![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Mar 21, 2024, 10:31 PM IST
ಚಿಕ್ಕಮಗಳೂರು: ರಾಹುಲ್ ಗಾಂಧಿ ವಿರುದ್ಧ ಸಿ.ಟಿ.ರವಿ ದ್ವೇಷದ ಹೇಳಿಕೆ ನೀಡಿದ್ದು, ಇದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣ ನಿರ್ವಹಣ ಸಮಿತಿ ನೋಡೆಲ್ ಅಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ರಾಹುಲ್ ಗಾಂಧಿ ಹೇಳಿಕೆಗೆ ಮಾಜಿ ಸಚಿವ ಸಿ.ಟಿ.ರವಿ ಸಾಮಾಜಿಕ ಜಾಲತಾಣವಾದ ಎಕ್ಸ್ನಲ್ಲಿ ಟೀಕಿಸಿ ಪೋಸ್ಟ್ ಹಾಕಿದ್ದರು. ಇದು ದ್ವೇಷಪೂರಿತ ಪೋಸ್ಟ್ ಎಂದು ಪರಿಗಣಿಸಿ ಮುಖ್ಯ ಚುನಾವಣಾಧಿ ಕಾರಿ ಕಚೇರಿ ಸಾಮಾಜಿಕ ಜಾಲತಾಣ ಮಾಧ್ಯಮದ ನೋಡಲ್ ಅ ಧಿಕಾರಿಯೊಬ್ಬರು ಚಿಕ್ಕಮಗಳೂರು ಜಿಲ್ಲಾಧಿ ಕಾರಿಗೆ ಕ್ರಮ ಕೈಗೊಂಡು ವರದಿ ನೀಡುವಂತೆ ಆದೇಶಿಸಿದ್ದರು. ಈ ಆದೇಶದ ಮೇರೆಗೆ ಸಾಮಾಜಿಕ ಜಾಲತಾಣ ಮೇಲ್ವಿಚಾರಣ ಸಮಿತಿ ಸಹಾಯಕ ಚುನಾವಣಾಧಿಕಾರಿ ಜಯಲಕ್ಷ್ಮಮ್ಮ ಅವರು ಬುಧವಾರ ರಾತ್ರಿ ಚಿಕ್ಕಮಗಳೂರು ನಗರ ಠಾಣೆಗೆ ದೂರು ನೀಡಿದ್ದು, ಪೊಲೀಸರು ಸಿ.ಟಿ.ರವಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.