ಒತ್ತುವರಿ ಜಾಗ ತೆರವಿಗೆ 4 ದಿನ ಗಡುವು


Team Udayavani, Jul 5, 2021, 10:20 PM IST

5-19

ಚಿಕ್ಕಮಗಳೂರು: ನಗರದಲ್ಲಿ ಪಾರ್ಕ್‌ಗಳು ಹಾಗೂ ರಸ್ತೆ ಜಾಗ ಒತ್ತುವರಿ ಮಾಡಿಕೊಂಡಿರುವವರು ಇನ್ನು ಮೂರು- ನಾಲ್ಕು ದಿನಗಳಲ್ಲಿ ತೆರವು ಮಾಡದಿದ್ದಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲಿಸಿ, ದಂಡ ವಸೂಲಿ ಮಾಡಲಾಗುವುದು ಎಂದು ನಗರಸಭೆ ಆಯುಕ್ತ ಬಿ.ಸಿ. ಬಸವರಾಜ್‌ ತಿಳಿಸಿದರು.

ನಗರದ ಕಲ್ಯಾಣ ನಗರ ಬೈಪಾಸ್‌ ರಸ್ತೆಯ ವೀರಶೈವ, ಲಿಂಗಾಯಿತ ರುದ್ರಭೂಮಿಯನ್ನು ನಗರಸಭೆ, ಮಲೆನಾಡು ಕ್ರೈಸ್ತರ ಅಭಿವೃದ್ಧಿ ಸಂಘದ ನಿರಾಶ್ರಿತರ ಶಿಬಿರದ ನಿವಾಸಿಗಳು ಹಾಗೂ ವೀರಶೈವ ಸಮಾಜದ ಪದಾಧಿ ಕಾರಿಗಳೊಂದಿಗೆ ಸ್ವತ್ಛತಾ ಕಾರ್ಯ ಕೈಗೊಂಡು ನಂತರ ಅವರು ಮಾತನಾಡಿದರು. ಒತ್ತುವರಿದಾರರಿಗೆ ಅನೇಕ ಬಾರಿ ಸೂಚನೆ ಕೊಟ್ಟರೂ ಹಾಗೇ ಉಳಿಸಿಕೊಂಡಿದ್ದಾರೆ. ಪಾರ್ಕ್‌, ರಸ್ತೆ ಜಾಗವನ್ನು ಇನ್ನೂ ಕೆಲವರು ತೆರವು ಮಾಡಿಲ್ಲ. ಇದು ಅವರಿಗೆ ಅಂತಿಮ ಎಚ್ಚರಿಕೆ. ಇದಕ್ಕೂ ಸ್ಪಂದಿಸದೇ ಇದ್ದಲ್ಲಿ ಯಾವುದೇ ಮುನ್ಸೂಚನೆ ನೀಡದೆ ತೆರವುಗೊಳಿಸಿ ಅದಕ್ಕೆ ತಗುಲುವ ವೆಚ್ಚವನ್ನು ಅವರಿಂದಲೇ ವಸೂಲಿ ಮಾಡಲಾಗುವುದು ಎಂದರು.

ಮನೆಗಳ ಮುಂದೆ ರಸ್ತೆಗೆ ಬೇಲಿ ಹಾಕಿಕೊಂಡು ವಾಹನ ನಿಲುಗಡೆ‌ ಮತ್ತು ಜನಗಳ ಸಂಚಾರಕ್ಕೆ ತೊಂದರೆ ಉಂಟು ಮಾಡುತ್ತಿರುವ ಹಲವು ಪ್ರಕರಣಗಳಿವೆ. ಇದಕ್ಕೆ ಅವಕಾಶವಿಲ್ಲ ಎಂದು ನ್ಯಾಯಾಲಯ ಸಹ ಹೇಳಿದೆ. ಈ ಬಗ್ಗೆ ಸುಮಾರು ಹತ್ತು ಬಾರಿ ನಗರಸಭೆಯಿಂದ ಎಚ್ಚರಿಕೆ ನೀಡಲಾಗಿದೆ ಎಂದರು. ಕೆಲವರು ಒತ್ತುವರಿ ತೆರವು ಮಾಡಿದ್ದರೂ, ಇನ್ನೂ ಕೆಲವರು ಉಡಾಫೆಯಿಂದ ವರ್ತಿಸುತ್ತಿದ್ದಾರೆ. ಇದು ಅವರಿಗೆ ಕೊನೆಯ ಎಚ್ಚರಿಕೆ. ಇನ್ನು ಮೂರ್‍ನಾಲ್ಕು ದಿನಗಳಲ್ಲಿ ಅವರು ತಮ್ಮ ಮನೆಗಳ ಮುಂದೆ ರಸ್ತೆಗೆ ಅಡ್ಡಲಾಗಿ ಬೇಲಿ, ಗಿಡಗಳನ್ನು ಹಾಕಿದ್ದರೆ ತೆರವು ಮಾಡಿಕೊಡಬೇಕು. ಇಲ್ಲವಾದಲ್ಲಿ ಸಿಡಿಎ ಮತ್ತು ನಗರಸಭೆಯಿಂದ ತೆರವು ಮಾಡಿ ಕಂದಾಯದ ರೂಪದಲ್ಲಿ ದಂಡವನ್ನು ವಸೂಲಿ ಮಾಡಲಾಗುವುದು ಎಂದರು.

ಮಾಸ್ಕ್ ಧರಿಸದವರಿಗೆ ಮೂರ್‍ನಾಲ್ಕು ದಿನಗಳಿಂದ ದಂಡ ವಿ ಧಿಸುವುದನ್ನು ಹೆಚ್ಚಿಸಲಾಗಿದೆ. ಪ್ರತಿ ದಿನ 4 ರಿಂದ 5 ಸಾವಿರ ರೂ. ದಂಡ ವಸೂಲಾಗುತ್ತಿದೆ. ಕೆಲವರು ಬೆಳಗಿನ ವೇಳೆ ಮಾಸ್ಕ್ಗಳನ್ನು ಜೇಬಿನಲ್ಲಿಟ್ಟುಕೊಂಡು ವಾಕಿಂಗ್‌ ಬರುತ್ತಾರೆ. ನಾಲ್ಕೈದು ಜನರು ಒಟ್ಟಿಗೆ ಇರುತ್ತಾರೆ. ಕಡ್ಡಾಯವಾಗಿ ಮನೆಯಿಂದ ಬರುವಾಗಲೇ ಮಾಸ್ಕ್ಧರಿಸಬೇಕು. ಇದನ್ನು ನಿರ್ಲಕ್ಷಿಸಿದವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುವುದು ಎಂದರು.

ನಗರದಲ್ಲಿ ಪಾರ್ಕ್‌ಗಳು ಸೇರಿ ಹಲವು ಪ್ರದೇಶಗಳಲ್ಲಿ ಸ್ವತ್ಛತೆ ಕೈಗೊಳ್ಳಬೇಕಿದೆ. ರುದ್ರಭೂಮಿ ಸ್ವತ್ಛತೆಯನ್ನು ಆದ್ಯತೆಯಾಗಿ ಕೈಗೆತ್ತಿಕೊಂಡಿದ್ದೇವೆ. ಇದುವರೆಗೆ ಕೊರೊನಾ ಇದ್ದ ಕಾರಣ ಪಾಕ್‌ ìಗಳು, ರುದ್ರಭೂಮಿಗಳ ಸ್ವತ್ಛತೆ, ನಿರ್ವಹಣೆ ಕಷ್ಟವಾಗಿತ್ತು. ಮುಂದೆ ಪ್ರತಿ 15 ದಿನಗಳಿಗೊಮ್ಮೆ ಎಲ್ಲರ ಸಹಕಾರ ಪಡೆದು ಸ್ವತ್ಛತೆ ಮಾಡಲಾಗುವುದು ಎಂದು ತಿಳಿಸಿದರು.

ಮಲೆನಾಡು ಕ್ರೈಸ್ತರ ಅಭಿವೃದ್ಧಿ ಸಂಘದ ಅಧ್ಯಕ್ಷ ರೂಬೆನ್‌ ಮೋಸೆಸ್‌ ಮಾತನಾಡಿ, ಮನುಷ್ಯ ಎಂದಿಗೂ ಸ್ವಾರ್ಥಿ ಆಗಬಾರದು. ಇಲ್ಲಿ ಜಾತಿ ಮುಖ್ಯವಲ್ಲ. ಯಾವುದೇ ಜಾತಿಯ ರುದ್ರಭೂಮಿಯಾದರೂ ಸರಿ ಸ್ವತ್ಛವಾಗಿರಬೇಕು ಎಂದರು.

ವೀರಶೈವ, ಲಿಂಗಾಯತ ಸಮಾಜದ ಮುಖಂಡ ಎಂ.ಸಿ. ಶಿವಾನಂದಸ್ವಾಮಿ ಮಾತನಾಡಿ, ಕಲ್ಯಾಣ ನಗರದ 5 ಎಕರೆ ರುದ್ರಭೂಮಿಯನ್ನು ಮಳೆ ಮತ್ತು ಕೋವಿಡ್‌ ಕಾರಣ ಸ್ವತ್ಛತೆ ಕಾಪಾಡಲು ಸಾಧ್ಯವಾಗಿರಲಿಲ್ಲ. ಸಮಾಜದ ಕೋರಿಕೆ ಮೇರೆಗೆ ನಗರಸಭೆ, ಮಲೆನಾಡು ಕ್ರೈಸ್ತರ ಅಭಿವೃದ್ಧಿ ಸಂಘ ಸ್ವತ್ಛತೆಗೆ ಕೈಜೋಡಿಸಿರುವುದು ಖುಷಿ ಕೊಟ್ಟಿದೆ ಎಂದರು.

ಸಮಾಜದ ಉಪಾಧ್ಯಕ್ಷ ರೇಣುಕಾರಾಧ್ಯ, ಕಾರ್ಯದರ್ಶಿ ನಂದೀಶ್‌, ನಿರ್ದೇಶಕ ಸಿರಿಮನೆ ಪ್ರಸಾದ್‌, ವ್ಯವಸ್ಥಾಪಕ ಮಂಜು, ಜಗದೀಶ್‌ ಬಾಬು, ಮಧುಕುಮಾರ್‌ ನಗರಸಭೆ ಇಂಜಿನಿಯರ್‌ ಚಂದನ್‌, ಮಲೆನಾಡು ಕ್ರೈಸ್ತರ ಅಭಿವೃದ್ಧಿ ಸಂಘದ ನಿರ್ದೇಶಕ ಸಿಲ್ವಸ್ಟರ್‌, ರೋನಿ, ಸಂಜು, ಟೋನಿ, ಮಂಜುನಾಥ್‌, ಗುರು ಇದ್ದರು.

ಟಾಪ್ ನ್ಯೂಸ್

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

subharamaya-Swamiji

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.