ಆನ್‌ಲೈನ್‌ ತರಗತಿಗೆ ಪಠ್ಯಪುಸ್ತಕ ಸರಬರಾಜಿನದ್ದೇ ಸಮಸ್ಯೆ


Team Udayavani, Jul 13, 2021, 10:27 PM IST

13-18

ಚಿಕ್ಕಮಗಳೂರು: ಕೋವಿಡ್‌ ಹಿನ್ನೆಲೆಯಲ್ಲಿ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳನ್ನು ಸಾಮೂಹಿಕವಾಗಿ ತೇರ್ಗಡೆಗೊಳಿಸಿದ್ದು ಆನ್‌ಲೈನ್‌ ತರಗತಿಗಳು ಆರಂಭವಾಗಿವೆ. ರಾಜ್ಯ ಸರ್ಕಾರ ಪಠ್ಯಪುಸ್ತಕವನ್ನು ಸಕಾಲಕ್ಕೆ ಪೂರೈಕೆ ಮಾಡಲು ಸಾಧ್ಯವಾಗದ ಕಾರಣ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಹೊಂದಿಸುವುದೇ ದೊಡ್ಡ ಸವಾಲಾಗಿದೆ.

ಜಿಲ್ಲೆ ಶೈಕ್ಷಣಿಕವಾಗಿ 8 ವಲಯಗಳನ್ನು ಹೊಂದಿದ್ದು ಕಳೆದ ವರ್ಷ 1,44,518 ವಿದ್ಯಾರ್ಥಿಗಳಿದ್ದರು. ಸದ್ಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲಾಗುತ್ತಿದೆ. ಉಳಿದ ವಿದ್ಯಾರ್ಥಿಗಳನ್ನು ಸಾಮೂಹಿಕವಾಗಿ ತೇರ್ಗಡೆಗೊಳಿಸಲಾಗಿದೆ. ಕೋವಿಡ್‌ ಹಿನ್ನೆಲೆಯಲ್ಲಿ ಕಳೆದ 2 ವರ್ಷಗಳಿಂದ ಆನ್‌ಲೈನ್‌ ಪಾಠ- ಪ್ರವಚನಗಳನ್ನು ನಡೆಸಲಾಗುತ್ತಿದೆ.

ಜು.1ರಿಂದ ಆನ್‌ಲೈನ್‌ ಪಾಠ ಆರಂಭವಾಗಿದ್ದು, ಮಕ್ಕಳ ಕೈಯಲ್ಲಿ ಪಠ್ಯಪುಸ್ತಕಗಳು ಇಲ್ಲದಿರುವುದು ಪೋಷಕರನ್ನು ಕಾಡುತ್ತಿದೆ. ಕೋವಿಡ್‌ ಹಿನ್ನೆಲೆಯಲ್ಲಿ ಪಠ್ಯಪುಸ್ತಕಗಳನ್ನು ರಾಜ್ಯ ಸರ್ಕಾರ ಪೂರೈಕೆ ಮಾಡಲು ವಿಳಂಬವಾಗಿದ್ದು, ಹಳೆಯ ಪಠ್ಯಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿ ತಿಂಗಳಾದರೂ ಜಿಲ್ಲೆಯಲ್ಲಿ ಶೇ.60 ರಿಂದ 70ರಷ್ಟು ಹಳೆಯ ಪಠ್ಯಪುಸ್ತಕಗಳು ಮರಳಿ ಸಿಗುತ್ತಿದ್ದು ಉಳಿದ ಪುಸ್ತಕಗಳ ಕೊರತೆ ಅನುಭವಿಸುವಂತಾಗಿದೆ. ಅನೇಕ ವಿದ್ಯಾರ್ಥಿಗಳು ಪಠ್ಯಪುಸ್ತಕವಿಲ್ಲದೆ ಪಾಠ- ಪ್ರವಚನ ಕೇಳುವಂತಾಗಿದೆ.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮಕ್ಕಳಿಗೆ ಪಠ್ಯಪುಸ್ತಕ ಪೂರೈಕೆ ಮಾಡಲು ವಿಳಂಬವಾಗುತ್ತಿದ್ದು, 2021ನೇ ಸಾಲಿನಲ್ಲಿ ಪೂರೈಕೆ ಮಾಡಿದ ಪುಸ್ತಕಗಳನ್ನು ಬಳಸುವಂತೆ ಕರ್ನಾಟಕ ಪುಸ್ತಕ ಸಂಘ ಆದೇಶಿಸಿದೆ. ಹೀಗಾಗಿ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟದ ದಿನಸಿ ವಿತರಿಸುವಾಗ ಹಿಂದಿನ ವರ್ಷ ಕೊಟ್ಟಿದ್ದ ಪುಸ್ತಕಗಳನ್ನು ಮರಳಿ ಪಡೆಯಲಾಗುತ್ತಿದೆ. ಈ ವೇಳೆ ಹರಿದ ಪುಸ್ತಕಗಳೇ ಹೆಚ್ಚು ವಾಪಸಾಗುತ್ತಿರುವುದು ಕಂಡು ಬಂದಿದ್ದರೆ, ಮತ್ತೂಂದೆಡೆ ಪುಸ್ತಕಗಳನ್ನು ಕಳೆದುಕೊಂಡಿದ್ದು ಪೋಷಕರು ಹಾಗೂ ಶಿಕ್ಷಕರನ್ನು ಸಂಕಷ್ಟಕ್ಕೆ ದೂಡಿದಂತಾಗಿದೆ.

ಶಿಕ್ಷಣ ಇಲಾಖೆಯಿಂದ ಸರ್ಕಾರಿ ಅನುದಾನಿತ ಶಾಲೆಗಳಿಗೆ ಪೂರೈಕೆಯಾಗುವ ಪುಸ್ತಕಗಳು ಒಮ್ಮೆ ಬಳಕೆಗೆ ಯೋಗ್ಯವಾಗುವ ರೀತಿಯಲ್ಲಿವೆ. ಆದರೆ ಒಂದರಿಂದ ಏಳನೇ ತರಗತಿವರೆಗಿನ ಪುಸ್ತಕದಲ್ಲಿ ಪಾಠದ ಕೊನೆಯಲ್ಲಿ ಪ್ರಶ್ನೆಗಳಿಗೆ ಉತ್ತರ ಬರೆಯುವ ವ್ಯವಸ್ಥೆ ಇದೆ. ಹಳೆಯ ಪುಸ್ತಕಗಳನ್ನು ಪಡೆಯುವ ಈ ವರ್ಷದ ವಿದ್ಯಾರ್ಥಿಗಳಿಗೆ ಬರವಣಿಗೆ ರೂಢಿಸುವುದು ಶಿಕ್ಷಕರಿಗೆ ಸವಾಲಾಗಿದೆ. ಹಿಂದಿನ ವರ್ಷದ ಪ್ರಾಥಮಿಕ ತರಗತಿಯ 1, 2, 3ನೇ ತರಗತಿಯ ಪುಸ್ತಕಗಳನ್ನು ವಿದ್ಯಾರ್ಥಿಗಳು ಬಹುತೇಕ ಹರಿದು ಹಾಕಿ ಕೊಂಡಿದ್ದಾರೆ.

ಒಂದನೇ ತರಗತಿಗೆ ದಾಖಲಾಗುವ ಮತ್ತು ಎರಡು ಮೂರನೇ ತರಗತಿಗೆ ಬಡ್ತಿ ಪಡೆದ ಮಕ್ಕಳಿಗೆ ಈ ವರ್ಷ ಪುಸ್ತಕ ಹೊಂದಿಸುವುದು ದೊಡ್ಡ ಸವಾಲಾಗಿದೆ. ಒಟ್ಟಾರೆ ಸರ್ಕಾರ ಪಠ್ಯಪುಸ್ತಕ ಪೂರೈಕೆ ವಿಳಂಬ ಮಾಡಿರುವುದರಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ.

ಟಾಪ್ ನ್ಯೂಸ್

Puttige-sri

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Puttige-sri

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.