Chikkamagaluru ಜಿನ್ನಾ- ಕಾಂಗ್ರೆಸ್ ಮನಸ್ಥಿತಿ ಬೇರೆಯಲ್ಲ: ಸಿ.ಟಿ.ರವಿ
Team Udayavani, Dec 24, 2023, 7:25 PM IST
ಚಿಕ್ಕಮಗಳೂರು: ಸಿಎಂ ಸಿದ್ದರಾಮಯ್ಯ ತಮ್ಮ ರಾಜಕೀಯ ಲಾಭಕ್ಕೆ ಸಮಾಜದಲ್ಲಿನ ಶಾಂತಿ ಕದಡಿ ರಾಜಕೀಯ ಲಾಭ ಪಡೆಯುವ ಸಂಚು ಹೂಡಿದ್ದು ಅದು ಅವರ ಹೇಳಿಕೆಯಲ್ಲಿ ವ್ಯಕ್ತವಾಗಿದೆ ಎಂದು ಮಾಜಿ ಶಾಸಕ ಸಿ.ಟಿ.ರವಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆಯಲ್ಲಿ ಸಮವಸ್ತ್ರ ಇರಬೇಕೋ, ಬೇಡವೋ ಎನ್ನುವುದು ಚರ್ಚೆಯ ವಿಷಯವಾಗಬಾರದು. ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಯಾವ ಉದ್ದೇಶಕ್ಕೆ ತಂದಿದ್ದಾರೆ ಎಂಬುದನ್ನು ಅರ್ಥೈಸಿಕೊಳ್ಳಬೇಕು. ಇದು ಅರ್ಥ ಮಾಡಿಕೊಳ್ಳದೆ ಶಾಲಾ-ಕಾಲೇಜು ಮಕ್ಕಳಲ್ಲಿಯೂ ಜಾತಿ ಮತ್ತು ಕೋಮುವಾದದ ವಿಷ ಬೀಜ ಬಿತ್ತುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ.
ಶಾಲಾ ಮಕ್ಕಳಲ್ಲಿ ವಿಷ ಬೀಜ ಬಿತ್ತುವುದು, ಕೋಮುವಾದ ಬಿತ್ತುವುದು ಅದೊಂದು ರಾಷ್ಟ್ರಘಾತಕ ಕೆಲಸ. ಮಹಮದ್ ಆಲಿ ಜಿನ್ನಾ ಮತ್ತು ಕಾಂಗ್ರೆಸ್ ಮನಸ್ಥಿತಿ ಬೇರೆ ಬೇರೆಯಲ್ಲ. ಜಿನ್ನಾ ಕೂಡ ಪ್ರತ್ಯೇಕತೆ ಭಾವನೆಯನ್ನು ಬಿತ್ತಿ ಬೆಳೆಸಿ, ಆ ಮೂಲಕ ಭಾರತದ ವಿಭಜನೆಗೆ ಕಾರಣನಾದ. ಇವತ್ತು ಕಾಂಗ್ರೆಸ್ ತನ್ನ ರಾಜಕೀಯ ಲಾಭಕ್ಕೆ ಶಾಲಾ ಮಕ್ಕಳಲ್ಲೂ ಪ್ರತ್ಯೇಕತೆ ಭಾವನೆ ಬಿತ್ತಿ ಸಮಾಜವನ್ನು ಒಡೆಯುತ್ತಿದೆ. ಇದು ಅಕ್ಷಮ್ಯ ಅಪರಾಧ. ಈ ಮನಸ್ಥಿತಿಯನ್ನು ಇತಿಹಾಸ ಮತ್ತು ವರ್ತಮಾನವೂ ಕ್ಷಮಿಸುವುದಿಲ್ಲ.
ಬಾಬಾಬುಡನ್ ದರ್ಗಾ ಹಾಗೂ ದತ್ತಪೀಠವೇ ಬೇರೆ ಬೇರೆ ಎನ್ನುವುದನ್ನು ನಿರಂತರವಾಗಿ ಹೇಳುತ್ತಾ ಬಂದಿದ್ದೇವೆ. ಈ ಬಗ್ಗೆ ತನಿಖೆ ನಡೆಸಿ ಸತ್ಯ ಮತ್ತು ದಾಖಲೆಗಳ ಆಧಾರದ ಮೇಲೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು
Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ
ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ
Chikkamagaluru ಮುಖ್ಯವಾಹಿನಿಗೆ ಮರಳಿದ ನಕ್ಸಲರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮನವಿ
CT Ravi: ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.