ರಾಮೇಶ್ವರಂ ಅರ್ಚಕರಿಗೆ ಶೃಂಗೇರಿ ಜಗದ್ಗುರುಗಳ ದೀಕ್ಷೆ
Team Udayavani, Jul 9, 2021, 10:01 PM IST
ಶೃಂಗೇರಿ : ತಮಿಳುನಾಡಿನ ರಾಮೇಶ್ವರಂ ಕ್ಷೇತ್ರದಲ್ಲಿ ಪೂಜೆ ಸಲ್ಲಿಸಲು ಶ್ರೀ ರಾಮೇಶ್ವರ ದೇವಾಲಯದ ಅರ್ಚಕ ಶರವಣನ್ ರಾನಡೆ ಅವರಿಗೆ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿಗಳು ಗುರುವಾರ ದೀಕ್ಷೆ ನೀಡಿದರು.
ಬೆಳಗ್ಗೆ ಗುರುಭವನದಲ್ಲಿ ವಿವಿಧ ಧಾರ್ಮಿಕ ವಿಧಿ- ವಿಧಾನದ ನಂತರ ಜಗದ್ಗುರುಗಳು ರಾಮೇಶ್ವರ ದೇವಾಲಯದ ಅರ್ಚಕರಿಗೆ ದೀಕ್ಷೆ ನೀಡಿದರು. ಈ ಸಂದರ್ಭದಲ್ಲಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳು ಇದ್ದರು. ಈ ಮೂಲಕ ಶ್ರೀ ರಾಮೇಶ್ವರ ದೇವಾಲಯದ ಅರ್ಚಕ ಶರವಣನ್ ರಾನಡೆ ಅವರು ಶ್ರೀ ರಾಮನಾಥ ಸ್ವಾಮಿಯ ಪೂಜೆ ಮಾಡಲು ಅಧಿಕಾರ ಪಡೆದರು.
ರಾಮೇಶ್ವರದಲ್ಲಿ ಶ್ರೀ ರಾಮನಾಥ ಸ್ವಾಮಿಗೆ ಯಾರು ಪೂಜೆ ಮಾಡಬೇಕು ಎಂದು ಜಗದ್ಗುರು ಶ್ರೀ ಆದಿಶಂಕರಾಚಾರ್ಯರು ಕಟ್ಟುನಿಟ್ಟಿನ ಸಂಪ್ರದಾಯ ಮತ್ತು ನಿರ್ಬಂಧಗಳನ್ನು ಹಾಕಿದ್ದಾರೆ. ಈ ಹಕ್ಕನ್ನು ನೇಪಾಳದ ಮಹಾರಾಜರು ಪಡೆದಿದ್ದು, ಶೃಂಗೇರಿ ಮಠದ ಗುರು ಪರಂಪರೆ ಇದನ್ನು ದೈವಿಕವಾಗಿ ಪಡೆದಿದೆ. ನಿರ್ದಿಷ್ಟ ಸಮುದಾಯದಿಂದ ಬರುವ ಅರ್ಚಕರು ಶೃಂಗೇರಿ ಮಠದ ಜಗದ್ಗುರುಗಳಿಂದ ಮಂತ್ರೋಪದೇಶ ದೀಕ್ಷೆ ಸ್ವೀಕರಿಸಿದ ನಂತರವೇ ಶ್ರೀ ರಾಮನಾಥ ಸ್ವಾಮಿಯ ಸೇವೆ ಮಾಡಬಹುದಾಗಿದೆ.
ಜಗದ್ಗುರು ಶ್ರೀ ಆದಿ ಶಂಕರಾಚಾರ್ಯರು ಮತ್ತು ರಾಮೇಶ್ವರ ದೇವಾಲಯದ ಧಾರ್ಮಿಕ ಆಚರಣೆ ಮತ್ತು ಸಂವಿಧಾನದ 25ನೇ ಪರಿಚ್ಛೇದದ ಅಡಿಯಲ್ಲಿ ಖಾತ್ರಿಪಡಿಸಿದ ಮೂಲಭೂತ ಹಕ್ಕು ಕೂಡ ಆಗಿದೆ. ಐತಿಹಾಸಿಕವಾಗಿ ಶೃಂಗೇರಿ ದಕ್ಷಿಣಾಮ್ನಾಯ ಮಹಾಸಂಸ್ಥಾನ ಮತ್ತು ರಾಮೇಶ್ವರಂ ಕ್ಷೇತ್ರಕ್ಕೂ ಅವಿನಾವಭಾವ ಸಂಬಂಧ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ
CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ
Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!
Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!
Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ
Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.