ಕಿಟ್‌ ಪಡೆಯಲು ನೂಕುನುಗ್ಗಲು


Team Udayavani, Jul 7, 2021, 10:11 PM IST

7-16

ಕಡೂರು: ಕೋವಿಡ್‌ ಎರಡನೆ ಅಲೆಯಲ್ಲಿ ನೊಂದ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ರಾಜ್ಯ ಸರಕಾರದ ಕಾರ್ಮಿಕ ಇಲಾಖೆಯ ಮೂಲಕ ನೋಂದಾಯಿತ ಕಾರ್ಮಿಕ ವರ್ಗಕ್ಕೆ ಎಪಿಎಂಸಿ ಆವರಣದಲ್ಲಿ ಏರ್ಪಡಿಸಿದ್ದ ಆಹಾರ ಕಿಟ್‌ ವಿತರಣೆ ವೇಳೆ ನೂಕುನುಗ್ಗಲು ಏರ್ಪಟ್ಟು ನಂತರ ಪೊಲೀಸ್‌ ಭದ್ರತೆಯಲ್ಲಿ ವಿತರಣೆ ಸಾಂಗವಾಗಿ ನಡೆಯಿತು.

ತಾಲೂಕಿನಲ್ಲಿ 14,800 ನೋಂದಾಯಿತ ಕಾರ್ಮಿಕರಿದ್ದು ಶನಿವಾರ ಶಾಸಕ ಬೆಳ್ಳಿಪ್ರಕಾಶ್‌ ಅವರು ಸಾಂಕೇತಿಕವಾಗಿ ಕಾರ್ಮಿಕರಿಗೆ ಕಿಟ್‌ ವಿತರಣೆ ಮಾಡಿದ್ದರು. ನಂತರ ಇಲಾಖೆಯ ಅಧಿ  ಕಾರಿ ಮತ್ತು ಸಿಬ್ಬಂದಿ ವರ್ಗದವರು ಸುಮಾರು 1,178ಕ್ಕೂ ಹೆಚ್ಚಿನ ಕಾರ್ಮಿಕರಿಗೆ ಕಿಟ್‌ ನೀಡಿದ್ದರು.

ನಂತರ ಬೀರೂರು ಪಟ್ಟಣದಲ್ಲಿ 1,100ಕ್ಕೂ ಹೆಚ್ಚಿನ ಕಾರ್ಮಿಕರಿಗೆ ಕಿಟ್‌ ವಿತರಿಸಲಾಗಿತ್ತು. ಆದರೆ ಮಂಗಳವಾರ ಕಾರ್ಮಿಕರಿಗೆ ವಾರದ ರಜೆ ಇದ್ದ ಕಾರಣ ಕಾರ್ಮಿಕರು ಎಪಿಎಂಸಿಯಲ್ಲಿ 500ಕ್ಕೂ ಹೆಚ್ಚಿನ ಕಾರ್ಮಿಕರಿಗೆ ಯಾವುದೇ ಸಮಸ್ಯೆ ಇಲ್ಲದೆ ವಿತರಣೆ ನಡೆದಿತ್ತು. ಏಕಾಏಕಿ ಕಾರ್ಮಿಕರಲ್ಲಿ ನೂಕುನುಗ್ಗಲು ಉಂಟಾಗಿ ಕಿಟ್‌ ಸಿಗತ್ತದೆಯೋ ಇಲ್ಲವೋ ಎಂಬ ಗೊಂದಲ ಏರ್ಪಟ್ಟು ವಿತರಣೆ ಸ್ಥಳಕ್ಕೆ ನುಗ್ಗಲು ಆರಂಭಿಸಿದರು.

ಸ್ಥಳದಲ್ಲಿದ್ದ ಪೊಲೀಸರು ಕೂಡಲೇ ಗೋಡೌನ್‌ಗೆ ಬೀಗ ಹಾಕಿಸಿ ಅಧಿ ಕಾರಿಗಳನ್ನು ಸ್ಥಳದಿಂದ ತೆರಳಲು ತಿಳಿಸಿದರು. ನಂತರ ಸ್ಥಳದಲ್ಲಿದ್ದ ಕಾರ್ಮಿಕರಿಗೆ ಪೊಲೀಸರು ಎಚ್ಚರಿಕೆ ನೀಡಿ ಎಲ್ಲರಿಗೂ ಕಿಟ್‌ಗಳನ್ನು ನೀಡಲಾಗುತ್ತದೆ. ಯಾವುದೇ ಗೊಂದಲಕ್ಕೆ ಒಳಗಾಗದಂತೆ ಮನವಿ ಮಾಡಿದರು. ನಂತರ ಅಧಿ ಕಾರಿಗಳನ್ನು ಸ್ಥಳಕ್ಕೆ ಕರೆಸಿ ಪುನಃ ಕಿಟ್‌ ವಿತರಣೆ ಕಾರ್ಯ ನಡೆಯಲು ಅನುವು ಮಾಡಿಕೊಟ್ಟರು.

ಕಾರ್ಮಿಕ ಅಧಿಕಾರಿ ಶಶಿಕಲಾ ಅವರು ಕಾರ್ಮಿಕರಲ್ಲಿ ಮನವಿ ಮಾಡಿ, ಯಾವುದೇ ಗೊಂದಲ, ಗಾಳಿಸುದ್ದಿ, ಕಿವಿಮಾತುಗಳಿಗೆ ಕಿವಿಗೊಡದೆ ನಿಮ್ಮ ದಾಖಲೆಗಳನ್ನು ನೀಡಿ ಕಿಟ್‌ ಪಡೆಯಿರಿ ಎಂದು ಸೂಚಿಸಿದರು. 1,865 ಕಾರ್ಮಿಕರಿಗೆ ಕಿಟ್‌ ವಿತರಣೆ ನಡೆದಿದ್ದು ಗುರುವಾರ ಪುನಃ ನೀಡಲಾಗುತ್ತದೆ ಎಂದ ಮಾಹಿತಿ ನೀಡಿದರು.

ವೃತ್ತ ನಿರೀಕ್ಷಕ ಮಂಜುನಾಥ್‌, ಕಡೂರು ಪಿಎಸ್‌ಐ ರಮ್ಯಾ ಮತ್ತು ಸಿಬ್ಬಂದಿ ವರ್ಗದವರ ರಕ್ಷಣೆಯಲ್ಲಿ ಕಿಟ್‌ ವಿತರಣೆ ನಡೆಯಿತು.

ಟಾಪ್ ನ್ಯೂಸ್

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.