![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 20, 2024, 12:04 PM IST
ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್ ಪ್ರದೇಶಕ್ಕೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಶುಕ್ರವಾರ ಸಂಜೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ರಸ್ತೆ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಿದರು.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿ’ ಚಾರ್ಮಾಡಿ ಘಾಟ್ ನಲ್ಲಿ ತಡೆಗೋಡೆ ಕುಸಿತ, ಬಿರುಕು ಮತ್ತಿತರ ಸಮಸ್ಯೆ ಗಮನಕ್ಕೆ ಬಂದಿದ್ದು, ಅದನ್ನು ಪರಿಶೀಲಿಸಲು ಬಂದಿದ್ದೇವೆ. ಹಾಗೆಯೇ ಮಡಿಕೇರಿ,ಸಕಲೇಶಪುರ ಮಾರ್ಗದಲ್ಲಿ ಗುಡ್ಡ ಕುಸಿತದ ಹಿನ್ನಲೆಯಲ್ಲಿ ಈ ರಸ್ತೆ ಸಂಚಾರಕ್ಕೆ ಯೋಗ್ಯವಾಗಿದೆಯೇ ಎಂಬುದರ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಮನವರಿಕೆ ಮಾಡಿಕೊಂಡು ವಾಹನಗಳ ಸಂಚಾರಕ್ಕೆ ಮುಕ್ತ ಅವಕಾಶ ನೀಡಲು ನಿರ್ಧಾರ ತೆಗೆದುಕೊಳ್ಳಲಿದ್ದೇವೆ.
ಹಗಲಿನಲ್ಲಿಯೇ ಹೆಚ್ಚು ವಾಹನ ಬಿಡಲು ಕ್ರಮಕೈಗೊಳ್ಳಲಾಗುವುದು.ಈಗಾಗಲೇ ಬಾರಿ ಘನವಾಹನಗಳಿಗೆ ಚಾರ್ಮಾಡಿ ಘಾಟ್ ನಲ್ಲಿ ಸಂಚರಿಸಲು ಹಿಂದಿನಿಂದಲೂ ನಿಷೇಧವಿದೆ. ಸರ್ಕಾರಿ ಬಸ್, ಗೂಡ್ಸ್ ವಾಹನ, ಲಘುವಾಹನಗಳಿಗೆ ಸಂಚರಿಸಲು ಅವಕಾಶವಿದೆ. ಆದರೆ ಮತ್ತೊಮ್ಮೆ ಕೊಡಗು, ಹಾಸನ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ಜನರ ಅನುಕೂಲತೆ ಮೇರೆಗೆ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ಎಂದರು.
ಚಿಕ್ಕಮಗಳೂರು ವರಿಷ್ಠಾಧಿಕಾರಿ ವಿಕ್ರಂ ಅಮಟೆ ಮಾತನಾಡಿ’ಚಾರ್ಮಾಡಿ ಘಾಟಿಯಲ್ಲಿ ರಾತ್ರಿಯ ಹೊತ್ತಲ್ಲಿ ಮಳೆಯ ಹಿನ್ನಲೆಯಲ್ಲಿ ವಾಹನ ಸಂಚಾರ ನಿಷೇಧಕ್ಕೆ ಚಿಂತನೆ ನಡೆಸಲಾಗಿತ್ತು. ಆದರೆ ಮಡಿಕೇರಿ, ಶಿರಾಡಿ ಘಾಟ್ ಬಂದ್ ಆದ ಹಿನ್ನಲೆಯಲ್ಲಿ ಚಾರ್ಮಾಡಿ ಮಾತ್ರ ಸಂಚಾರಕ್ಕೆ ಮುಕ್ತವಾಗಿರುವುದರಿಂದ ಸಂಚಾರ ನಿಷೇಧದ ಬಗ್ಗೆ ನಿರ್ಧಾರ ಸದ್ಯಕ್ಕೆ ಕೈಗೊಂಡಿಲ್ಲ’ ಎಂದರು.
ಸ್ಥಳೀಯ ಸಮಾಜ ಸೇವಕ ಸಂಜಯ್ ಗೌಡ, ತನುಕೊಟ್ಟಿಗೆಹಾರ, ಸಾಗರ್ ಮತ್ತಿತರರು ಚಾರ್ಮಾಡಿ ಘಾಟ್ ತಡೆಗೋಡೆ ಬಿರುಕು, ಕಾಮಗಾರಿ ಕಳಪೆ ಮಟ್ಟದಿಂದ ಕೂಡಿದೆ.
ಚಾರ್ಮಾಡಿ ರಸ್ತೆಯ ಬಲ ಬದಿಯಲ್ಲಿ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆ ಕುಸಿಯುತ್ತದೆ. ರಸ್ತೆಯ ಬದಿ ಕಾಡು ಕಡಿದಿಲ್ಲ ಎಂದು ಅಧಿಕಾರಿಗಳ ಗಮನಕ್ಕೆ ತಂದರು.
ರಾಷ್ಟ್ರೀಯ ಹೆದ್ದಾರಿ ಕಾರ್ಯಪಾಲಕ ಇಂಜೀನಿಯರ್ ಜಯಣ್ಣ ಮಾತನಾಡಿ’ ಕಳಪೆ ಕಾಮಗಾರಿ ಆಗಿಲ್ಲ.2019 ರಲ್ಲಿ ಭೂಕುಸಿತದಿಂದ ಅರ್ಧ ರಸ್ತೆಯೇ ಕುಸಿದಿತ್ತು.ಅದನ್ನು ಕೆಳಗಿನಿಂದಲೇ ರಿವಿಟ್ ಮೆಂಟ್ ಮಾಡಿ ರಸ್ತೆ ಸರಿಪಡಿಸಲಾಗಿದೆ.ತಡೆಗೋಡೆ ಮಾಡಿ ಬಳಿಕ ಆದರ ಆ ಕಡೆ ಎರಡೂವರೆ ಮೀಟರ್ ಸ್ಲ್ಯಾಬ್ ಹಾಕಲಾಗಿದೆ.ಅದನ್ನು ಸಮತಟ್ಟು ಮಾಡಲು ರೋಲರ್ ನಿಂದ ಕಷ್ಟ ಸಾಧ್ಯ. ಹಾಗಾಗಿ ಸ್ಲ್ಯಾಬ್ ಜಗ್ಗಿದೆ.ಅದಕ್ಕೆ ವೆಟ್ ಮಿಕ್ಸ್ ಹಾಕಿ ಸರಿಪಡಿಸಲಾಗಿದೆ.ಬೇಸಿಗೆಯಲ್ಲಿ ಮತ್ತೊಮ್ಮೆ ಕಾಮಗಾರಿ ಪರಿಶೀಲಿಸಿ ಸಮಸ್ಯೆ ಬಗೆಹರಿಸಲಾಗುವುದು.ಚರಂಡಿ ಕಾಮಗಾರಿ ಹಾಗೂ ಜಂಗಲ್ ಕಟ್ಟಿಂಗ್ ಬಗ್ಗೆ ವ್ಯವಸ್ಥೆ ಮಾಡಲಾಗುವುದು. ಲಘು ಹಾಗೂ ಸಾಮಾನ್ಯ ವಾಹನಗಳು ಈ ರಸ್ತೆಯಲ್ಲಿ ಸಂಚರಿಸಲು ಈ ರಸ್ತೆ ಯೋಗ್ಯವಾಗಿದೆ’ ಎಂದರು. ಭೇಟಿಯ ಸಂದರ್ಭದಲ್ಲಿ ಸಿಇಒ ಕೆ.ಎಸ್.ಗೀತಾ, ಎಇಇ ಕಾಂಬ್ಳೆ, ಎಇ ಸಂತೋಷ್,ಮೂಡಿಗೆರೆ ಇನ್ ಸ್ಪೆಕ್ಟರ್ ಸೋಮೇಗೌಡ,ಬಣಕಲ್ ಸಬ್ ಇನ್ ಸ್ಪೆಕ್ಟರ್ ಡಿ.ವಿ.ರೇಣುಕಾ ಮತ್ತಿತರರು ಇದ್ದರು.
ಇದನ್ನೂ ಓದಿ: UPSC: ಅವಧಿ ಮುಗಿಯುವ ಮೊದಲೇ ಯುಪಿಎಸ್ಸಿ ಅಧ್ಯಕ್ಷ ಸ್ಥಾನಕ್ಕೆ ಮನೋಜ್ ಸೋನಿ ರಾಜೀನಾಮೆ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.