Chikkamagaluru:ದತ್ತಮಾಲಾ ಅಭಿಯಾನ: ಜಿಲ್ಲಾಡಳಿತ ಷರತ್ತು
Team Udayavani, Oct 23, 2024, 12:39 AM IST
ಚಿಕ್ಕಮಗಳೂರು: ಶ್ರೀಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ನ. 4ರಿಂದ 10ರ ವರೆಗೆ ಶ್ರೀರಾಮಸೇನೆಯಿಂದ ಹಮ್ಮಿಕೊಂಡಿರುವ ದತ್ತಮಾಲಾ ಅಭಿಯಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಷರತ್ತು, ನಿಬಂಧನೆಗಳನ್ನು ವಿಧಿಸಿ ಆದೇಶಿಸಿದ್ದಾರೆ.
ಮಂಗಳವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಕರು ಅನುಮತಿ ಪಡೆದುಕೊಳ್ಳಬೇಕು. ಧಾರ್ಮಿಕ ಸಂಸ್ಥೆಗಳ ಕಟ್ಟುಪಾಡಿಗೆ ಷರತ್ತಿಗೆ ಅನುಗುಣವಾಗಿ ನಡೆದುಕೊಳ್ಳಬೇಕು.
ಮಾರಕಾಸ್ತ್ರ, ಆಯುಧಗಳನ್ನು ಹಿಡಿದು ಓಡಾಡುವುದು, ಸ್ಫೋಟಕ, ಸಿಡಿಮದ್ದುಗಳ ದಾಸ್ತಾನು ಸಾಗಾಟ, ಆಸ್ತಿಪಾಸ್ತಿ ಹಾನಿಗೊಳಿಸುವ ಚಟುವಟಿಕೆ ನಿಷೇಧಿಸಲಾಗಿದೆ. ಪ್ರತಿಭಟನೆ, ಮುಷ್ಕರ ನಿರ್ಬಂಧಿ ಸಲಾಗಿದೆ.
ದತ್ತಮಾಲಾಧಾರಿಗಳು ಸಾಗುವ ಮಾರ್ಗ ಸ್ಥಳ, ಸಮಯ, ಧಾರ್ಮಿಕ ಸಭೆ ಬಗ್ಗೆ ಆಯೋಜಕರು ಮುಂಚಿತವಾಗಿ ತಹಶೀಲ್ದಾರ್ ಮತ್ತು ಪೊಲೀಸ್ ಅಧಿಕಾರಿಗಳಿಂದ ಅನುಮತಿ ಪಡೆದುಕೊಳ್ಳಬೇಕು. ಕೋಮು ಸಂಘರ್ಷ ಮೂಡಿಸುವ ಭಾಷಣ, ಅವಹೇಳಕನಾರಿ ಘೋಷಣೆ, ಪ್ರಚೋದನಕಾರಿ ಭಾಷಣ, ಭಿತ್ತಿಪತ್ರ, ಧ್ವಜಗಳ ಬಳಕೆಯನ್ನು ನಿಷೇಧಿಸಲಾಗಿದೆ. ನಿರ್ಬಂಧಗಳನ್ನು ಉಲ್ಲಂಘಿಸಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಬಾವನನ್ನು ಇಟ್ಟಿಗೆಯಿಂದ ಹೊಡೆದು ಕೊ*ಲೆ ಮಾಡಿದ ಭಾಮೈದ
Chikkamagaluru: ಭಾರೀ ಮಳೆ; ರಸ್ತೆ ಕಾಣದೆ ಕಾರುಗಳು ಮುಖಾಮುಖಿ ಡಿಕ್ಕಿ
Chikkamagaluru; ಭಾರೀ ಮಳೆ ಸಾಧ್ಯತೆ: ಸಾರ್ವಜನಿಕರು, ಪ್ರವಾಸಿಗರಿಗೆ ಎಚ್ಚರಿಕೆ
Chikkamagaluru: ಕಾಫಿನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ
Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು
MUST WATCH
ಹೊಸ ಸೇರ್ಪಡೆ
Mangaladevi Temple: ಹೈಕೋರ್ಟ್ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ
Manipal: ಅನ್ನನಾಳ ರಂಧ್ರ ಸಮಸ್ಯೆಗೆ ನವೀನ ಎಂಡೋಸ್ಕೋಪಿಕ್ ಚಿಕಿತ್ಸೆ
Mangaluru: ರೈಲು ಹಳಿ ಮೇಲೆ ಕಲ್ಲಿಟ್ಟ ಆರೋಪಿಗಳ ತಕ್ಷಣ ಬಂಧಿಸಿ: ಸಂಸದ ಕ್ಯಾ. ಚೌಟ ಆಗ್ರಹ
Organaisation: ಅಮೆರಿಕದಲ್ಲಿ ಆರೆಸ್ಸೆಸ್ ಸಂಘಟನೆಗೆ ಉತ್ತಮ ಸ್ಪಂದನೆ: ವಿಪುಲ್ ರೈ
Costal: ಡ್ರಗ್ಸ್ ಮಟ್ಟ ಹಾಕಲು ಕಾನೂನು ಬದಲಾವಣೆ ಚರ್ಚೆ: ಎಂಎಲ್ಸಿ ಮಂಜುನಾಥ ಭಂಡಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.