತಿತ್ತು. ಈ ವರ್ಷ ಕೋವಿಡ್ ಹಿನ್ನೆಲೆಯಲ್ಲಿ ಈ ಸಾಲಿನಲ್ಲಿ 10 ಪರೀûಾ ಕೇಂದ್ರಗಳನ್ನು ತೆರೆಯಲಾಗಿದ್ದು, 3 ಕೇಂದ್ರಗಳನ್ನು ಹೊಸದಾಗಿ ತೆರೆಯಲಾಗಿದೆ. ಅದರಲ್ಲಿ 2 ಕೇಂದ್ರಗಳನ್ನು ಕಾಯ್ದಿರಿಸಲಾಗಿದೆ. ಚಿಕ್ಕಮಗಳೂರು ವಲಯದಲ್ಲಿ ಈ ಹಿಂದೆ 15 ಕೇಂದ್ರಗಳನ್ನು ತೆರೆಯಲಾಗುತ್ತಿತ್ತು. ಈ ಬಾರಿ 19 ಕೇಂದ್ರಗಳನ್ನು ತೆರೆಯಲಾಗಿದ್ದು 4 ಕೇಂದ್ರಗಳನ್ನು ಹೊಸದಾಗಿ ತೆರೆಯಲಾಗಿದೆ. ಅದರಲ್ಲಿ 2 ಕೇಂದ್ರಗಳನ್ನು ಕಾಯ್ದಿರಿಸಲಾಗಿದೆ ಎಂದರು.
ಕಡೂರು ಶೈಕ್ಷಣಿಕ ವಲಯದಲ್ಲಿ ಈ ಹಿಂದೆ 10 ಕೇಂದ್ರಗಳನ್ನು ತೆರೆಯಲಾಗುತ್ತಿತ್ತು. ಈ ಬಾರಿ 16 ಪರೀûಾ ಕೇಂದ್ರಗಳನ್ನು ತೆರೆಯಲಾಗಿದ್ದು, 6 ಕೇಂದ್ರಗಳನ್ನು ಹೊಸದಾಗಿ ತೆರೆಯಲಾಗಿದೆ. ಅದರಲ್ಲಿ 2 ಕೇಂದ್ರಗಳನ್ನು ಕಾಯ್ದಿರಿಸಲಾಗಿದೆ. ಕೊಪ್ಪ ವಲಯದಲ್ಲಿ ಈ ಹಿಂದೆ 4 ಕೇಂದ್ರಗಳನ್ನು ತೆರೆಯಲಾಗುತ್ತಿತ್ತು. ಈ ಬಾರಿ 7 ಕೇಂದ್ರಗಳನ್ನು ತೆರೆಯಲಾಗಿದ್ದು, 3 ಕೇಂದ್ರಗಳನ್ನು ಹೊಸದಾಗಿ ತೆರೆಯಲಾಗಿದೆ. 2 ಕೇಂದ್ರಗಳನ್ನು ಕಾಯ್ದಿರಿಸಲಾಗಿದೆ. ನರಸಿಂಹರಾಜಪುರ ಶೈಕ್ಷಣಿಕ ವಲಯದಲ್ಲಿ ಈ ಹಿಂದೆ 4 ಕೇಂದ್ರಗಳನ್ನು ತೆರೆಯಲಾಗುತ್ತಿತ್ತು. ಈ ಬಾರಿ 6 ಪರೀûಾ ಕೇಂದ್ರಗಳನ್ನು ತೆರೆಯಲಾಗಿದ್ದು, ಹೊಸದಾಗಿ 2 ಕೇಂದ್ರಗಳನ್ನು ತೆರೆಯಲಾಗಿದೆ. 2 ಕೇಂದ್ರಗಳನ್ನು ಕಾಯ್ದಿರಿಸಲಾಗಿದೆ ಎಂದರು. ಶೃಂಗೇರಿ ಶೈಕ್ಷಣಿಕ ವಲಯದಲ್ಲಿ ಈ ಹಿಂದೆ 2 ಕೇಂದ್ರಗಳನ್ನು ತೆರೆಯಲಾಗುತ್ತಿತ್ತು.
ಈ ಬಾರಿ 3 ಕೇಂದ್ರಗಳನ್ನು ತೆರೆಯಲಾಗಿದ್ದು, 1 ಕೇಂದ್ರವನ್ನು ಹೊಸದಾಗಿ ತೆರೆಯಲಾಗಿದೆ. 1 ಕೇಂದ್ರವನ್ನು ಕಾಯ್ದಿರಿಸಲಾಗಿದೆ. ಮೂಡಿಗೆರೆ ಶೈಕ್ಷಣಿಕ ವಲಯದಲ್ಲಿ ಈ ಹಿಂದೆ 6 ಕೇಂದ್ರಗಳನ್ನು ತೆರೆಯಲಾಗುತ್ತಿತ್ತು. ಈ ಬಾರಿ 9 ಕೇಂದ್ರಗಳನ್ನು ತೆರೆಯಲಾಗಿದ್ದು, 3 ಕೇಂದ್ರಗಳನ್ನು ಹೊಸದಾಗಿ ತೆರೆಯಲಾಗಿದೆ. 2 ಕೇಂದ್ರಗಳನ್ನು ಕಾಯ್ದಿರಿಸಲಾಗಿದೆ. ತರೀಕೆರೆ ವಲಯದಲ್ಲಿ ಈ ಹಿಂದೆ 10 ಕೇಂದ್ರಗಳನ್ನು ತೆರೆಯಲಾಗುತ್ತಿತ್ತು. ಈ ಬಾರಿ 15 ಕೇಂದ್ರಗಳನ್ನು ತೆರೆಯಲಾಗಿದ್ದು, 5 ಕೇಂದ್ರಗಳನ್ನು ಹೊಸದಾಗಿ ತೆರೆಯಲಾಗಿದೆ. 2 ಕೇಂದ್ರಗಳನ್ನು ಕಾಯ್ದಿರಿಸಲಾಗಿದೆ ಎಂದರು.
1,300 ಕೊಠಡಿಗಳು, 14,114 ವಿದ್ಯಾರ್ಥಿಗಳು, 1,346 ಕೊಠಡಿ ಮೇಲ್ವಿಚಾರಕರು, 95 ಅ ಧೀಕ್ಷಕರು, 85 ಕಸ್ಟೋಡಿಯನ್ನರು, 95ಕ್ಲಾರ್ಕ್, 85 ಸ್ಥಾನಿಕ ಜಾಗೃತಿ ದಳ, ಅನ್ಯ ಇಲಾಖೆಯ ವೀಕ್ಷಕರು 85, 30 ರೂಟ್ಗಳಿಗೆ ವಾಹನ, 30 ರೂಟ್ , 30 ಡ್ರೈವರ್ಗಳು, 170 ವಾಟರ್ ಬಾಯ್ಸಗಳು, 200 ಆರೋಗ್ಯ ಸಹಾಯಕರು, 350 ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, 40 ಅ ಧಿಕಾರಿಗಳು, 200 ಇಲಾಖಾ ಸ್ವಾಡ್ಗಳನ್ನು ಪರೀûಾ ಕಾರ್ಯಕ್ಕೆ ಬಳಸಿಕೊಳ್ಳಲಾಗುವುದು ಎಂದು ಹೇಳಿದರು. ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಸಕಲ ಸಿದ್ಧತೆಗಳನ್ನು ಮಾಡಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ
CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ
Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!
Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!
Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ
Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.