Chikkamagaluru;ಕಾಫಿನಾಡಲ್ಲಿ ಮಳೆ ಗಾಳಿ ಅಬ್ಬರ, ಕುಸಿದು ಬಿದ್ದ ಮನೆಗಳು
Team Udayavani, Jul 21, 2023, 9:26 PM IST
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಕಡಿಮೆಯಾದರೂ ಮನೆಗಳು ಕುಸಿದು ಬೀಳೋದು ನಿಲ್ಲುತ್ತಿಲ್ಲ. ಕಾಫಿನಾಡ ಮಲೆನಾಡು ಭಾಗದಲ್ಲಿ ಸಾಧಾರಣ ಮಳೆಯಾಗುತ್ತಿದ್ದರೆ, ಬಯಲುಸೀಮೆ ಭಾಗದಲ್ಲೂ ಅಲಲ್ಲೇ ಮಳೆ ಸುರಿದಿದೆ.
ದಟ್ಟಕಾನನದ ಮಲೆನಾಡು ತಾಲೂಕುಗಳಾದ ಮೂಡಿಗೆರೆ, ಕಳಸ ಭಾಗದಲ್ಲಿ ತುಸು ಹೆಚ್ಚಾಗೇ ಮಳೆ ಇದೆ. ಆದರೆ, ಗಾಳಿಯ ಅಬ್ಬರ ಜೋರಾಗಿದೆ. ಮಳೆ ಗಾಳಿಗೆ ತರೀಕೆರೆ ಹಾಗೂ ಎನ್.ಆರ್.ಪುರ ತಾಲೂಕಿನಲ್ಲಿ ಮನೆ ಕುಸಿದು ಬಿದ್ದಿದೆ. ಎನ್.ಆರ್.ಪುರ ತಾಲೂಕಿನ ಖಾಂಡ್ಯಾ ಹೋಬಳಿಯ ಚಾಕಲುಮನೆ ಮನೆ ಗ್ರಾಮದ ರಮೇಶ್ ಎಂಬುವರ ಮನೆ ಮಳೆಗೆ ಕುಸಿದು ಬಿದ್ದಿದೆ. ಮನೆ ಸಂಪೂರ್ಣ ಬಿದಿರಿನಿಂದ ಕಟ್ಟಿದ್ದ ಮನೆಯಾಗಿದ್ದು ಕಳೆದ 20 ವರ್ಷಗಳಿಂದ ಅದೇ ಮನೆಯಲ್ಲಿ ವಾಸವಿದ್ದರು. ಕಳೆದ ಎರಡು ದಿನಗಳಿಂದ ಮಲೆನಾಡಲ್ಲಿ ಸುರಿಯುತ್ತಿರುವ ಮಳೆ, ಬೀಸುತ್ತಿರುವ ಗಾಳಿಗೆ ಮನೆ ಕುಸಿದು ಬಿದ್ದಿದೆ. ಮನೆ ಸಂಪೂರ್ಣ ಮನೆ ಕುಸಿದು ಬೀಳುವ ಆತಂಕ ಮನೆಯವರಿಗೆ ಎದುರಾಗಿದೆ.
ರಮೇಶ್ ಇಬ್ಬರು ಮಕ್ಕಳೊಡನೆ ಅದೇ ಮನೆಯಲ್ಲಿ ವಾಸವಿದ್ದಾರೆ. ರಮೇಶ್ ಪಂಚಾಯಿತಿ ನೀಡುವ ಮನೆಗೆ ಕಳೆದ 5 ವರ್ಷದಿಂದ 3 ಬಾರಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈವರೆಗೆ ಮನೆ ಮಂಜೂರಾಗಿಲ್ಲ. ಇನ್ನು ತರೀಕೆರೆ ತಾಲೂಕಿನ ಸೀತಾಪುರ ಕಾವಲ್ನಲ್ಲಿ ಮನೆಯ ಗೋಡೆಗೆ ಶೀತ ಹೆಚ್ಚಾಗಿ ಬೀಸಿದ ಗಾಳಿಗೆ ಮನೆಯ ಗೋಡೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.
ಸೀತಾಪುರಕಾವಲ್ ಗ್ರಾಮದ ನಟೇಶ್ ಎಂಬುವರ ಮನೆ ಮಧ್ಯಾಹ್ನ ಅಡುಗೆ ಮಾಡುತ್ತಿದ್ದಾಗಲೇ ಏಕಾಏಕಿ ಕುಸಿದು ಬಿದ್ದಿದೆ. ಮನೆ ಭಾಗಶಃ ನಾಶವಾಗಿದೆ.
ಮಳೆ ಗಾಳಿ ಹೀಗೆ ಮುಂದುವರೆದರೆ ಉಳಿದಿರೋ ಅಲ್ಪಸ್ವಲ್ಪ ಕೂಡ ಕುಸಿದು ಬೀಳಲಿದೆ. ಮನೆಯಲ್ಲಿದ್ದ ಪಾತ್ರೆ ದವಸ ಧಾನ್ಯಗಳು ನಾಶವಾಗಿವೆ. ಸ್ಥಳಕ್ಕೆ ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi: ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ
Munirathna ʼರಾಜಕೀಯ ಬಂಧನʼ ಖಂಡನೀಯ: ಬಿ.ವೈ.ರಾಘವೇಂದ್ರ
Chikkamagaluru; ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕ್ ರೈಡ್: ವಿಡಿಯೋ ವೈರಲ್
Chikkamagaluru: ರಾಹುಲ್ ಗಾಂಧಿ ಭಾರತ ವಿರೋಧಿ ನಾಯಕರೆಂಬ ಅನುಮಾನ ಕಾಡುತ್ತಿದೆ: ಸಿ.ಟಿ ರವಿ
Chikkamagaluru: ಈ ಹೇಡಿ ಸರ್ಕಾರ ಗಣಪತಿ ಕೂರಿಸದವರನ್ನೇ A1 ಮಾಡಿದೆ: ಸಿ.ಟಿ.ರವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.