![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jul 28, 2024, 2:41 PM IST
ಚಿಕ್ಕಮಗಳೂರು: ಮಳೆ ಮಧ್ಯೆ ಮಲೆನಾಡಲ್ಲಿ ಕಾಡಾನೆಗಳ ಕಾಟವೂ ಶುರುವಾಗಿದೆ.
18 ಕಾಡಾನೆಗಳ ಹಿಂಡಿನಿಂದ ಮಲೆನಾಡಿಗರು ಕಂಗಾಲಾಗಿದ್ದು, ಕಾಫಿ ತೋಟಗಳನ್ನು ನಾಶ ಮಾಡಿವೆ.
ಮೂಡಿಗೆರೆ ತಾಲೂಕಿನ ಪುರ, ಗಬ್ಬಳ್ಳಿ, ಕಾರ್ಬೈಲು ಗ್ರಾಮದ ಸುತ್ತಮುತ್ತ ಕಾಡಾನೆಗಳು ಕಾಣಿಸಿಕೊಳ್ಳುತ್ತಿದ್ದು, ಕಾಡಾನೆಗಳ ಹಿಂಡು ದಿನಕ್ಕೊಂದು ಹಳ್ಳಿ ಭಾಗದಲ್ಲಿ ಕಾಣಿಸಿಕೊಳ್ಳುತ್ತಿದೆ.
ಈಗಾಗಲೇ ಮಳೆಯಿಂದಾಗಿ ಮೂಡಿಗೆರೆ ತಾಲೂಕಿನಲ್ಲಿ ನಾನಾ ಅವಾಂತರವಾಗಿದ್ದು, ಇದೀಗ ಮತ್ತೆ ಕಾಡಾನೆಗಳ ದಾಳಿಯಿಂದ ಮಲೆನಾಡು ಭಾಗದವರು ಕಂಗಾಲಾಗಿದ್ದಾರೆ.
18 ಕಾಡಾನೆಗಳು ತಂಡಗಳಾಗಿ ಒಂದೊಂದು ಹಳ್ಳಿಗೆ ದಾಂಗುಡಿ ಇಡುತ್ತಿದ್ದು, ಆನೆಗಳನ್ನು ಓಡಿಸುವಂತೆ ಮೂಡಿಗೆರೆಯ ಗ್ರಾಮೀಣ ಭಾಗದ ಜನರು ಆಗ್ರಹಿಸುತ್ತಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.