ಕೊಡುಗೈ ದಾನಿ,ಉದ್ಯಮಿ ನಾರ್ಬರ್ಟ್ ಸಾಲ್ಡಾನ ನಿಧನಕ್ಕೆ ಮಿಡಿದ ಜನಸಾಗರ

ಬಣಕಲ್ ಚರ್ಚ್ ಹಾಲ್ ನಲ್ಲಿ ಅಂತಿಮ ದರ್ಶನ, ರಸ್ತೆಯುದ್ದಕ್ಕೂ ಪುಷ್ಪಾರ್ಚನೆ

Team Udayavani, Jan 8, 2024, 8:58 PM IST

1-asdasdsa

ಕೊಟ್ಟಿಗೆಹಾರ : ಶನಿವಾರ ನಿಧನ ಹೊಂದಿದ್ದ ಕೊಡುಗೈ ದಾನಿ,ಬಡವರ ಬಂಧು,ಉದ್ಯಮಿ ಕುಂದೂರು ನಾರ್ಬರ್ಟ್ ಸಾಲ್ಡಾನ ಅವರ ಅಂತಿಮ ಕ್ರಿಯೆ ಸೋಮವಾರ ಬಣಕಲ್ ನಲ್ಲಿ ನಡೆಸಲಾಯಿತು.ಬಣಕಲ್ ಚರ್ಚ್ ನಲ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಜಾತಿಮತಬೇದವೆನ್ನದೇ ಸಹಸ್ರಾರು ಮಂದಿ ಕೊಡುಗೈ ದಾನಿಯ ಅಂತಿಮ ದರ್ಶನ ಪಡೆದು ಕಂಬನಿ ಮಿಡಿದರು.

ಕುಂದೂರು ಸೇರಿದಂತೆ ಮೂಡಿಗೆರೆ,ಮಂಗಳೂರು, ಚಿಕ್ಕಮಗಳೂರು,ಅರೇಹಳ್ಳಿ.ಸಕಲೇಶಪುರ, ಹಾಸನ ಮತ್ತಿತರ ಕಡೆಯಿಂದ ಬಂಧುಗಳು,ಸಾರ್ವಜನಿಕರು ಅಂತಿಮ ದರ್ಶನದಲ್ಲಿ ಪಾಲ್ಗೊಂಡರು.ಮಧ್ಯಾಹ್ನ 1ಗಂಟೆಯಿಂದ 3.30 ವರೆಗೂ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ಮಾಜಿ ಸಚಿವರಾದ ಮೋಟಮ್ಮ, ಬಿ.ಬಿ.ನಿಂಗಯ್ಯ, ತಾರಾದೇವಿ, ಜೆಡಿಎಸ್ ಮುಖಂಡ ರಂಜನ್ ಅಜಿತ್ ಕುಮಾರ್,ಬಿಜೆಪಿ ಮುಖಂಡ ಕೆ.ಸಿ.ರತನ್, ಕಾಂಗ್ರೆಸ್ ಮುಖಂಡರಾದ ಬಿ.ಎಸ್ ಜಯರಾಮ್ ಗೌಡ,ಟಿ.ಎಂ. ಸುಬ್ರಹ್ಮಣ್ಯ,ಹರ್ಷ ಮೆಲ್ವಿನ್ ಲಸ್ರಾದೊ, ನಜರೆತ್ ಶಾಲೆಯ ಪ್ರಾಂಶುಪಾಲರಾದ ಸಿಸ್ಟರ್ ಹಿಲ್ಡಾಲೋಬೊ,ಚಿಕ್ಕಮಗಳೂರು ಕ್ರೈಸ್ತ ಧರ್ಮಾಧ್ಯಕ್ಷ ಡಾ.ಅಂತೋನಿ ಸ್ವಾಮಿ ನೇತೃತ್ವದಲ್ಲಿ ಧರ್ಮಗುರು ಪ್ರೇಮ್ ಲಾರೆನ್ಸ್ ಡಿಸೋಜ, ಫಾ.ಥಾಮಸ್ ಕಲಘಟಗಿ, ಫಾ.ಎಲಿಯಾಸ್,ಫಾ.ಅಂತೋನಿ ವಾಸ್,ಜೆ.ಬಿ.ಗೊನ್ಸಾಲ್ವಿಸ್ ಸೇರಿದಂತೆ ವಿವಿಧ ಧರ್ಮಗುರುಗಳು ಬಲಿ ಪೂಜೆ ಅರ್ಪಿಸಿದರು.

ವಿವಿಧ ರಾಜಕೀಯ, ಸಂಘ ಸಂಸ್ಥೆಗಳ ಮುಖಂಡರು ಅಂತಿಮ ದರ್ಶನ ಪಡೆದರು.ನಂತರ ಬಣಕಲ್ ಬಾಲಿಕಾ ಮರಿಯ ಚರ್ಚಿನಲ್ಲಿ ಪೂಜಾವಿಧಿಗಳು ನಡೆದವು.ನಂತರ ಬಣಕಲ್ ಕ್ರೈಸ್ತರ ಸ್ಮಶಾನದಲ್ಲಿ ಜನಸಾಗರದ ನಡುವೆ ಅಂತ್ಯಕ್ರೀಯೆ ನಡೆಯಿತು.ಸಂದರ್ಭದಲ್ಲಿ ಪತ್ನಿ ಜೆಸಿಂತಾ,ಪುತ್ರರಾದ ಕ್ರೈಸಲ್,ನೆನ್ಸನ್,ರೊಚೆಲ್,ರಿಚಿ,ನೈಜಿಲ್,ಹಾಗೂ ಸೊಸೆ, ಹಾಗೂ ಮೊಮ್ಮಕ್ಕಳು ಇದ್ದರು.

ಕೊಟ್ಟಿಗೆಹಾರದಲ್ಲಿ ಅಂಗಡಿಮುಂಗಟ್ಟು ಮುಚ್ಚಿ ಪುಷ್ಪಾರ್ಚನೆ

ಕೊಟ್ಟಿಗೆಹಾರದಲ್ಲಿ ಸಾರ್ವಜನಿಕರು,ವರ್ತಕರು ಅಂಗಡಿ ಮುಂಗಟ್ಟು ಮುಚ್ಚಿ ಅವರ ಅಂಬುಲೆನ್ಸ್ ಬಂದಾಗ ಅವರ ಅಂಬುಲೆನ್ಸ್ ಗೆ ಪುಷ್ಪಾರ್ಚನೆ ಮಾಡಿ ಅಂತಿಮ ನಮನ ಸಲ್ಲಿಸಿದರು. ಆಮರ್ ರಹೇ ಕೂಗು ಯುವಕರಿಂದ ಮೊಳಗಿತು.

ಸಮಾಜಕ್ಕೆ ನಾರ್ಬಟ್ ಸಲ್ಡಾನ ಆಸ್ತಿಯಾಗಿದ್ದರು.ಅವರ ಅಕಾಲಿಕ ಮರಣ ಸಮಾಜಕ್ಕೆ ಮಾತ್ರವಲ್ಲದೇ ಕಾಂಗ್ರೆಸ್ ಪಕ್ಷಕ್ಕೂ ತುಂಬಲಾರದ ನಷ್ಟ.ಅವರ ಆತ್ಮಕ್ಕೆ ಭಗವಂತನು ಚಿರಶಾಂತಿ ದಯಾಪಾಲಿಸಲಿ ಎಂದು ಮಾಜಿ ಸಚಿವೆ ಮೋಟಮ್ಮ ಹೇಳಿದರು.

ನಾರ್ಬರ್ಟ್ ಸಲ್ಡಾನರು ಜನರಿಗೆ ತೋರಿದ ಪ್ರೀತಿ ಈ ಲೋಕದಲ್ಲಿ ಹೇಗಿತ್ತು ಎನ್ನುವುದು ಜನಸಾಗರವೇ ಸಾರಿ ಹೇಳುತ್ತಿದೆ.ಸಾವಿನಿಂದ ನಮ್ಮ ಜೀವನ ಅಂತ್ಯವಾಗಲ್ಲ.ಪುನರುತ್ಥಾನವಾಗುತ್ತದೆ.ಏಸು ತೋರಿದ ದಾರಿಯನ್ನು ಇವರು ಅನುಸರಿಸಿ ನಮ್ಮಲ್ಲಿ ಅಮರರಾಗಿದ್ದಾರೆ ಎಂದು ಫಾ.ಎಲಿಯಾಸ್ ಸಿಕ್ವೇರಾ ಹೇಳಿದರು.

ಟಾಪ್ ನ್ಯೂಸ್

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

1-delay

Hoax calls; ವಿಮಾನ ಬಳಿಕ, ತಿರುಪತಿ ಹೊಟೇಲ್‌ಗ‌ಳಿಗೆ ಹುಸಿ ಬಾಂಬ್‌ ಬೆದರಿಕೆ!

1-a-kho-kho

Kho Kho; ಹೊಸದಿಲ್ಲಿಯಲ್ಲಿ ಚೊಚ್ಚಲ ಖೋ ಖೋ ವಿಶ್ವಕಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadur: ಮಗು ನಾಪತ್ತೆ ಪ್ರಕರಣ ಸುಖಾಂತ್ಯ; ಮಗು ಮರೆತು ಕುಡಿಯಲು ಹೋಗಿದ್ದ ಅಪ್ಪ!

Kadur: ಮಗು ನಾಪತ್ತೆ ಪ್ರಕರಣ ಸುಖಾಂತ್ಯ; ಮಗು ಮರೆತು ಕುಡಿಯಲು ಹೋಗಿದ್ದ ಅಪ್ಪ!

Kidnapping of two-year-old child from Kobari gana

Kadur: ಕೊಬ್ಬರಿ ಗಾಣದಿಂದ ಎರಡು ವರ್ಷದ ಮಗುವಿನ ಅಪಹರಣ

Chikkamagaluru:ದತ್ತಮಾಲಾ ಅಭಿಯಾನ: ಜಿಲ್ಲಾಡಳಿತ ಷರತ್ತು

Chikkamagaluru:ದತ್ತಮಾಲಾ ಅಭಿಯಾನ: ಜಿಲ್ಲಾಡಳಿತ ಷರತ್ತು

Chikkamagaluru: ಬಾವನನ್ನು ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ ಭಾಮೈದ

Chikkamagaluru: ಬಾವನನ್ನು ಇಟ್ಟಿಗೆಯಿಂದ ಹೊಡೆದು ಕೊ*ಲೆ ಮಾಡಿದ ಭಾಮೈದ

12

Chikkamagaluru: ಭಾರೀ ಮಳೆ; ರಸ್ತೆ ಕಾಣದೆ ಕಾರುಗಳು ಮುಖಾಮುಖಿ ಡಿಕ್ಕಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.