![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 14, 2022, 3:29 PM IST
ಬಾಳೆಹೊನ್ನೂರು: ನಮ್ಮ ಭಾರತ ದೇಶ ಸಂಸ್ಕೃತಿ, ಪರಂಪರೆ, ನೆಲೆ, ನುಡಿ, ಬಾಷೆ ಹೀಗೆ ಹಲವಾರು ಸಂಪ್ರದಾಯಗಳನ್ನು ಮೈಗೂಡಿಸಿಕೊಂಡು ಬಂದಿದೆ. ಇದನ್ನು ಇಡೀ ಜಗತ್ತಿಗೆ ತಿಳಿಸಿಕೊಡುವುದು ಸಾಹಿತಿಗಳ ಕರ್ತವ್ಯವಾಗಿದೆ ಎಂದು ಬಾಳೆಹೊನ್ನೂರು ಲಯನ್ಸ್ ಕ್ಲಬ್ ಅಧ್ಯಕ್ಷ ಜೈಪ್ರಕಾಶ್ ತಿಳಿಸಿದರು.
ಗಣಪತಿ ಸಮುದಾಯ ಭವನದಲ್ಲಿ ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲೂಕಿನ ಸಿರಿಗೇರಿ ಅನ್ನಪೂರ್ಣ ಪ್ರಕಾಶನವು ಪಟ್ಟಣದ ಲಯನ್ಸ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಭಾಷಣಗಳ ಪುಸ್ತಕ ಲೋಕಾರ್ಪಣೆ ಮಾಡಿದ ಸಂದರ್ಭದಲ್ಲಿ ಅವರು ಮಾತನಾಡಿದರು.
ಇಂದಿನ ಯುವ ಜನತೆ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಪಟ್ಟ ಪುಸ್ತಕಗಳನ್ನು ಓದುವುದರ ಮುಖಾಂತರ ನಮ್ಮ ಸಂಸ್ಕೃತಿ- ಪರಂಪರೆಗಳ ಬಗ್ಗೆ ತಿಳಿದುಕೊಳ್ಳಲು ಸಾಧ್ಯ. ಅಲ್ಲದೆ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ದೆಸೆಯಲ್ಲಿ ಟಿವಿ ಮತ್ತು ಮೊಬೈಲ್ಗಳಿಂದ ದೂರವಿದ್ದು ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಪಟ್ಟ ಪುಸ್ತಕಗಳನ್ನು ಒದುವ ಹವ್ಯಾಸ ಬೆಳೆಸಿಕೊಂಡಲ್ಲಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಸಾದ್ಯವಾಗಲಿದೆ ಎಂದರು.
ವಿದ್ಯಾಭಾರತಿ ಅಖೀಲ ಭಾರತೀಯ ಶಿಕ್ಷಣ ಸಂಸ್ಥಾನದ ಕರ್ನಾಟಕ ಪ್ರಾಂತ್ಯದ ಉಪಾಧ್ಯಕ್ಷೆ ಡಾ| ಲಕ್ಷ್ಮಿ ಎನ್. ಪ್ರಸಾದ್ ಅವರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಬಾಷಣಗಳ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿ, ಕನ್ನಡ ಸಾಹಿತ್ಯದ ಬಗ್ಗೆ ಇಂದಿನ ಯುವ ಸಮೂಹಕ್ಕೆ ಆಸಕ್ತಿ ಮೂಡಿಸುವ ಕೆಲಸವಾಗಬೇಕು. ಕನ್ನಡ ಸಾಹಿತ್ಯ ಬೆಳೆಯಲಿ, ಸಮೃದ್ಧಿಯಾಗಲಿ. ಸ್ವಸ್ಥ ಸಮಾಜ ನಿರ್ಮಾಣವಾಲಿ ಎಂದರು.
ಅನ್ನಪೂರ್ಣ ಪ್ರಕಾಶನದ ಲೇಖಕ ಯರ್ರಿಸ್ವಾಮಿ ಮಾತನಾಡಿ, ರಾಜ್ಯಾದ್ಯಂತ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಬಾಷಣಗಳ ಪುಸ್ತಕವನ್ನು ಬಿಡುಗಡೆ ಮಾಡುವ ಉದ್ದೇಶ ಹೊಂದಿದ್ದು, ಸಾಹಿತ್ಯಾಭಿಮಾನಿಗಳು ಇದರ ಸದುಪಯೋಗ ಪಡೆಯಬೇಕು, ಅಲ್ಲದೆ ಬಳ್ಳಾರಿ, ಕೊಪ್ಪಳ ಜಿಲ್ಲಾ ಸಮ್ಮೇಳನಾಧ್ಯಕ್ಷರ ಬಾಷಣಗಳ ಪುಸ್ತಕವನ್ನು ಈಗಾಗಲೇ ಬಿಡುಗಡೆಗೊಳಿಸಿದ್ದು ಇದೀಗ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಬಾಷಣಗಳ ಪುಸ್ತಕ ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ಕುಂದೂರು ಅಶೋಕ್, ಲಯನ್ಸ್ ಕ್ಲಬ್ ಕಾರ್ಯದರ್ಶಿ ಎನ್. ಸುಬ್ರಮಣ್ಯ, ಮಾತನಾಡಿದರು. ಸಮಾರಂಭದಲ್ಲಿ ಲಯನ್ಸ್ ಕ್ಲಬ್ ಖಜಾಂಚಿ ಉಪೇಂದ್ರ ಗೌಡ, ಎಂ.ಡಿ. ಶಿವರಾಮ್, ಶರತ್ ಕುಮಾರ್, ಚೇತನ್ ಕೋಬಡೆ, ಹುಣಸೆಹಳ್ಳಿ ರಾಜಪ್ಪ ಗೌಡ, ರಾ. ವೆಂಕಟೇಶ್, ಟಿ.ಎಂ. ಉಮೇಶ್, ಮೇಗರಮಕ್ಕಿ ಶ್ರೀನಿವಾಸ ಗೌಡ, ನಟೇಶ್ ಹೊಳೆಮಕ್ಕಿ, ಶೃಂಗೇರಿಯ ಸುನೀತ ನವೀನ್ಗೌಡ ಸೇರಿದಂತೆ ಲಯನ್ಸ್ ಹಾಗೂ ಕನ್ನಡಾಭಿಮಾನಿಗಳು ಇದ್ದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.