![police crime](https://www.udayavani.com/wp-content/uploads/2024/07/police-crime-2-415x256.jpg)
DK Shivakumar ಅವರ ಕೊತ್ವಾಲ್ ಮಾದರಿ ಟ್ರೀಟ್ಮೆಂಟ್ ಬಗ್ಗೆ ಭಯವಿದೆ: ಸಿ.ಟಿ ರವಿ
Team Udayavani, Aug 15, 2023, 5:19 PM IST
![Fears over DK Shivakumar’s Kotwal model treatment: CT Ravi](https://www.udayavani.com/wp-content/uploads/2023/08/c-t-ravi-620x342.jpg)
ಚಿಕ್ಕಮಗಳೂರು: ಸಿ.ಟಿ.ರವಿಗೆ ಟ್ರೀಟ್ಮೆಂಟ್ ಅಗತ್ಯವಿದೆ ಎಂದು ಹೇಳಿಕೆ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಸಿ.ಟಿ ರವಿ ತಿರುಗೇಟು ನೀಡಿದ್ದು, ನಾನು ಸಂಘದ ಸ್ವಯಂ ಸೇವಕ, ಅವ್ರು ಕೊತ್ವಾಲ್ ರಾಮಚಂದ್ರನ ಶಿಷ್ಯ. ಅವರು ಎಲ್ಲರಿಗೂ ಟ್ರೀಟ್ಮೆಂಟ್ ಕೊಡುತ್ತಾರೆ. ಆದರೆ ಅವರ ಕೊತ್ವಾಲ್ ಮಾದರಿ ಟ್ರೀಟ್ಮೆಂಟ್ ಬಗ್ಗೆ ನನಗೆ ಭಯ. ಅದಕ್ಕಾಗಿ ರಕ್ಷಣೆಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ ಎಂದರು.
ಸುದ್ದಿಗಾರರೊಂದರೆ ಮಾತನಾಡಿದ ಅವರು, ನಾನೊಬ್ಬ ಸಾಮಾನ್ಯ ಕಾರ್ಯಕರ್ತ, ಅವರು ದೇಶದ ಶ್ರೀಮಂತ ಶಾಸಕ. ಅವರ ಬಳಿ ಬೆಂಗಳೂರು ಅಭಿವೃದ್ಧಿ, ಉಸ್ತುವಾರಿ, ನೀರಾವರಿ ಎಲ್ಲಾ ಇದೆ. ನಾನು ಸೋತಿದ್ದೀನಿ, ಅವರು ಗೆದ್ದಿದ್ದಾರೆ, ಅಧಿಕಾರ ಮದ ನಿರ್ಮಾಣ ಮಾಡುತ್ತದೆ. ಬಹುಶಃ, ಅಧಿಕಾರದ ಅಹಃ ಭಾವದಲ್ಲಿ ಎಲ್ಲರಿಗೂ ಟ್ರೀಟ್ಮೆಂಟ್ ಕೊಡುವ ಹುಮ್ಮಸ್ಸು ಬಂದಿರಬಹುದು. ಆ ಹುಮ್ಮಸ್ಸಿನಿಂದಲೇ ನನಗೂ ಟ್ರೀಟ್ಮೆಂಟ್ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.
ನಾನು ಸೋತಿರುವ ಸಾಮಾನ್ಯ ಕಾರ್ಯಕರ್ತ, ನನ್ನ ಟಾರ್ಗೆಟ್ ಮಾಡಿದರೆ ಮುಖ್ಯಮಂತ್ರಿಯಾಗಲು ಆಗದು. ನೀವು ಸಿಎಂ ಆಗಬೇಕಾದರೆ ಬೇರೆಯವರನ್ನು ಟಾರ್ಗೆಟ್ ಮಾಡಬೇಕು ಎಂದು ಡಿಕೆಶಿಗೆ ತಿರುಗೇಟು ನೀಡಿದರು.
ಓಲೈಕೆ ರಾಜಕೀಯಕ್ಕೆ ಕಡಿವಾಣ: ನಾವು ಜಾತ್ಯತೀತ ಎಲ್ಲರೂ ಸಮಾನರು ಎಂದು ಹೇಳುತ್ತೇವೆ. ಸಂವಿಧಾನದ ಮೂಲ ಪೀಠಿಕೆಯಲ್ಲಿ ಸಮಾನತೆಯ ಪ್ರಸ್ತಾಪವಿದೆ. ಕಾನೂನು ಯಾಕೆ ಮತಕ್ಕೊಂದು, ಕೋಮಿಗೊಂದು ಇರಬೇಕು. ಯಾಕೆ ಸಮಾನ ಇರಬಾರದು. ಓಲೈಕೆಯ ರಾಜನೀತಿಗೆ ಕಡಿವಾಣ ಬೀಳಬೇಕು ಎಂದು ಸಿ.ಟಿ ರವಿ ಹೇಳಿದರು.
ಇದನ್ನೂ ಓದಿ:Loksabha ಚುನಾವಣೆಗೆ ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳ ಕೊರತೆಯಿಲ್ಲ: ಮಂಕಾಳು ವೈದ್ಯ
ಸಂವಿಧಾನ ಕೂಡ ದೇಶದ ಎಲ್ಲರೂ ಸಮಾನರೂ ಎಂಬ ಆಶಯವನ್ನು ಎತ್ತಿ ಹಿಡಿದಿದೆ. ಶೀಘ್ರವೇ ಸಮಾನ ನಾಗರೀಕ ಸಂಹಿತೆ ಬರಬೇಕು. ಸಮಾನ ನಾಗರಿಕ ಸಂಹಿತೆ ಸಂವಿಧಾನದಲ್ಲಿ ಉಲ್ಲೇಖವಾಗಿದೆ. 3-4 ಬಾರಿ ಸುಪ್ರೀಂ ಕೋರ್ಟ್ ಕೂಡ ನಾಗರೀಕ ಸಂಹಿತೆ ಅನುಷ್ಠಾನದತ್ತ ಹೆಜ್ಜೆ ಹಾಕಬೇಕೆಂದಿದೆ ಎಂದರು.
ಟಾಪ್ ನ್ಯೂಸ್
![police crime](https://www.udayavani.com/wp-content/uploads/2024/07/police-crime-2-415x256.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ](https://www.udayavani.com/wp-content/uploads/2024/07/charmadi-150x83.jpg)
Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ
![3-chikkamagaluru](https://www.udayavani.com/wp-content/uploads/2024/07/3-chikkamagaluru-150x90.jpg)
ಮಹಿಳೆಯರೊಂದಿಗೆ ಅಸಭ್ಯ ವರ್ತನೆ; ವ್ಯಕ್ತಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು
![Charmadi Ghat ಕಸ ಎಸೆದ ಚಾಲಕನಿಗೆ ಕೇಸ್; ಚಾಲಕನಿಂದಲೇ ಕಸ ತೆರವು](https://www.udayavani.com/wp-content/uploads/2024/07/police-1-150x92.jpg)
Charmadi Ghat ಕಸ ಎಸೆದ ಚಾಲಕನಿಗೆ ಕೇಸ್; ಚಾಲಕನಿಂದಲೇ ಕಸ ತೆರವು
![ಸಿ.ಟಿ ರವಿ](https://www.udayavani.com/wp-content/uploads/2024/07/c-t-ravi-150x83.jpg)
Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ
![Chikkamagaluru: ಬಸ್ ಹತ್ತುವ ವೇಳೆ ತುಂಡಾದ ಡೋರ್ ಲಾಕ್… ಮಹಿಳೆಗೆ ಗಾಯ](https://www.udayavani.com/wp-content/uploads/2024/07/ksrtc-150x96.jpg)
Chikkamagaluru: ಡೋರ್ ಲಾಕ್ ತುಂಡಾಗಿ ಬಸ್ಸಿನಿಂದ ಹೊರಬಿದ್ದ ಮಹಿಳೆ…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.