ದುಡ್ಡು ಪಡೆದು ಹಿಂತಿರುಗಿಸದ ಆರೋಪ: ಕಾರ್ಮಿಕರನ್ನು ಕೊಠಡಿಯಲ್ಲಿ ಕೂಡಿ ಹಾಕಿದ ತೋಟದ ಮಾಲೀಕ
ಗರ್ಭಿಣಿ ಮಹಿಳೆಯ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು
Team Udayavani, Oct 11, 2022, 1:38 PM IST
ಚಿಕ್ಕಮಗಳೂರು : ಕೆಲಸಕ್ಕೆ ಸೇರುವಾಗ ತೋಟದ ಮಾಲೀಕನಿಂದ ದುಡ್ಡು ಪಡೆದು ವಾಪಸ್ಸು ನೀಡದ ಆರೋಪದ ಮೇಲೆ ತೋಟದ ಮಾಲೀಕ ತನ್ನ ಕಾರ್ಮಿಕರನ್ನು ಕೊಠಡಿಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರಿನ ಬಾಳೆಹೊನ್ನೂರು ಸಮೀಪದ ಜೇನುಗದ್ದೆಯ ಪುರದಲ್ಲಿ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.
ತೋಟದ ಕೆಲಸಕ್ಕೆ ಬಂದಿದ್ದ ಕಾರ್ಮಿಕರು ತೋಟದ ಮಾಲೀಕನಲ್ಲಿ ಮುಂಗಡವಾಗಿ ಒಂಬತ್ತು ಲಕ್ಷ ರೂಪಾಯಿ ಪಡೆದುಕೊಂಡಿದ್ದರು ಎನ್ನಲಾಗಿದೆ ಆದರೆ ಈಗ ಕಾರ್ಮಿಕರು ಬೇರೆ ಕಡೆಗೆ ಕೆಲಸಕ್ಕೆ ಹೋಗುವುದಾಗಿ ಮಾಲೀಕರಲ್ಲಿ ಹೇಳಿದ್ದಾರೆ ಅದಕ್ಕೆ ಮಾಲೀಕ ತನ್ನಿಂದ ಮುಂಗಡವಾಗಿ ಪಡೆದಿರುವ ಹಣವನ್ನು ಹಿಂದೆ ಕೊಡುವಂತೆ ಕಾರ್ಮಿರಲ್ಲಿ ಕೇಳಿದ್ದಾರೆ, ಅದಕ್ಕೆ ಕಾರ್ಮಿಕರು ಸದ್ಯ ನಮ್ಮ ಬಳಿ ಹಣ ಇಲ್ಲ ಸ್ವಲ್ಪ ಸಮಯ ಕೊಡಿ ನಿಮ್ಮ ದುಡ್ಡು ವಾಪಸ್ಸು ನೀಡುತ್ತೇವೆಂದು ಹೇಳಿದ್ದಾರೆ, ಇದರಿಂದ ಕೋಪಗೊಂಡ ತೋಟದ ಮಾಲೀಕ ದುಡ್ಡು ಕೊಡುವವರೆಗೆ ಇಲ್ಲಿಂದ ಹೋಗುವಹಾಗಿಲ್ಲ ಎಂದು ಕಾರ್ಮಿಕರನ್ನು ತನ್ನ ತೋಟದ ಮನೆಯ ಕೊಠಡಿಯಲ್ಲಿ ಕೂಡಿ ಹಾಕಿದ್ದಾರೆ.
ತೋಟದ ಮಾಲೀಕರ ಜೊತೆ ಮಾತನಾಡುವ ಸಂದರ್ಭದ ವಿಡಿಯೋ ಚಿತ್ರೀಕರಣವನ್ನು ಕಾರ್ಮಿಕ ಮಹಿಳೆಯೊಬ್ಬರು ಮಾಡಿದ್ದಾರೆ ಇದರಿಂದ ಕೋಪಗೊಂಡ ಮಾಲೀಕ ಆಕೆ ಗರ್ಭಿಣಿ ಎನ್ನದೆ ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ ಅಲ್ಲದೆ ಇದನ್ನು ತಡೆಯಲು ಬಂದವರ ಮೇಲೂ ಹಲ್ಲೆ ನಡೆಸಿದ್ದಾರೆ.
ಸದ್ಯ ಮಹಿಳೆ ಚಿಕ್ಕಮಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಈ ಕುರಿತು ಮಾತನಾಡಿದ ಕಾರ್ಮಿಕ ಕುಟುಂಬ ಹಲ್ಲೆ ಕುರಿತು ಪೊಲೀಸರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಲಿಲ್ಲ ನಮಗೆ ನ್ಯಾಯ ದೊರಕಿಸಿಕೊಡಿ ಎಂದು ಕಾರ್ಮಿಕ ಕುಟುಂಬ ಆಗ್ರಹಿಸಿದೆ.
ಇದನ್ನೂ ಓದಿ : ಮೀಸಲಾತಿ ಬಗ್ಗೆ ನಿರ್ಧರಿಸಿದ್ದೇವೆ; ಕ್ರೆಡಿಟ್ ತಗೋಳ್ತೇವೆ: ನಳಿನ್ ಕುಮಾರ್ ಕಟೀಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.