ಅಂತರ್‌ ಜಿಲ್ಲಾ ಬಸ್‌ ಸಂಚಾರ ಆರಂಭ


Team Udayavani, May 20, 2020, 1:23 PM IST

20-April-09

ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು: ಕೋವಿಡ್ ಸೋಂಕು ತಡೆಗೆ ವಿ ಧಿಸಿರುವ ನಾಲ್ಕನೇ ಹಂತದ ಲಾಕ್‌ಡೌನ್‌ ನಿರ್ಬಂಧ ಸಡಲಿಸಿ ಅಂತರ್‌ ಜಿಲ್ಲಾ ಬಸ್‌ ಸಂಚಾರಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಿಂದ ಬೆಂಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಿಗೆ ಬಸ್‌ ಸಂಚಾರ ಆರಂಭಿಸಿದವು.

ಮಂಗಳವಾರ ನಗರದ ಕೆಎಸ್‌ಆರ್‌ ಟಿಸಿ ಬಸ್‌ ನಿಲ್ದಾಣದಿಂದ 33 ಕೆಎಸ್‌ಆರ್‌ ಟಿಸಿ ಬಸ್‌ಗಳು ಅಂತರ್‌ ಜಿಲ್ಲಾ ಸಂಚಾರ ನಡೆಸಿದವು. ಈಶಾನ್ಯ, ವಾಯುವ್ಯ ವಿಭಾಗ ಹಾಗೂ ಕೆಂಪು ವಲಯವೆಂದು ಘೋಷಿಸಿರುವ ಜಿಲ್ಲೆಗಳಿಗೆ ಬಸ್‌ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಬೆಂಗಳೂರಿಗೆ 11 ಕೆಎಸ್‌ಆರ್‌ ಟಿಸಿ ಬಸ್‌ ಸಂಚರಿಸಿದ್ದು, ಹೆಚ್ಚಿನ ಪ್ರಯಾಣಿಕರು ಬೆಂಗಳೂರು ನಗರವನ್ನು ತಲುಪಿದರು. ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿಗೆ ಕೊನೆಯ ಬಸ್‌ ಸಂಚಾರ ನಡೆಸಿತು.

ಮಂಗಳೂರು, ಉಡುಪಿ, ಕಲಬುರಗಿ, ರಾಯಚೂರು ಜಿಲ್ಲೆಗಳಿಗೆ ಬಸ್‌ ಸಂಚಾರ ನಡೆಸಲಿಲ್ಲ. ಶಿವಮೊಗ್ಗ ಜಿಲ್ಲೆಗೆ ಮಧ್ಯಾಹ್ನ 3 ಗಂಟೆಗೆ ಕೊನೆ ಬಸ್‌ ಕೊನೆ ಬಸ್‌ ಸಂಚಾರ ನಡೆಸಿದ್ದು, 4 ಬಸ್‌ ಗಳು ಸಂಚಾರ ನಡೆಸಿದವು. ಹಾಸನ ಜಿಲ್ಲೆಗೆ ಮಂಗಳವಾರ ಸಂಜೆ 5:30ಕ್ಕೆ ಕೊನೆಯ ಬಸ್‌ ಸಂಚಾರ ನಡೆಸಿದ್ದು, 8 ಬಸ್‌ ಸಂಚಾರ ನಡೆಸಿದವು. ಉಳಿದಂತೆ ಕಡೂರು, ಶೃಂಗೇರಿ, ಕೊಪ್ಪ, ಮೂಡಿಗೆರೆ ತಾಲೂಕುಗಳಿಗೆ ಜಿಲ್ಲಾ ಕೇಂದ್ರದಿಂದ 20ಕ್ಕೂ ಹೆಚ್ಚು ಬಸ್‌ಗಳು ಸಂಚಾರ ನಡೆಸಿದವು ಎಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಿಲ್ದಾಣಾಧಿಕಾರಿ ಜಗದೀಶ್‌ ಮಾಹಿತಿ ನೀಡಿದರು.

ವಿವಿಧ ಮಾರ್ಗಗಳಿಗೆ ಬಸ್‌ ಸಂಚಾರಕ್ಕೂ ಮುನ್ನ ಸ್ಯಾನಿಟೈಸರ್‌ ನಿಂದ ಸ್ವಚ್ಛಗೊಳಿಸಲಾಗಿದೆ. ಹಾಸನ, ಶಿವಮೊಗ್ಗ, ಕಡೂರು, ಶೃಂಗೇರಿ, ಕೊಪ್ಪ, ಮೂಡಿಗೆರೆಗೆ ಎಂದಿನಂತೆ ಪ್ರಯಾಣಿಕರಿದ್ದರು. ಒಂದು ಬಸ್‌ನಲ್ಲಿ 30 ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗಿತ್ತು ಎಂದರು.

ಬೆಂಗಳೂರಿಗೆ ತೆರಳಲು ಬುಕ್ಕಿಂಗ್‌ ಗೆ ಅವಕಾಶವಿದೆ. ಸಂಸ್ಥೆಯ ಎಲ್ಲಾ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿದ್ದು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲಾಗಿದೆ ಎಂದು ತಿಳಿಸಿದ ಅವರು, ಪ್ರಯಾಣಿಕರು ಬಸ್‌ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ನಿಲ್ದಾಣದ ಪ್ರವೇಶದ್ವಾರದಲ್ಲೇ ತಡೆದು ಸ್ಯಾನಿಟೈಸರ್‌ ಹಾಗೂ ಮಾಸ್ಕ್ ಧರಿಸಿ ನಂತರವೇ ಬಸ್‌ನಲ್ಲಿ ಪ್ರಯಾಣ ಬೆಳೆಸಲು ಅವಕಾಶ ನೀಡಲಾಗಿದೆ ಎಂದರು.

ಸಾಮಾಜಿಕ ಅಂತರ ಕಾಪಾಡಿಕೊಂಡು ಟಿಕೆಟ್‌ ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ. ಪ್ರಯಾಣಿಕರ ವಿಳಾಸವನ್ನು ಕಡ್ಡಾಯವಾಗಿ ಪಡೆದುಕೊಳ್ಳಲಾಗುತ್ತಿದೆ. ಪ್ರಯಾಣಿಕರು ಆಧಾರ್‌ ಕಾರ್ಡ್‌ ಕಡ್ಡಾಯವಾಗಿ ನೀಡಬೇಕು ಎಂದರು. ಸರ್ಕಾರ ಖಾಸಗಿ ಹಾಗೂ ನಗರ ಸಾರಿಗೆ ಬಸ್‌ ಸಂಚಾರಕ್ಕೆ ಅವಕಾಶ ನೀಡಿದರೂ ಜಿಲ್ಲೆಯಲ್ಲಿ ಯಾವುದೇ ಖಾಸಗಿ ಬಸ್‌ಗಳು ರಸ್ತೆಗಿಳಿಯದಿರುವುದು ವಿಶೇಷವಾಗಿತ್ತು. ಲಾಕ್‌ಡೌನ್‌ನಿಂದ ಕಳೆದ 55 ದಿನಗಳಿಂದ ಹೊರ ಜಿಲ್ಲೆಗಳಿಗೆ ಯಾವುದೇ ಸಾರಿಗೆ ಸಂಪರ್ಕವಿಲ್ಲದೆ ಕಂಗೆಟ್ಟಿದ್ದ ಜನರು ನಿಟ್ಟುಸಿರು ಬಿಟ್ಟರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

8-ckm

Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

Elephant: ಕಾಫಿನಾಡಿನಲ್ಲಿ ಕಾಡಾನೆಗಳ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.