ಅಕಾಲಿಕ ಮಳೆ: ರೈತರಲ್ಲಿ ಆತಂಕ

ಹವಾಮಾನ ವೈಪರೀತ್ಯದಿಂದ ಅಡಕೆ ಕೊಯ್ಲಿಗೂ ಅಡ್ಡಿ

Team Udayavani, Oct 16, 2020, 6:13 PM IST

ಅಕಾಲಿಕ ಮಳೆ: ರೈತರಲ್ಲಿ ಆತಂಕ

ಶೃಂಗೇರಿ: ರೈತರೊಬ್ಬರು ಅಡಕೆ ಒಣಗಿಸುತ್ತಿರುವುದು.

ಶೃಂಗೇರಿ: ಕಳೆದ 2-3 ದಿನದಿಂದ ಮಲೆನಾಡು ಭಾಗಗಳಲ್ಲಿ ಮಳೆಯ ಕಾಟದಿಂದ ಅಡಕೆ ಕೊಯ್ಲು ಕಾರ್ಯಕ್ಕೆ ತೀವ್ರ ತೊಂದರೆಯಾಗಿದ್ದು, ರೈತರು ಚಿಂತಾಕ್ರಾಂತರಾಗಿದ್ದಾರೆ. ಮಳೆಗಾಲದಲ್ಲಿ ಸಮರ್ಪಕವಾಗಿ ಮಳೆಯಾಗದೆ ಇದೀಗ ಅಕಾಲಿಕ ಮಳೆಯಿಂದ ಕೃಷಿ-ಕಾರ್ಯಕ್ಕೆ ಹಿನ್ನಡೆಯಾಗಿದೆ.

ಈ ವರ್ಷ ಆಶ್ಲೇಷ ಮಳೆಯ ಆರ್ಭಟ ತಾಲೂಕಿನಲ್ಲಿ ಜೊರಾಗಿಯೇ ಇತ್ತು. ಪ್ರವಾಹ ಇಳಿಕೆಯಾಗದೆ 4-5ದಿನ ಹಾಗೆಯೇ ಮುಂದುವರಿದಿತ್ತು. ನಂತರ ಉತ್ತರಾ ಮಳೆಯೂ ಜೋರಾಗಿಯೇ ಬಂದಿದ್ದು, ಪ್ರವಾಹ ಕಂಡಿತ್ತು. ಆದರೆ ದೊಡ್ಡ ಮಳೆಗಳಾದ ಪುನರ್ವಸು ಹಾಗೂ ಪುಷ್ಯ ಮಳೆ ಬರಲೇ ಇಲ್ಲ.ಇದೀಗ ಚಂಡಮಾರುತದ ಹಾವಳಿಯಿಂದ ಜಿಟಿ-ಜಿಟಿ ಮಳೆ ಎಡೆಬಿಡದೆ ತಾಲೂಕಿನಲ್ಲಿ ಸುರಿಯುತ್ತಿದೆ.

ಅಡಕೆ ಕೊಯ್ಲಿಗೆ ಅಡ್ಡಿ: ತಾಲೂಕಿನಲ್ಲಿ ಸುಮಾರು 2,100 ಎಕರೆ ಅಡಕೆ ತೋಟಗಳಿದ್ದು, ಅಡಕೆ ಬೆಳೆಗಾರರು ಈ ವರ್ಷ ತೀವ್ರ ತೊಂದರೆಗೆ ಸಿಲುಕಿದ್ದಾರೆ. ಅಕಾಲಿಕ ಮಳೆಯಿಂದಾಗಿ ಉತ್ತಮ ಗುಣಮಟ್ಟದ ಅಡಕೆ ತಯಾರಿಸಲು ಹರಸಾಹಸ ಪಡುತ್ತಿದ್ದಾರೆ. ಈಗಾಗಲೇ ಅಡಕೆ ತೋಟದಲ್ಲಿ ಅಡಕೆ ಕಾಯಿಗಳು ಬಲಿತಿದ್ದು, ಕೊಯ್ಲು ಮಾಡಲು ಸರಿಯಾದ ಸಮಯವಾಗಿದೆ. ಆದರೆ ಬಿಸಿಲಿನ ವಾತಾವರಣ ಇಲ್ಲದೆ ಕೊಯ್ಲು ಮಾಡಲು ತೀವ್ರತೊಂದರೆಯಾಗಿದೆ. ತಾಲೂಕಿನಲ್ಲಿ ಕೆಲೆವೆಡೆ ಅಡಕೆ ಕೊಯ್ಲು ಪ್ರಾರಂಭವಾಗಿದೆ. ಬೇಯಿಸಿದ ಅಡಕೆ ಒಣಗಿಸಲಾಗದೆ ಮನೆಯೊಳಗಿಲ್ಲಾ ಹರಡಿಕೊಂಡು ಬಿಸಿಲಿನ ನಿರೀಕ್ಷೆಯಲ್ಲಿದ್ದಾರೆ.

ಚಪ್ಪರದಲ್ಲಿ ಹರಡಿದ್ದ ಅಡಕೆ ರಾಶಿ ಹಾಕಿ ಟಾರ್ಪಲ್‌ ಮುಚ್ಚಿ ಕುಳಿತ್ತಿದ್ದಾರೆ. ಇನ್ನೆರಡು ದಿನ ಇದೇ ವಾತಾವರಣ ಮುಂದುವರಿದರೆ ಸಂಸ್ಕರಿತ ಅಡಕೆ ಶಿಲೀಂದ್ರ ಬಾಧೆಗೆ ಒಳಗಾಗಿಹೂವಾಗುವ ಆತಂಕ ಎದುರಾಗಿದೆ. ಹೊಗೆಹಟ್ಟಿ, ಡ್ರೈಯರ್‌ಗಳಲ್ಲಿ ಒಣಗಿಸಿದ ಅಡಕೆಗೆ ಮಾರುಕಟ್ಟೆಯಲ್ಲೂ ಉತ್ತಮ ಧಾರಣೆ ದೊರೆಯದಿರುವುದರಿಂದ ಕೈಗೆ ಬಂದ ತುತ್ತು ಬಾಯಿಗಿಲ್ಲ ಎಂಬಂತಾಗಿದೆ ಬೆಳೆಗಾರನ ಸ್ಥಿತಿ. ಕೊಯ್ಲು ವಿಳಂಬವಾದಂತೆಲ್ಲ ಅಡಕೆ ಹಣ್ಣಾಗುತ್ತಿರುವುದು ಒಂದೆಡೆಯಾದರೆ ಬಲಿತ ಅಡಕೆ ಕಾಯಿಗೆ ಕೊಳೆರೋಗ ಬರುವ ಸಾಧ್ಯತೆ ಇದೆ.

ಒಂದೆಡೆ ಕಾರ್ಮಿಕರ ಕೊರತೆ ಮತ್ತೂಂದೆಡೆ ವಾತಾವರಣ ತೊಂದರೆಯಿಂದಾಗಿ ಸಣ್ಣ ರೈತರ ಪಾಡು ಹೇಳತೀರದಾಗಿದೆ. ಒಣಗದೇ ಇರುವ ಅಡಕೆ ಕಣ್ಣೆದುರೇ ಹಾಳಾಗುತ್ತಿದೆ. ಹಣ್ಣಾದ ಅಡಕೆ ಒಣಗಲು ಹಾಕಿದಲ್ಲಿಯೇ ಮೊಳಕೆಯೊಡೆಯುತ್ತಿದೆ. ಒಟ್ಟಾರೆ ರೈತರ ಬದುಕು ಸಂಕಷ್ಟ ಗೂಡಾಗುವುದರಲ್ಲಿ ಸಂಶಯವೇ ಇಲ್ಲ.-ಹಂಚಲಿ ಕೃಷ್ಣಮೂರ್ತಿ ರಾವ್‌, ಕೃಷಿಕ

ಅಡಿಕೆಗೆ ಈ ವರ್ಷ ಉತ್ತಮ ಧಾರಣೆ ಇದೆ ಇಲ್ಲಿನ ಮ್ಯಾಮ್ಕೋಸ್‌ ಸಂಸ್ಥೆಯಲ್ಲಿ ಹೊಸ ಅಡಕೆ 41,900 ರಿಂದ 65,899, ಬೆಟ್ಟೆ 37,069 ರಿಂದ 38,519, ಗೊರಬಲು 23,516 ರಿಂದ 28,998 ರಾಶಿ ಇಡಿ 36,058 ರಿಂದ 37,899ರವರೆಗೆ ಧಾರಣೆ ಇದೆ. ಕಳೆದ ವರ್ಷ ಮ್ಯಾಮ್ಕೋಸ್ ಶಾಖೆಗೆ 15 ಸಾವಿರಕ್ಕೂ ಹೆಚ್ಚು ಅಡಕೆ ಮೂಟೆಗಳು ಬಂದಿದ್ದು, ಈ ವರ್ಷ ಅಡಕೆ ಫಸಲು ಕಡಿಮೆಯಾಗುವ ಸಾಧ್ಯತೆ ಇದೆ. ಈಗಾಗಲೇ ತಾಲೂಕಿನಲ್ಲಿ ಹಳದಿ ಎಲೆ ರೋಗದಿಂದ ಬೆಂಡಾಗಿದ್ದು, ಒಟ್ಟಾರೆ ಅಡಕೆಯ ಫಸಲು ಕಡಿಮೆಯಾಗುವ ಸಾಧ್ಯತೆ ಕಂಡು ಬರುತ್ತಿದೆ.  -ಎ. ಸುರೇಶ್‌ಚಂದ್ರ, ಅಂಬಳೂರು, ನಿರ್ದೇಶಕ ಮ್ಯಾಮ್ಕೋಸ್‌

ಟಾಪ್ ನ್ಯೂಸ್

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anwar M*rder Case: ADGP B.K.Singh started investigation of case 6 years ago

Anwar M*rder Case: 6 ವರ್ಷ ಹಿಂದಿನ ಪ್ರಕರಣದ ತನಿಖೆಗೆ ಇಳಿದ ಎಡಿಜಿಪಿ ಬಿ.ಕೆ.ಸಿಂಗ್

Kadur: ಮಗು ನಾಪತ್ತೆ ಪ್ರಕರಣ ಸುಖಾಂತ್ಯ; ಮಗು ಮರೆತು ಕುಡಿಯಲು ಹೋಗಿದ್ದ ಅಪ್ಪ!

Kadur: ಮಗು ನಾಪತ್ತೆ ಪ್ರಕರಣ ಸುಖಾಂತ್ಯ; ಮಗು ಮರೆತು ಕುಡಿಯಲು ಹೋಗಿದ್ದ ಅಪ್ಪ!

Kidnapping of two-year-old child from Kobari gana

Kadur: ಕೊಬ್ಬರಿ ಗಾಣದಿಂದ ಎರಡು ವರ್ಷದ ಮಗುವಿನ ಅಪಹರಣ

Chikkamagaluru:ದತ್ತಮಾಲಾ ಅಭಿಯಾನ: ಜಿಲ್ಲಾಡಳಿತ ಷರತ್ತು

Chikkamagaluru:ದತ್ತಮಾಲಾ ಅಭಿಯಾನ: ಜಿಲ್ಲಾಡಳಿತ ಷರತ್ತು

Chikkamagaluru: ಬಾವನನ್ನು ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ ಭಾಮೈದ

Chikkamagaluru: ಬಾವನನ್ನು ಇಟ್ಟಿಗೆಯಿಂದ ಹೊಡೆದು ಕೊ*ಲೆ ಮಾಡಿದ ಭಾಮೈದ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.