Chikkamagaluru: ರಾಹುಲ್ ಗಾಂಧಿ ಭಾರತ ವಿರೋಧಿ ನಾಯಕರೆಂಬ ಅನುಮಾನ ಕಾಡುತ್ತಿದೆ: ಸಿ.ಟಿ ರವಿ


Team Udayavani, Sep 14, 2024, 4:01 PM IST

ct-ravi

ಚಿಕ್ಕಮಗಳೂರು: ರಾಹುಲ್ ಗಾಂಧಿ (Rahul Gandhi) ಲೋಕಸಭೆ ವಿರೋಧ ಪಕ್ಷದ ನಾಯಕರೋ, ಭಾರತ ವಿರೋಧಿ ನಾಯಕರೋ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ (C.T Ravi) ಪ್ರಶ್ನಿಸಿದರು.

ಶನಿವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ರಾಹುಲ್ ಗಾಂಧಿ ಭಾರತ ವಿರೋಧಿ ನಾಯಕರು ಎಂಬ ಅನುಮಾನ ಕಾಡುತ್ತಿದೆ. ಭಾರತಕ್ಕೆ ಚೀನಾ, ಪಾಕಿಸ್ತಾನ ವಿರೋಧಿ ಆದರೆ, ರಾಹುಲ್ ಹೇಳಿಕೆ, ಚಟುವಟಿಕೆ ಭಾರತಕ್ಕೆ ವಿರೋಧಿಯಂತಿದೆ ಎಂದರು.

ಅಮೆರಿಕಾದಲ್ಲಿ ರಾಹುಲ್ ಗಾಂಧಿಯವರು ಇಲಿಯಾಸ್ ಓಮರ್ ಎಂಬ ಭಾರತ ವಿರೋಧಿ ಸಂಸದರನ್ನು ಭೇಟಿಯಾಗಿದ್ದಾರೆ. ಇಂಗ್ಲೆಂಡಿಗೆ ಭೇಟಿ ನೀಡಿದಾಗ ಭಾರತ ವಿರೋಧಿಗಳನ್ನು ಭೇಟಿ ಮಾಡುತ್ತಾರೆ. ಅಮೆರಿಕಾದಲ್ಲಿ ಭಾರತ ವಿರೋಧಿಗಳ ಜತೆ ಮಾತುಕತೆ ಮಾಡುತ್ತಾರೆ. ಚೀನಾವನ್ನು ಹೊಗಳುತ್ತಾರೆ. ಹೊರದೇಶದಲ್ಲಿ ಭಾರತವನ್ನು ತೆಗಳುತ್ತಾರೆ ಎಂದು ರಾಹುಲ್ ಗಾಂಧಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ನಾಗಮಂಗಲ ಗಲಭೆ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿ, ಗಣಪತಿ ಮೆರವಣಿಗೆಯಲ್ಲಿದ್ದವರು ಯಾವ ಮುಸ್ಲಿಂ ಮೇಲು ತಲ್ವಾರ್ ಝಳಪಿಸಿಲ್ಲ, ಮಸೀದಿ ಮೇಲೆ ಕಲ್ಲು ತೂರಿಲ್ಲ. ತಲ್ವಾರ್ ಝಳಪಿಸಿದ್ದು ಕಲ್ಲು ತೂರಿದ್ದು ಮುಸ್ಲಿಂ ಮತಾಂಧರು ಎಂದರು.

ಮತಾಂಧರ ಮೇಲೆ ಕ್ರಮ ಆಗಬೇಕಿತ್ತು. ಈ ಹೇಡಿ ಸರ್ಕಾರ ಗಣಪತಿ ಕೂರಿಸಿದವರನ್ನೇ ಎ1 ಮಾಡಿದೆ. 1 ರಿಂದ 18 ಆರೋಪಿಗಳು ಶಾಂತಿಯುತ ಮೆರವಣಿಗೆ ಮಾಡಿದವರು. ಓಲೈಕೆ ರಾಜನೀತಿ ಪರಿಣಾಮ ಮತಾಂಧತೆಗೆ ಕೊನೆ ಇಲ್ಲದಂತಾಗಿದೆ ಎಂದು ದೂರಿದರು.

ಗಣಪತಿ ಮೆರವಣಿಗೆ ಬರಬಾರದು ಎನ್ನಲು ಅವರು ಯಾರು? ಮೊದಲು ಅವರನ್ನು ಒದ್ದು ಒಳಗೆ ಹಾಕಬೇಕಿತ್ತು. ಸರ್ಕಾರ ಗಣಪತಿ ಕೂರಿಸಿದವರನ್ನು ಎ1 ಮಾಡಿದ ಈ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ನಾಗಮಂಗಲ ಶಾಂತಿ ಸಭೆಗೆ ಮಾಧ್ಯಮ ನಿರ್ಬಂಧ ಮತ್ತು ಮುತಾಲಿಕ್ ಆಗಮನಕ್ಕೆ ನಿರ್ಬಂಧ ಸಂಬಂಧ ಮಾತನಾಡಿದ ಅವರು, ಲಾಡೆನ್ ಬಂದರೆ ಹಮಾರ ಆದ್ಮಿ ಎಂದು ಬಿಟ್ಟುಕೊಳ್ಳುತ್ತಾರೆ. ಮುತಾಲಿಕ್ ಹೋದರೆ ಇವರಿಗೆ ಸಂಕಟ. ಬಾಂಬ್ ಹಾಕುವವನು, ತಾಲಿಬಾನಿಗಳು ಬಂದರೇ, ನಮ್ದುಕೆ ಜನ ನಮ್ಗೆ ಓಟ್ ಹಾಕ್ತಾರೆ ಅಂತ ಕಾಂಗ್ರೆಸ್ ನವರು ತಲೆ ಮೇಲೆ ತೋಪಿ ಹಾಕ್ಕೊಂಡು ಕರೆದುಕೊಳ್ಳುತ್ತಾರೆ. ತಾಲಿಬಾನಿಗಳು ಇವರೋ ಅವರೋ ಯಾರು ಎಂಬ ವ್ಯತ್ಯಾಸನೇ ಗೊತ್ತಾಗದಂಗೆ ನಾಟಕ ಮಾಡುತ್ತಾರೆ. ಮಾಧ್ಯಮಗಳನ್ನು ಹೊರಗಿಟ್ಟು ಶಾಂತಿಸಭೆ ಮಾಡುವುದು ತಮ್ಮ ಹುಳುಕು ಮುಚ್ಚಿಕೊಳ್ಳಲಿಕ್ಕಾ ಎಂದು ಪ್ರಶ್ನಿಸಿದ ಅವರು ಇಂಟಾಲರೆನ್ಸ್ ಮೈಂಡ್ ಸೆಟ್ ಸರಿಪಡಿಸಲಿ ಆಗ ಶಾಂತಿ ನೆಲೆಸುತ್ತದೆ ಎಂದರು.

ಟಾಪ್ ನ್ಯೂಸ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

12

Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-araga

Thirthahalli ಹಣಗೆರೆಕಟ್ಟೆಯಲ್ಲಿ ಪ್ಯಾಲೆಸ್ತೀನ್ ಪರ ಫ್ಲೆಕ್ಸ್:ಕ್ರಮಕ್ಕೆ ಆರಗ ಒತ್ತಾಯ

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

10-ns-bosuaju

Raichur: ಬಿಜೆಪಿಯವರು ಮೈಮೇಲೆ ಬಂದಂತೆ ಆಡುತ್ತಿದ್ದಾರೆ: ಸಚಿವ ಎನ್.ಎಸ್.ಭೋಸರಾಜು

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.