ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ನರ್ಸಿಂಗ್ ಕೋರ್ಸ್ ಹೆಸರಲ್ಲಿ ಲೈಂಗಿಕ ದೌರ್ಜನ್ಯ, ಮೂವರ ಬಂಧನ
Team Udayavani, Nov 11, 2023, 9:36 AM IST
ಕಡೂರು: ತಾಲೂಕಿನ ಕುಪ್ಪಾಳು ಮುರಾರ್ಜಿ ವಸತಿ ಶಾಲೆಯ ಅಪ್ರಾಪ್ತ ಬಾಲಕಿಯರನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪದ ಮೇಲೆ ಪೋಕ್ಸೋ ಪ್ರಕರಣದಡಿಯಲ್ಲಿ ಮೂವರನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಚನ್ನರಾಯಪಟ್ಟಣ ತಾಲೂಕು ನುಗ್ಗೆಹಳ್ಳಿ ಹೋಬಳಿಯ ಮುಳುಕೆರೆ ಗ್ರಾಮದ ನಿವಾಸಿ ಚಂದನ (26),(ಕಡೂರು ತಾಲೂಕು ಅಂಚೆಚೋಮನಹಳ್ಳಿಯ ಆರೋಗ್ಯ ಇಲಾಖೆಯಲ್ಲಿ ಎಎನ್ಎಂ ನರ್ಸ್), ಎರಡನೇ ಆರೋಪಿ ಅಂಚೆಚೋಮನಹಳ್ಳಿಯ ಗ್ರಾಮದ ತೊಟ್ಟಿಮನೆ ಸುರೇಶ್(35), ಮೂರನೇ ಆರೋಪಿ ಸೊರಬ ತಾಲೂಕಿನ ಆನವಟ್ಟಿಯ ಫ್ಯಾನ್ಸಿಸ್ಟೋರ್ ಮಾಲೀಕ ವಿನಯ್ ಕುಮಾರ್(27) ಬಂಧಿತ ಆರೋಪಿಗಳಾಗಿದ್ದಾರೆ.
ವಸತಿ ಶಾಲೆಯ ಪ್ರಾಂಶುಪಾಲರು ನೀಡಿದ ದೂರಿನ ಮೇರೆಗೆ ತರೀಕೆರೆ ಡಿವೈಎಸ್ಪಿ ಹಾಲಮೂರ್ತಿ ರಾವ್ ಅವರ ತಂಡವು ಕಾರ್ಯಾಚರಣೆ ಆರಂಭಿಸಿ ನಂ ೮ ರಂದು ಆರೋಪಿಗಳನ್ನು ವಶಕ್ಕೆ ಪಡೆದಿರುವುದಾಗಿ ಡಿವೈಎಸ್ಪಿ ಮಾಹಿತಿ ನೀಡಿದರು.
ಅಂಚೆಚೋಮನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಎಎನ್ಎಂ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿರುವ ಚಂದನ ಮದುವೆಯಾಗಿ ಈಗ ಗರ್ಭಿಣಿಯಾಗಿದ್ದು, ತನ್ನ ಪ್ರಿಯಕರ ವಿನಯ್ ಕುಮಾರ್(ಈತನೂ ವಿವಾಹಿತ)ಜೊತೆ ಈಗಲೂ ಸಂಪರ್ಕ ಇಟ್ಟುಕೊಂಡಿದ್ದಾಳೆ. ವಿನಯ್ಕುಮಾರ್ ಆಗಾಗ ಚಂದನಳ ಹತ್ತಿರ ಬಂದು ಹೋಗುತ್ತಿದ್ದು ಚಿಕ್ಕ ವಯಸ್ಸಿನ ಬಾಲಕಿಯರನ್ನು ಬಯಸಿದಾಗ ಆತನ ಮೇಲಿನ ಅತೀವ ಪ್ರೀತಿಯಿಂದ ಆರೋಪಿ ಚಂದನ ಮುರಾರ್ಜಿ ವಸತಿ ಶಾಲೆಯಲ್ಲಿ ಹಂಗಾಮಿ ಕೆಲಸ ಮಾಡುತ್ತಿರುವ ಸುರೇಶ್ ಎಂಬುವವನ ಸಹಾಯ ಪಡೆದು ವಸತಿ ಶಾಲೆಯ ವಿದ್ಯಾರ್ಥಿನಿಯರನ್ನು ಲೈಂಗಿಕವಾಗಿ ಬಳಸಿಕೊಂಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ.
ಸುರೇಶ್ ವಸತಿ ನಿಲಯದ ಮಕ್ಕಳ ಪೋಷಕರನ್ನು ಕರೆದು ನಿಮ್ಮ ಮಗಳಿಗೆ ನರ್ಸ್ ಟ್ರೈನಿಂಗ್ ಇದೆ. ಅದನ್ನು ಮಾಡಿದರೆ ಮುಂದೆ ಬಹಳ ಸಹಾಯವಾಗುತ್ತದೆ ಹಾಗೂ ಸುಲಭವಾಗಿ ಕೆಲಸ ದೊರಕುತ್ತದೆ ಎಂದು ನಂಬಿಸಿ, ವಸತಿ ಶಾಲೆಯ ಇಬ್ಬರು ವಿದ್ಯಾರ್ಥಿನಿಯರನ್ನು ಚಂದನ ಅವರ ಸರ್ಕಾರಿ ಕ್ವಾಟ್ರಸ್ಗೆ ಕರೆದುಕೊಂಡು ಹೋಗಿ ಅಲ್ಲಿ ಅವರಿಗೆ ಪಾನೀಯದಲ್ಲಿ ಮತ್ತು ಬರುವ ಔಷಧಿ ನೀಡಿ ಮಕ್ಕಳು ಪ್ರಜ್ಞಾಶೂನ್ಯರಾದಾಗ ವಿನಯ್ ಕುಮಾರ್ ಅವರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ ಎಂಬ ವಿಚಾರವನ್ನು ಸುರೇಶ್ ಹೇಳಿದ್ದು ವಿನಯ್ಕುಮಾರ್ ಸಹ ಒಪ್ಪಿಕೊಂಡಿದ್ದಾನೆ. ಪೊಲೀಸ್ ಅಧಿಕಾರಿಗಳು ಮಕ್ಕಳನ್ನು ಪ್ರಶ್ನಿಸಿದಾಗ ಲೈಂಗಿಕ ದೌರ್ಜನ್ಯಕ್ಕೆ ಹಾಗೂ ಅತ್ಯಾಚಾರ ನಡೆದಿರುವುದಾಗಿ ಮಾಹಿತಿ ಬೆಳಕಿಗೆ ಬಂದಿದೆ.
ಚಂದನಳನ್ನು ವಶಕ್ಕೆ ಪಡೆದು ಆಕೆ ನೀಡಿದ ಮಾಹಿತಿ ಆಧರಿಸಿ ಆನವಟ್ಟಿಯಲ್ಲಿ ವಿನಯ್ ಕುಮಾರ್ ಮತ್ತು ತೊಟ್ಟಿಮನೆ ಸುರೇಶ್ನನ್ನು ಬಂಧಿಸಿ ಮೂವರನ್ನೂ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ಮೂರು ಜನರು ಈಗ ಚಿಕ್ಕಮಗಳೂರಿನ ಕಾರಾಗೃಹದಲ್ಲಿ ಬಂಧಿಯಾಗಿದ್ದಾರೆ. ಇವರ ವಿರುದ್ಧ ಪೋಕ್ಸೋ ಮತ್ತು ಅತ್ಯಾಚಾರ ಪ್ರಕರಣ ದಾಖಲಾಗಿದೆ ಎಂದು ತರೀಕೆರೆ ಡಿವೈಎಸ್ಪಿ ಹಾಲಮೂರ್ತಿ ರಾವ್ ಮಾಹಿತಿ ನೀಡಿದರು. ಕಾರ್ಯಾಚರಣೆಯಲ್ಲಿ ವೃತ್ತ ನಿರೀಕ್ಷಕ ಶಿವಕುಮಾರ್,ಕಡೂರು ಪಿಎಸ್ಐ ಧನಂಜಯ ಮತ್ತು ಸಿಬ್ಬಂದಿ ಇದ್ದರು.
ಇದನ್ನೂ ಓದಿ: Road Mishap: ದೆಹಲಿ-ಜೈಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಮೃತ್ಯು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.