ಖಾಸಗಿ ಕ್ಲಿನಿಕ್ಗೆ ಭೇಟಿ-ಪರಿಶೀಲನೆ
ಆಯುರ್ವೇದ ಕ್ಲಿನಿಕ್ನಲ್ಲಿ ಆಲೋಪತಿ ಔಷಧ-ಸ್ಟೆರಾಯ್ಡ ಬಳಕೆ ನಿಷಿದ್ಧ: ಡಾ| ಹರೀಶ್
Team Udayavani, Mar 8, 2020, 1:01 PM IST
ಕಡೂರು: ಯಗಟಿ ಗ್ರಾಮದ ಲಲಿತಾ ಕ್ಲಿನಿಕ್ಗೆ ಶನಿವಾರ ಭೇಟಿ ನೀಡಿದ ತಾಲೂಕು ವೈದ್ಯಾಧಿಕಾರಿ ಡಾ| ಹರೀಶ್ ವೈದ್ಯರಿಂದ ಔಷ ಧಗಳ ಮಾಹಿತಿ ಪಡೆದರು.
ಕಡೂರು: ಜಿಲ್ಲಾ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೋಂದಣಿ ಪ್ರಾಧಿಕಾರದ ಸೂಚನೆಯ ಮೇರೆಗೆ ಯಗಟಿಯಲ್ಲಿರುವ ಲಲಿತಾ ಕ್ಲಿನಿಕ್ಗೆ ಶನಿವಾರ ದಿಢೀರ್ ಭೇಟಿ ನೀಡಿದ ತಾಲೂಕು ವೈದ್ಯಾಧಿಕಾರಿ ಡಾ| ಪಿ.ಕೆ. ಹರೀಶ್ ಅವರು ಸಮಗ್ರ ಪರಿಶೀಲನೆ ನಡೆಸಿದರು.
ಆಯುರ್ವೇದ ಚಿಕಿತ್ಸೆ ನೀಡುವ ಕ್ಲಿನಿಕ್ನಲ್ಲಿ ಆಲೋಪತಿ ಔಷಧಗಳನ್ನು ಕೊಡುತ್ತಿರುವ ಬಗ್ಗೆ ಮತ್ತು ರೋಗಿಗಳಿಗೆ ಸ್ಟೆರಾಯ್ಡಗಳನ್ನು ನೀಡುವ ಬಗ್ಗೆ ದೂರು ದಾಖಲಾದ ಹಿನ್ನೆಲೆಯಲ್ಲಿ ಭೇಟಿ ನೀಡಿಪರಿಶೀಲನೆ ನಡೆಸಿದರು. ಈ ವೇಳೆ ಆಯುರ್ವೇದ ಔಷಧಗಳಿಗಿಂತ ಹೆಚ್ಚು ಆಲೋಪತಿ ಔಷಧಗಳು ಮತ್ತು ಸ್ಟೆರಾಯ್ಡ್ಗಳು ಇರುವುದನ್ನು ಕಂಡು ಡಾ| ಹರೀಶ್ ಅವರು ದಂಗಾದರು.
ಈ ವೇಳೆ ಮಾತನಾಡಿದ ಅವರು, ಈ ಹಿಂದೆ ಜನವರಿ 21ರಂದು ಕ್ಲಿನಿಕ್ಗೆ ಭೇಟಿ ನೀಡಿದಾಗ ಆಲೋಪತಿ ಔಷಧಗಳನ್ನು ಮತ್ತು ಸ್ಟೆರಾಯ್ಡಗಳನ್ನು ಬಳಸಬಾರದು ಎಂದು ಎಚ್ಚರಿಕೆ ನೀಡಿದ್ದರೂ ಸಹ ಅದನ್ನೇ ಮುಂದುವರಿಸಿರುವುದು ಕಾನೂನು ಉಲ್ಲಂಘನೆಯಾಗುತ್ತದೆ. ಯಾವುದೇ ಕಾರಣಕ್ಕೂ ಇನ್ನು ಮುಂದೆ ಆಯುರ್ವೇದ ಔಷಧಗಳನ್ನು ಬಿಟ್ಟು ಸ್ಟೆರಾಯ್ಡ ಅಥವಾ ಅಲೋಪತಿ ಔಷಧಗಳನ್ನು ಬಳಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಕ್ಲಿನಿಕ್ ವೈದ್ಯ ಡಾ| ಮಂಜುನಾಥ್ ಅವರಿಗೆ ಎಚ್ಚರಿಕೆ ನೀಡಿದರು.
ಇದಲ್ಲದೇ, ಪರವಾನಗಿ ಇಲ್ಲದೆ ಹಾಗೂ ಸೂಕ್ತ ದಾಖಲೆಗಳಿಲ್ಲದೆ ಔಷಧಗಳನ್ನು ದಾಸ್ತಾನು ಮಾಡಿರುವುದು ಸಹ ಕಾನೂನಿನ ಸ್ಪಷ್ಟ ಉಲ್ಲಂಘನೆ ಎಂದು ಪರಿಗಣಿಸಲಾಗುವುದು. ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಔಷಧ ನಿಯಂತ್ರಣ ಅ ಧಿಕಾರಿಗಳ ಗಮನಕ್ಕೆ ತಂದರು. ಅಲ್ಲದೆ, ತರೀಕೆರೆ ಉಪವಿಭಾಗಾಧಿಕಾರಿ ಬಿ.ಆರ್.ರೂಪಾ ಅವರಿಗೆ ಪ್ರಕರಣದ ಮಾಹಿತಿಯನ್ನು ದೂರವಾಣಿ ಮೂಲಕ ನೀಡಿದರು.
ಕ್ಲಿನಿಕ್ಗೆ ಬಂದು ಹೋಗುವ ಹೊರ ಮತ್ತು ಒಳ ರೋಗಿಗಳ ದಾಖಲೆ ಪುಸ್ತಕ ತೆರೆಯದಿರುವ ಬಗ್ಗೆ ಕ್ಲಿನಿಕ್ ವೈದ್ಯ ಡಾ| ಮಂಜುನಾಥ್ ಅವರನ್ನು ಪ್ರಶ್ನಿಸಿದರು. ನಂತರ ಯಗಟಿಯಲ್ಲಿರುವ ಮತ್ತೂಂದು ಶ್ರೀ ಮಲ್ಲಿಕಾರ್ಜುನಸ್ವಾಮಿ ಖಾಸಗಿ ಕ್ಲಿನಿಕ್ ಗೆ ಅನೌಪಚಾರಿಕ ಭೇಟಿ ನೀಡಿದ ಡಾ| ಹರೀಶ್, ಈ ಖಾಸಗಿ ಕ್ಲಿನಿಕ್ ವಿರುದ್ಧ ಯಾವ ದೂರುಗಳು ಬಂದಿಲ್ಲ. ಆದರೆ ಇಲ್ಲಿ ಔಷಧ ತ್ಯಾಜ್ಯವನ್ನು ಸಮರ್ಪಕವಾಗಿ ಮಾಡಿಲ್ಲದಿರುವುದು ಕಂಡುಬಂದಿದೆ. ತ್ಯಾಜ್ಯ ವಿಲೇವಾರಿಯನ್ನು ಸಮರ್ಪಕವಾಗಿ ಮಾಡಲು ಅಲ್ಲಿನ ವೈದ್ಯ ಡಾ| ವಿಶ್ವನಾಥ್ ಅವರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿಗಳ ಕಚೇರಿಯ ಅಧಿಕಾರಿ ಮಲ್ಲಿಕಾರ್ಜುನ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ
MUDA Case: ಸಿದ್ದರಾಮಯ್ಯ ಕಳಂಕ ರಹಿತರೆಂದು ತನಿಖೆಯಲ್ಲಿ ಸಾಬೀತಾಗಲಿ: ಎಂಎಲ್ಸಿ ಸಿ.ಟಿ.ರವಿ
ಮುತ್ತೋಡಿ ಅಭಯಾರಣ್ಯಕ್ಕೆ ರಜತ ಸಂಭ್ರಮ; ಕಣ್ಮನ ಸೆಳೆಯುತ್ತಿವೆ ಜೀವ ಸಂಕುಲ
Kottigehara: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು
Navaratri: ಅ.3ರಿಂದ ಕೊಟ್ಟಿಗೆಹಾರ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ ಆರಂಭ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Minchu Hulu Review: ಮಿಂಚುಹುಳು ತಂದ ಹೊಸಕಿರಣ
Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.