ರಾಮ ಮಂದಿರ ಉದ್ಘಾಟನೆ ದಿನ ಶಾಲೆಗೆ ರಜೆ ಹಾಕಿದರೇ ಸಾವಿರ ರೂ. ದಂಡ ಆರೋಪ; ವಿಹಿಂಪ ಆಕ್ರೋಶ
Team Udayavani, Jan 20, 2024, 2:14 PM IST
ಚಿಕ್ಕಮಗಳೂರು: ಜ.22 ರಂದು ರಾಮ ಮಂದಿರ ಉದ್ಘಾಟನೆ ನಡೆಯಲಿದೆ. ಅಂದು ಶಾಲೆಗೆ ರಜೆ ಹಾಕಿದರೇ ಸಾವಿರ ರೂ.ದಂಡ ಹಾಕುವುದಾಗಿ ಚಿಕ್ಕಮಗಳೂರು ನಗರದ ಖಾಸಗಿ ಶಾಲೆಯೊಂದರ ಮಕ್ಕಳಿಗೆ ಆರೋಪ ಮಾಡಿದ್ದು, ಶಾಲೆಯ ವಿರುದ್ಧ ಭಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಆಕ್ರೋಶ ಹೊರ ಹಾಕಿದೆ.
ಅಯೋಧ್ಯೆಯಲ್ಲಿ ರಾಮ ಮಂದಿರ ಪುನರ್ ಪ್ರತಿಷ್ಠಾಪನೆ ದಿನ ರಾಜ್ಯದ ಎಲ್ಲಾ ಮುಜರಾಯಿ ದೇಗುಲಗಳಲ್ಲಿ ಪೂಜೆಗೆ ಸರ್ಕಾರವೇ ಆದೇಶಿಸಿದೆ. ಜ.22ರಂದು ಶಾಲೆಗಳಿಗೆ ರಜೆ ನೀಡಬೇಕೋ… ಬೇಡವೋ ಎಂಬ ಕುರಿತು ಸರ್ಕಾರ ಕೂಡ ಗೊಂದಲದಲ್ಲಿದೆ. ಈ ಮಧ್ಯೆ ಖಾಸಗಿ ಶಾಲೆಗಳು ಮಕ್ಕಳ ಮೇಲೆ ದಬ್ಬಾಳಿಕೆ ಮಾಡುತ್ತಿದ್ದು, ಹಿಂದೂ ಪರ ಸಂಘಟನೆಗಳು ಶಾಲೆ ವಿರುದ್ಧ ಆಕ್ರೋಶ ಹೊರಹಾಕಿದರು.
ಜ.22ರಂದು ಯಾವುದೇ ಮಕ್ಕಳಿಗೆ ರಾಮ ಮಂದಿರದ ಲೈವ್ ನೋಡಬೇಕು ಅನ್ನಿಸಿದರೆ ರಜೆ ಹಾಕಿ ಮನೆಯಲ್ಲೇ ನೋಡಿ. ಜಿಲ್ಲೆಯ ಯಾವುದೇ ಶಾಲೆಯ ಯಾವುದೇ ಮಕ್ಕಳಿಗೆ ಯಾರಾದರೂ ದಂಡ ಹಾಕಿದರೆ ಪರಿಣಾಮ ನೆಟ್ಟಗಿರಲ್ಲ ಎಂದು ಆರೋಪ ನೀಡಿದ್ದಾರೆ.
ಸ್ಥಳಕ್ಕೆ ಎ.ಎಸ್ಪಿ. ಕೃಷ್ಣಮೂರ್ತಿ ಭೇಟಿ ನೀಡಿ ಹಿಂದೂಪರ ಸಂಘಟನೆ ಕಾರ್ಯಕರ್ತರ ಜೊತೆ ಮಾತನಾಡಿದರು. ಶಾಲಾ ಆಡಳಿತ ಮಂಡಳಿ ಬಳಿ ಮಾತನಾಡುವುದಾಗಿ ಹೇಳಿದರು. ಶಾಲೆಗೆ ಪ್ರಭಾರ ಡಿಡಿಪಿಐ ಪ್ರಕಾಶ್ ಭೇಟಿ ನೀಡಿದ್ದು, ಶಾಲಾ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಭಾರೀ ಮಳೆಗೆ ಮನೆ ಮುಂದೆಯೇ ಭೂಮಿ ಕುಸಿದು ಮನೆ ಗೋಡೆ ಬಿರುಕು
Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ
Mudigere: ಚಾಲಕ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ; 4 ಮಂದಿಗೆ ಗಾಯ
Mudigere: ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಟಿಟಿ ವಾಹನ… 9 ಮಂದಿಗೆ ಗಾಯ
Kottigehara: ಕೌ ಗಾರ್ಡ್ ಗೆ ಬಿದ್ದು ಬೆಂಗಳೂರು ಪ್ರವಾಸಿಗನಿಗೆ ಗಾಯ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.