ಕಡೂರು ಕ್ರೀಡಾಂಗಣಕ್ಕೆ ಹೈಟೆಕ್‌ ಸ್ಪರ್ಶ: ಬೆಳ್ಳಿಪ್ರಕಾಶ್‌


Team Udayavani, Jul 12, 2021, 10:30 PM IST

12-19

ಕಡೂರು: ಡಾ| ಬಿ.ಆರ್‌. ಅಂಬೇಡ್ಕರ್‌ ತಾಲೂಕು ಕ್ರೀಡಾಂಗಣಕ್ಕೆ ಹೈಟೆಕ್‌ ಸ್ಪರ್ಶ ನೀಡಲು ಶಾಸಕ ಬೆಳ್ಳಿಪ್ರಕಾಶ್‌ ಉದ್ದೇಶಿಸಿದ್ದು ಭಾನುವಾರ ಹಲವು ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ಪಟ್ಟಣದ ಪಪೂ ಕಾಲೇಜು ಆವರಣಕ್ಕೆ ಹೊಂದಿಕೊಂಡಂತೆ ಇರುವ ಈ ತಾಲೂಕು ಕ್ರೀಡಾಂಗಣ ಮೂಲ ಸೌಕರ್ಯಗಳಿಲ್ಲದೆ ಕಾಂಪೌಂಡ್‌ ಮತ್ತು ವಿದ್ಯುತ್‌ ವ್ಯವಸ್ಥೆಗಳಿಲ್ಲದೆ ಕೇವಲ ಒಂದು ಮೈದಾನವಾಗಿ ಉಳಿದಿತ್ತು. ಇದರ ಸಂಪೂರ್ಣ ಆಧುನೀಕರಣಕ್ಕೆ ಶಾಸಕರು ಇದೀಗ ಮುಂದಾಗಿದ್ದಾರೆ. ಮೈದಾನಕ್ಕೆ ಅವಶ್ಯಕವಾಗಿ ಬೇಕಾಗಿದ್ದ ಕಾಂಪೌಂಡ್‌ ನಿರ್ಮಾಣ ಕಾಮಗಾರಿಗೆ ಕೆಲವು ದಿನಗಳ ಹಿಂದೆ ಶಾಸಕರು ಚಾಲನೆ ನೀಡಿದ್ದು ಅದೀಗ ಮುಗಿದಿದೆ.

ಆ ಬಳಿಕ ಸುಮಾರು 9 ಲಕ್ಷ ರೂ. ವೆಚ್ಚದಲ್ಲಿ ಮೈದಾನದ ಸುತ್ತ ಹೈಮಾಸ್ಕ್ ವಿದ್ಯುತ್‌ ದೀಪಗಳನ್ನು ಅಳವಡಿಸಲಾಯಿತು. ಇದರಿಂದ ನಿತ್ಯ ಬೆಳಗ್ಗೆ ಮತ್ತು ಸಂಜೆ ವಾಯುವಿಹಾರ ನಡೆಸುವ ನಾಗರಿಕರಿಗೆ ಅನುಕೂಲವಾಗಿದೆ. ಇದೀಗ ಯುವಜನ ಮತ್ತು ಸೇವಾ ಕ್ರೀಡಾ ಇಲಾಖೆಯ ಸಚಿವ ನಾರಾಯಣ ಗೌಡ ಅವರ ಬಳಿ ಈ ಕ್ರೀಡಾಂಗಣಕ್ಕೆ ವಿವಿಧ ರೀತಿಯ ಆಟಗಳಿಗೆ ಮೂಲ ಸೌಕರ್ಯಗಳನ್ನು ನಿರ್ಮಿಸಲು ಶಾಸಕರು ಮನವಿ ನೀಡಿದ್ದು ಈ ಮನವಿಗೆ ಸಚಿವರು ಸ್ಪಂದಿಸಿ ಮೊದಲ ಹಂತವಾಗಿ 20 ಲಕ್ಷ ರೂ. ಬಿಡುಗಡೆ ಮಾಡಿದ್ದಾರೆ.

ಮೇಲ್ಚಾವಣಿ ವಿಸ್ತರಣೆ, ಆಟಗಾರರಿಗೆ ಪ್ರತ್ಯೇಕ ಡ್ರೆಸ್ಸಿಂಗ್‌ ರೂಂ ನಿರ್ಮಾಣ, 200 ಮೀಟರ್‌ ಅಥ್ಲೆಟಿಕ್‌ ಟ್ರಾಕ್‌ ಹಾಗೂ ಮಗ್ಗುಲಲ್ಲಿಯೆ ನಾಗರೀಕರು ವಾಯುವಿಹಾರ ನಡೆಸಲು ಪಾಥ್‌ ವೇ, ಕಬಡ್ಡಿ, ಖೋ ಖೋ ,ವಾಲಿಬಾಲ್‌, ಪ್ರತ್ಯೇಕ ಅಂಕಣಗಳ ನಿರ್ಮಾಣ, ಷಟಲ್‌ ಕೋರ್ಟ್‌ ನಿರ್ಮಾಣ ಹೀಗೆ ಒಟ್ಟಾರೆ 1 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾಂಗಣ ಸಂಪೂರ್ಣ ನವೀಕರಣವಾಗಲಿದೆ. ಈ ಸಂದರ್ಭ ಶಾಸಕ ಬೆಳ್ಳಿಪ್ರಕಾಶ್‌ ಮಾತನಾಡಿ, ಕ್ರೀಡಾ ಸಚಿವರ ಜೊತೆಯಲ್ಲಿ ತಾವು ಅಭಿವೃದ್ದಿ ಕುರಿತಂತೆ ಪ್ರಸ್ತಾಪಿಸಿದ್ದು ಮೊದಲ ಹಂತದ ಹಣ 20 ಲಕ್ಷ ಹಣ ಬಂದಿದ್ದು ಎರಡನೇ ಹಂತದಲ್ಲಿ 31 ಲಕ್ಷ ಹಣ ಬರಲಿದೆ ಎಂದರು.

ಕಾಮಗಾರಿಗಳು ಹಂತ- ಹಂತವಾಗಿ ನಡೆಯಲಿದ್ದು ಸಚಿವರ ಬಳಿ ಪುನಃ 50 ಲಕ್ಷ ಹೆಚ್ಚುವರಿ ಹಣ ಬಿಡುಗಡೆಗೆ ಬೇಡಿಕೆ ಸಲ್ಲಿಸಿದ್ದು ಅದಕ್ಕೆ ಸಕರಾತ್ಮಕವಾಗಿ ಸಚಿವರು ಸ್ಪಂದಿಸಿದ್ದಾರೆ. ಒಟ್ಟಾರೆ 1 ಕೋಟಿ ರೂ. ವೆಚ್ಚದಲ್ಲಿ ಈ ಕ್ರೀಡಾಂಗಣಕ್ಕೆ ಹೈಟೆಕ್‌ ಸ್ಪರ್ಶ ದೊರೆಯಲಿದೆ ಎಂದರು. ಈಗಾಗಲೇ ಈ ಕ್ರೀಡಾಂಗಣದ ಆವರಣದಲ್ಲಿ ಯೋಗ, ಜಿಮ್‌ ತರಬೇತಿ ನಡೆಯುತ್ತಿದ್ದು ಕಾಂಪೌಂಡ್‌ ನಿರ್ಮಿಸಿರುವುದರಿಂದ ಕ್ರೀಡಾಂಗಣದೊಳಗೆ ಕಾನೂನು ಬಾಹಿರ ಚಟುವಟಿಕೆಗೆ ಕಡಿವಾಣ ಹಾಕಿದಂತಾಗಿದೆ. ಕ್ರೀಡಾಂಗಣವು ಸ್ವತ್ಛವಾಗಿದೆ. ಮುಂದಿನ ದಿನಗಳಲ್ಲಿ ಕಾಮಗಾರಿಗಳು ಮುಕ್ತಾಯವಾದರೆ ಅನೇಕ ಕ್ರೀಡಾ ಪ್ರತಿಭೆಗಳ ತರಬೇತಿಗೆ ಸೂಕ್ತ ವೇದಿಕೆ ಸಿಕ್ಕಂತೆ ಆಗುತ್ತದೆ ಎಂದರು.

ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್‌ ಮಾತನಾಡಿ, ಕೈಗೆತ್ತಿ ಕೊಂಡಿರುವ ಕಾಮಗಾರಿಗಳಿಗೆ ಪುರಸಭೆ ವತಿಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು. ಸಾಧ್ಯವಾದರೆ ಪುರಸಭೆಯ ಸದಸ್ಯರ ಸಭೆಯಲ್ಲಿ ವಿಷಯ ಮಂಡಿಸಿ ಅನುದಾನ ಬಿಡುಗಡೆಗೂ ಪ್ರಯತ್ನಿಸಲಾಗುವುದು. ತಾಲೂಕು ಕ್ರೀಡಾಂಗಣ ಎಲ್ಲಾ ಕ್ರೀಡಾಪಟುಗಳ ತರಬೇತಿ ಕೇಂದ್ರವಾಗಲಿ ಎಂದರು.

ಜಿಲ್ಲಾ ಯುವಜನ ಸೇವಾ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಮಂಜುಳಾ, ತಾಲೂಕು ಯುವ ಜನ ಕ್ರೀಡಾ ಅ ಧಿಕಾರಿ ಎಂ. ವೇದಮೂರ್ತಿ, ಪುರಸಭೆ ಉಪಾಧ್ಯಕ್ಷೆ ವಿಜಯ ಚಿನ್ನರಾಜ್‌,ಪುರಸಭೆ ಸದಸ್ಯರಾದ ಯತಿರಾಜ್‌, ಗೋವಿಂದ, ಸಂದೇಶ್‌ಕುಮಾರ್‌, ವಕ್ತಾರ ಶಾಮಿಯಾನ ಚಂದ್ರು, ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ರೇವಣ್ಣಯ್ಯ, ಜಿಮ್‌ರಾಜ್‌, ಮುಖ್ಯಾ ಧಿಕಾರಿ ಎಚ್‌.ಎನ್‌. ಮಂಜುನಾಥ್‌, ಗುತ್ತಿಗೆದಾರರಾದ ಶಿವು, ದಿನೇಶ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.