ಕರಗಡ ಯೋಜನೆ ಕಾಮಗಾರಿ ಪರಿಶೀಲನೆ

ಕಾಮಗಾರಿ ಪರಿಶೀಲನೆ •ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ಭರವಸೆ •ಸಭೆಗೆ ತಪ್ಪು ಮಾಹಿತಿ ನೀಡಿದ ಅಧಿಕಾರಿ ವಿರುದ್ಧ ಕ್ರಮಕ್ಕೆ ಸಿ.ಟಿ.ರವಿ ಆಗ್ರಹ

Team Udayavani, Jun 25, 2019, 9:54 AM IST

cm-tdy-1..

ಚಿಕ್ಕಮಗಳೂರು: ಜಿಪಂ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಸಿ.ಟಿ.ರವಿ ಮಾತನಾಡಿದರು.

ಚಿಕ್ಕಮಗಳೂರು: ಸಣ್ಣ ನೀರಾವರಿ ಸಚಿವರೊಂದಿಗೆ ಚರ್ಚಿಸಿ ಕರಗಡ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲಿಸಲು ತಂತ್ರಜ್ಞರನ್ನು ಸ್ಥಳಕ್ಕೆ ಕಳುಹಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಅನುಪಾಲನಾ ವರದಿ ಕುರಿತು ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್‌ ಮಾತನಾಡಿ, ಕರಗಡ ಕುಡಿಯುವ ನೀರಿನ ಯೋಜನೆ ಕಾಮಗಾರಿಯ ಮೊದಲ ಹಂತ ಸಿಬಿಎಲ್ ವರೆಗೆ ಪೂರ್ಣಗೊಂಡಿದೆ. ಮಳೆ ಬಂದು ದೇವಿಕೆರೆ ತುಂಬಿದಲ್ಲಿ ನೀರು ನಾಲೆಯಲ್ಲಿ ಹರಿಯುತ್ತದೆ ಎಂದು ವರದಿ ಸಲ್ಲಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಸಿ.ಟಿ.ರವಿ, ಅಧಿಕಾರಿಗಳು ಸಭೆಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ನಿನ್ನೆ ತಮ್ಮ ಮನೆಗೆ ಬಂದಿದ್ದ ಇಲಾಖೆ ಸಹಾಯಕ ಇಂಜಿನಿಯರ್‌ ಕಾಮಗಾರಿ ಪೂರ್ಣಗೊಂಡಿದೆ ಎಂದು ತಿಳಿಸಿದ್ದರು. ಕೂಡಲೇ ತಾವು ಸ್ಥಳೀಯ ತಾಪಂ ಸದಸ್ಯರಿಗೆ ಸ್ಥಳಕ್ಕೆ ತೆರಳಿ ಕಾಮಗಾರಿ ಪೂರ್ಣಗೊಂಡಿದೆಯೋ ಇಲ್ಲವೋ ಎಂಬು ದನ್ನು ಪರಿಶೀಲಿಸಿ, ವೀಡಿಯೋ ಮಾಡಿ ಕಳುಹಿಸುವಂತೆ ತಿಳಿಸಿದೆ. ಅವರು ಸ್ಥಳಕ್ಕೆ ತೆರಳಿ ವೀಡಿಯೋ ಮಾಡಿ ಕಳುಹಿಸಿದ್ದಾರೆ. ಕೆಲವೆಡೆ ಸಿಬಿಎಲ್ ವರೆಗೂ ಕಾಮಗಾರಿ ಪೂರ್ಣಗೊಂಡಿಲ್ಲ. ಅವಕಾಶ ನೀಡಿದರೆ ವೀಡಿಯೋ ಪ್ರದರ್ಶಿಸುವುದಾಗಿ ಹೇಳಿದರು.

ಅಧಿಕಾರಿಗಳು ಈ ಹಿಂದೆ ಇದೇ ಕಾಮಗಾರಿ ಕುರಿತು ವಿಧಾನಸೌಧಕ್ಕೆ ತಪ್ಪು ಮಾಹಿತಿ ನೀಡಿದ್ದರು. ಈಗ ಕೆಡಿಪಿ ಸಭೆಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಈಗಲೇ ಸ್ಥಳಕ್ಕೆ ತೆರಳಿ ಪರಿಶೀಲಿಸೋಣ. ಕಾಮಗಾರಿ ಪೂರ್ಣಗೊಂಡಿದ್ದರೆ ನಾನೇ ಅಧಿಕಾರಿಗಳಿಗೆ ಶಹಭಾಷ್‌ಗಿರಿ ನೀಡುತ್ತೇನೆ. ಕಾಮಗಾರಿ ಪೂರ್ಣಗೊಂಡಿಲ್ಲದಿದ್ದರೆ ತಪ್ಪು ಮಾಹಿತಿ ನೀಡಿದ ಅಧಿಕಾರಿಯನ್ನು ಅಮಾನತು ಮಾಡಿ ಎಂದು ಆಗ್ರಹಿಸಿದರು.

ವಿಧಾನ ಪರಿಷತ್‌ ಶಾಸಕ ಎಸ್‌.ಎಲ್. ಬೋಜೇಗೌಡ ಮಾತನಾಡಿ, ಕಾಮಗಾರಿ ನಿರ್ವಹಿಸಲು ಅನುದಾನದ ಕೊರತೆ ಇಲ್ಲ. ಮುಖ್ಯಮಂತ್ರಿಗಳು ಅಗತ್ಯವಿದ್ದಷ್ಟು ಅನುದಾನವನ್ನು ಬಿಡುಗಡೆ ಮಾಡಿದ್ದಾರೆ. ಈ ಕಾಮಗಾರಿ ಕುರಿತು ಹಲವು ಸಭೆಗಳನ್ನು ನಡೆಸಲಾಗಿದೆ. ಆದರೂ, ಅಧಿಕಾರಿಗಳ ನಿರ್ಲಕ್ಷ ್ಯದಿಂದಾಗಿ ಕಾಮಗಾರಿ ಈವರೆಗೂ ಪೂರ್ಣಗೊಂಡಿಲ್ಲ ಎಂದರು.

ಸಚಿವ ಕೆ.ಜೆ.ಜಾರ್ಜ್‌ ಮಾತನಾಡಿ, ಕೆರೆಗೆ ನೀರು ಹರಿಯುವುದು ಮುಖ್ಯ. ಮೊದಲು ಅದರತ್ತ ಗಮನ ಹರಿಸೋಣ. ಕಾಮಗಾರಿ ಪೂರ್ಣಗೊಂಡಿದೆಯೋ ಇಲ್ಲವೋ ಎಂಬುದನ್ನು ತಂತ್ರಜ್ಞರೇ ತೀರ್ಮಾನಿಸಬೇಕಿದೆ. ಸಣ್ಣ ನೀರಾವರಿ ಸಚಿವರೊಂದಿಗೆ ಈ ಕುರಿತು ಚರ್ಚಿಸುತ್ತೇನೆ. ಸಮರ್ಥ ತಂತ್ರಜ್ಞ ರೊಂದಿಗೆ ಆಗಮಿಸಿ ಸ್ಥಳ ಪರಿಶೀಲಿಸುವಂತೆ ಕೋರುತ್ತೇನೆ. ಆ ನಂತರ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಅವರೇ ತೀರ್ಮಾನಿಸಲಿ ಎಂದು ಹೇಳಿದರು.

ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್. ಬೋಜೇಗೌಡ ಮಾತನಾಡಿ, ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ ಅವರು ಈ ಹಿಂದೆ ಸಿಎಂ ಆಗಿದ್ದಾಗ ಯೋಜನೆಗೆ ಮಂಜೂರಾತಿ ನೀಡಿ 3.50 ಕೋಟಿ ರೂ. ಬಿಡುಗಡೆ ಮಾಡಿದ್ದರು ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಸಿ.ಟಿ.ರವಿ, ಸಭೆಗೆ ತಪ್ಪು ಮಾಹಿತಿ ಹೋಗಬಾರದು. ಕಾಮಗಾರಿಗೆ ಅನುದಾನ ಬಿಡುಗಡೆ ಆಗಿದ್ದು ಯಾವಾಗ ಎಂಬ ಮಾಹಿತಿಯನ್ನು ಇಲಾಖೆಯವರೇ ನೀಡಲಿ. ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಯೋಜನೆಗೆ ಅನುದಾನ ಬಿಡುಗಡೆ ಆಗಿದೆ ಎಂದು ತಿಳಿಸಿದರು.

ಸಚಿವ ಕೆ.ಜೆ.ಜಾರ್ಜ್‌ ಮಾತನಾಡಿ, ಯಾವ ಮುಖ್ಯಮಂತ್ರಿ ಅನುದಾನ ಬಿಡುಗಡೆ ಮಾಡಿದ್ದರೂ ಅದು ಸರ್ಕಾರದ ಹಣವೇ. ಈಗ ಆ ವಿಚಾರದ ಕುರಿತು ಚರ್ಚೆ ಅವಶ್ಯಕತೆ ಇಲ್ಲ. ಕಾಮಗಾರಿ ಪೂರ್ಣಗೊಂಡು ಕೆರೆಗಳಿಗೆ ನೀರು ಹರಿದರೆ ಸಾಕು ಎಂದು ಹೇಳಿ ಚರ್ಚೆಗೆ ಮುಕ್ತಾಯ ಹಾಡಿದರು.

ನೋಟಿಫಿಕೇಶನ್‌ ರದ್ಧತಿಗೆ ಪ್ರಸ್ತಾವನೆ: ಸಭೆಯಲ್ಲಿ ಕುದುರೆಮುಖ ವಿಷಯ ಪ್ರಸ್ತಾಪ ವಾದಾಗ ಸಚಿವ ಕೆ.ಜೆ.ಜಾರ್ಜ್‌ ಕೆಐಓಸಿಎಲ್ನ ಟೌನ್‌ಶಿಪ್‌ ಏನಾಯಿತು ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌, ಕಳಸವನ್ನು ಹೊಸ ತಾಲೂಕಾಗಿ ಘೋಷಿಸಲಾಗಿದೆ. ಟೌನ್‌ಶಿಪ್‌ ಕಳಸದಿಂದ ಕೇವಲ 10 ಕಿ.ಮೀ. ದೂರದಲ್ಲಿದೆ. ಅಲ್ಲಿನ ಕಟ್ಟಡಗಳನ್ನು ತಾಲೂಕು ಕಚೇರಿ ಹಾಗೂ ಇನ್ನಿತರೆ ಸರ್ಕಾರಿ ಕಚೇರಿಗಳಿಗೆ ಬಳಸಿಕೊಳ್ಳಲು ಉದ್ದೇಶಿಸಲಾಗಿದ್ದು, ಶೀಘ್ರದಲ್ಲಿಯೇ ಸರ್ಕಾ ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಸಿಎಂ ಬಳಿಗೆ ನಿಯೋಗ: ಕಳೆದ ವರ್ಷಕೊಡಗಿನಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾ ದಾಗ ಕಾಫಿ ಬೆಳೆಗಾರರಿಗೆ ವಿಶೇಷ ಪ್ಯಾಕೇಜ ಅನ್ನು ರಾಜ್ಯ ಸರ್ಕಾರದಿಂದ ನೀಡಲಾಗಿದೆ. ಹಾಗಾಗಿ, ನಮ್ಮ ಜಿಲ್ಲೆಗೂ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಬೇಕು. ನಷ್ಟವಾಗಿರುವ ಬಗ್ಗೆ ಜಿಲ್ಲಾಡಳಿತದಿಂದ ಸರ್ಕಾರಕ್ಕೆ ಪ್ರಸ್ತಾವನೆಯೂ ಹೋಗಿದೆ ಎಂದು ಶಾಸಕ ಸಿ.ಟಿ.ರವಿ ಹೇಳಿದರು.

 

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara-Bill

Kottigehara: 35 ವರ್ಷಗಳ ಹಿಂದೆ ಸೇವಿಸಿದ್ದ ಊಟದ ಬಿಲ್‌ ಪಾವತಿ!

13-kudremukh-1

Kudremukh-ಎಸ್.ಕೆ.ಬಾರ್ಡರ್ ರಾಜ್ಯ ಹೆದ್ದಾರಿ; ಗುಂಡಿಗಳ ರಸ್ತೆ

1-ckm

Chikkamagaluru: ಕಿರುಕುಳ, ಮಹಿಳೆ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಸರ್ವೇ ಸಿಬಂದಿ ಆತ್ಮಹತ್ಯೆ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

12

Mudigere: ನೇಣು ಬಿಗಿದುಕೊಂಡು‌ ಆತ್ಮಹ*ತ್ಯೆಗೆ ಶರಣಾದ ಸರ್ವೇ ಅಧಿಕಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.