
ಕೋವಿಡ್ ನೊಂದಿಗೆ ಬದುಕು ಅನಿವಾರ್ಯ
Team Udayavani, Jul 5, 2020, 6:10 PM IST

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕಡೂರು: ಕೋವಿಡ್ ಜೊತೆಗೆ ಜೀವನ ಶೈಲಿಯನ್ನು ಹೊಂದಾಣಿಕೆ ಮಾಡಿಕೊಂಡು ನಿತ್ಯದ ಕೆಲಸಕಾರ್ಯಗಳಲ್ಲಿ ತೊಡಗುವ ಅನಿವಾರ್ಯತೆ ಬಂದಿದೆ. ಹಾಗಾಗಿ, ಇದಕ್ಕೆ ಹೊಂದಿಕೊಳ್ಳುವುದು ಒಂದೇ ದಾರಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಎಚ್.ತಿಳಿಸಿದರು.
ಜಿಲ್ಲೆಯ ನೂತನ ಎಸ್ಪಿ ಆಗಿರುವ ಅವರು ಶನಿವಾರ ಕಡೂರು ತಾಲೂಕಿನ ವಿವಿಧ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿದ ನಂತರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಒಂದು ವಾರದ ಹಿಂದೆ ಅಧಿಕಾರ ಸ್ವೀಕರಿಸಿದ್ದು, ಚಿಕ್ಕಮಗಳೂರು ಜಿಲ್ಲೆಯ ಪ್ರಕೃತಿ, ಸುಂದರ ಪರಿಸರ ಹಾಗೂ ಉತ್ತಮ ಸಂಸ್ಕೃತಿಗಳಲ್ಲಿ ಸಂಪನ್ನವಾಗಿದೆ. ಅದೇ ರೀತಿ, ಯಾವುದೇ ದೊಡ್ಡ ಸಮಸ್ಯೆಗಳಿಲ್ಲ ಎಂಬ ಮಾಹಿತಿ ಇದೆ. ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಭೇಟಿ ನೀಡಿ ಅಲ್ಲಿರುವ ಠಾಣೆಗಳ ವ್ಯಾಪ್ತಿಯ ಸಮಸ್ಯೆಗಳ ಬಗ್ಗೆ ವಿವರ ಪಡೆಯುತ್ತಿದ್ದೇನೆ. ಜಿಲ್ಲೆಯ ಅಪರಾಧ ಸೇರಿದಂತೆ ಯಾವುದೇ ಸಮಸ್ಯೆಗಳಿದ್ದರೆ ಮುಕ್ತವಾಗಿ ಸಂಪರ್ಕಿಸಿ ಬಗೆಹರಿಸಿಕೊಳ್ಳಲು ಸಾರ್ವಜನಿಕರಿಗೆ ಅವಕಾಶವಿದೆ ಎಂದು ಹೇಳಿದರು.
ಕೋವಿಡ್ ವೈರಸ್ 1-2 ದಿನದ ಲಾಕ್ಡೌನ್ನಿಂದ ಹೋಗಲು ಸಾಧ್ಯವಿಲ್ಲ. ಅದಕ್ಕಾಗಿ ಕೋವಿಡ್ ಜೊತೆಗೇ ಜೀವನ ನಡೆಸಬೇಕಾದ ಮಾರ್ಗಗಳನ್ನು ಹುಡುಕಿಕೊಂಡು ಅಂತರ ಕಾಪಾಡಿಕೊಳ್ಳುವುದು, ಸ್ಯಾನಿಟೈಸರ್ ಬಳಕೆ, ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು, ಗುಂಪುಗೂಡದೆ ಅಂತರದಲ್ಲಿರುವುದನ್ನು ತಪ್ಪದೇ ಪಾಲಿಸಬೇಕೆಂದರು.
ಜಿಲ್ಲೆಯಲ್ಲಿನ ನಕ್ಸಲ್ ಚಟುವಟಿಕೆ ಬಗ್ಗೆ ತಿಳಿದುಕೊಂಡಿದ್ದೇನೆ. ಜಿಲ್ಲಾಡಳಿತ ಈಗಾಗಲೇ ಮೂಲಭೂತ ಸೌಲಭ್ಯ ಗಳನ್ನು ನೀಡಿದ್ದು, ಅಂತಹ ಚಟುವಟಿಕೆ ಕಾಣಿಸುತ್ತಿಲ್ಲ. ಆದರೂ ಆ್ಯಂಟಿ ನಕ್ಸಲ್
ತಂಡ ಇದ್ದೇ ಇದೆ. ಅಪರಾಧಗಳು ಕೋವಿಡ್ ಅವಧಿಯಲ್ಲಿ ಕಡಿಮೆಯಾಗಿವೆ. ಜೊತೆಗೆ ಅಪಘಾತಗಳ ಸಂಖ್ಯೆಯೂ ಕ್ಷೀಣಿಸಿದೆ ಎಂದರು. ಪೊಲೀಸ್ ಇಲಾಖೆ ಜನರ ರಕ್ಷಣೆಗಾಗಿ ಇದೆ. ಯಾವುದೇ ಸಂದರ್ಭದಲ್ಲೂ ನಿಮ್ಮ ದೂರುಗಳನ್ನು ಸಮೀಪದ ಠಾಣೆಗೆ ಹೋಗಿ ಸಲ್ಲಿಸ ಬಹುದು. ಆದರೆ ಸಣ್ಣಪುಟ್ಟ ವ್ಯಾಜ್ಯಗಳನ್ನು ನಿಮ್ಮಲ್ಲಿಯೇ ಬಗೆಹರಿಸಿಕೊಂಡರೆ ಉತ್ತಮ ಎಂದರು. ತರೀಕೆರೆ ಡಿವೈಎಸ್ಪಿ ರೇಣುಕ ಪ್ರಸಾದ್, ಕಡೂರು ವೃತ್ತ ನಿರೀಕ್ಷಕ ಮಂಜುನಾಥ್, ಪಿಎಸ್ಐ ವಿಶ್ವನಾಥ್ ಇದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.