ಕಾಫಿ ಕೊಯ್ಲಿಗೆ ಕಾರ್ಮಿಕರ ಕೊರತೆ

ಸಮರ್ಪಕ ಯಂತ್ರ ಬಾರದ್ದರಿಂದ ಕೃಷಿ ಕಾರ್ಯಕ್ಕೆ ತೊಂದರೆ

Team Udayavani, Jan 13, 2021, 5:13 PM IST

coffi

ಶೃಂಗೇರಿ: ಕಾಫಿ ಕೊಯ್ಲು ತಾಲೂಕಿನಲ್ಲಿ ಆರಂಭವಾಗಿದ್ದರೂ, ಕಾರ್ಮಿಕರ ಕೊರತೆಯಿಂದ ಕಾಫಿ ಕೊಯ್ಲು ಮಂದಗತಿಯಲ್ಲಿ ಸಾಗಿದೆ. ಕೃಷಿಗೆ ಯಾಂತ್ರೀಕರಣ ಅನಿವಾರ್ಯವಾಗಿದ್ದರೂ, ಇನ್ನೂ ಅನೇಕ ಕೃಷಿ ಕಾರ್ಯಗಳಿಗೆ ಕಾರ್ಮಿಕರ ಅವಲಂಬನೆ ಅನಿವಾರ್ಯವಾಗಿದೆ. ಕಾಫಿ ಹಣ್ಣು ಕೊಯ್ಲಿಗೆ ಕಾರ್ಮಿಕರ ಅವಲಂಬನೆ ಹೆಚ್ಚಾಗಿದೆ. ಅಡಕೆ,ಕಾಫಿ, ಭತ್ತ ಕಟಾವಿನಿಂದ ಕಾರ್ಮಿಕರ ಕೊರತೆ ತೀವ್ರವಾಗಿದೆ.

ಕಾಫಿ ಹಣ್ಣಿನ ಕೊಯ್ಲಿಗೆ ಕಾರ್ಮಿಕರ ಕೊರತೆ:

ಅಡಕೆ ಸುಲಿಯುವ ಯಂತ್ರ ಬಂದಿದ್ದರಿಂದ ಅಡಕೆ ಸುಲಿಯುವ ಸಮಸ್ಯೆ ಬಹುತೇಕ ಪರಿಹಾರವಾಗಿದೆ. ಭತ್ತ ಕಟಾವಿನ ಸಮಸ್ಯೆ, ಒಕ್ಕಣೆಯನ್ನು ಮಾಡುವ ಕಂಬೈನ್‌x ಹಾರ್ವೆಸ್ಟರ್‌ ಭತ್ತದ ಕಟಾವಿನ ಸಮಸ್ಯೆ ನೀಗಿಸಿದ್ದಲ್ಲದೆ ಹತ್ತಾರು ಕಾರ್ಮಿಕರ ಕೆಲಸ  ಯಂತ್ರದಿಂದ ಆಗುತ್ತಿದೆ. ಅಕ್ಟೋಬರ್‌- ನವೆಂಬರ್‌ನಲ್ಲಿ ಸತತ ಚಂಡಮಾರುತ ಪ್ರಭಾವದಿಂದ ಅಡಕೆ ಕೊಯ್ಲು ವಿಳಂಬವಾಗಿ, ಡಿಸೆಂಬರ್‌ನಲ್ಲಿ ಕೊಯ್ಲು ಚುರುಕಾಗಿದೆ.

ಇದೇ ಸಂದರ್ಭದಲ್ಲಿ ಭತ್ತ ಕಟಾವು ನಡೆದಿದೆ. ಈ ನಡುವೆ ಅಡಕೆ ತೋಟದಲ್ಲಿ ಪರ್ಯಾಯ ಬೆಳೆಯಾಗಿರುವ ಕಾಫಿ ಹಣ್ಣಾಗುತ್ತಿದ್ದು, ಕೊಯ್ಲಿಗೆ ಕಾರ್ಮಿಕರ ಕೊರತೆ ಉಂಟಾಗಿದೆ. ಕಾಫಿ ಹಣ್ಣು ಕೊಯ್ಲಿಗೆ ಇನ್ನೂ ಸಮರ್ಪಕವಾಗಿ ಯಂತ್ರಗಳು ಬರದೇ ಇರುವುದರಿಂದ ಕಾಫಿ ಕೊಯ್ಲಿಗೆ ತೀವ್ರ ಹಿನ್ನಡೆಯಾಗಿದೆ. ಕಾಫಿ ಹಣ್ಣಾಗುತ್ತಿದ್ದಂತೆ ಕಾಡುಪ್ರಾಣಿಗಳ ಉಪಟಳ ಹೆಚ್ಚಾಗಿದ್ದು, ಸಕಾಲಕ್ಕೆ ಕೊಯ್ಲು ಮಾಡಲಾಗದ ರೈತರಿಗೆ ತೀವ್ರ ನಷ್ಟವಾಗುತ್ತಿದೆ. ಈ ವರ್ಷ ಇದುವರೆಗೂ ಚಳಿಯ ಪ್ರಮಾಣ ಕಡಿಮೆಯಾಗಿದ್ದು, ಇದರಿಂದ ಕಾಫಿ ಹಣ್ಣು ಒಂದೇ ಸಮನೆ ಆಗುತ್ತಿಲ್ಲ. ಆದರೆ ತೋಟದಲ್ಲಿ ಅಲ್ಲಲ್ಲಿ ಕಾಫಿ ಹಣ್ಣಾಗಿದ್ದು, ಕೊಯ್ಲು ಮಾಡಲು ಅಡ್ಡಿಯಾಗಿದೆ. ಕೊಯ್ಲು ಮಾಡದಿದ್ದರೆ ಅದು ಕಾಡುಪ್ರಾಣಿಗಳ ದಾಳಿಗೆ ಸಿಲುಕಿ ರೈತರಿಗೆ ದಕ್ಕುವುದಿಲ್ಲ. ಕಾಫಿ ಬೆಳೆಗೆ ಮಂಗಗಳ ಹಾವಳಿ ವಿಪರೀತವಾಗಿದ್ದು, ಕಾಫಿ ಹಣ್ಣು ತಿನ್ನುವುದರೊಂದಿಗೆ ರೆಂಬೆಯನ್ನು ಮುರಿದು ಹಾಳು ಮಾಡುತ್ತಿವೆ.

ಇದರಿಂದ ಈ ಸಾಲಿನ ಹಣ್ಣು ನಷ್ಟವಾಗುವುದಲ್ಲದೆ ಮುಂದಿನ ಸಾಲಿನ ಬೆಳೆಯೂ ನಷ್ಟವಾಗಲಿದೆ. ಮಂಗಗಳ ಹಿಂಡು ಬೆಳಗ್ಗೆಯಿಂದ ಸಂಜೆಯವರೆಗೂ ಗುಂಪು ಗುಂಪಾಗಿ ಕಾಫಿ ಗಿಡದ ಮೇಲೆ ದಾಳಿ ನಡೆಸುತ್ತಿದ್ದು, ಕಾಫಿ ಗಿಡವನ್ನೇ ಹಾಳು ಮಾಡುತ್ತಿವೆ. ಇದಲ್ಲದೆ ಅಳಿಲು,  ರಾತ್ರಿ ಸಂಚರಿಸುವ ಪ್ರಾಣಿಗಳು ಕಾಫಿ ಹಣ್ಣಿಗೆ ಮಾರಕವಾಗಿವೆ. ಕಾಫಿ ಕೊಯ್ಲು ಯಂತ್ರ ಇದೀಗ ಪರಿಚಯಿಸಿದ್ದರೂ ಅದರ ಬಳಕೆ ಇನ್ನಷ್ಟೇ ಆಗಬೇಕಿದೆ. ತಾಲೂಕಿನ ಬಹುತೇಕ ಅಡಕೆ ತೋಟ ಹಳದಿ ಎಲೆ ರೋಗಕ್ಕೆ ತುತ್ತಾಗಿದೆ. ಇತ್ತ ಕಾಫಿ ಗಿಡ ಉಪ ಬೆಳೆಯಾಗಿದ್ದು, ಇದೀಗ ರೈತರ ಅನಿವಾರ್ಯವಾದ ವಾಣಿಜ್ಯ ಬೆಳೆಯಾಗಿದೆ. ಕಾಡುಪ್ರಾಣಿಗಳ ದಾಳಿಯಿಂದ ರೈತರಿಗೆ ತೀವ್ರ ನಷ್ಟ ಆಗುತ್ತಿದೆ.

ಇದನ್ನೂ ಓದಿ:ಲವ್ ಮ್ಯಾರೇಜ್ VS ಅರೇಂಜ್ಡ್ ಮ್ಯಾರೇಜ್

ಅಡಕೆ ತೋಟದೊಳಗೆ ಬೆಳೆಯುತ್ತಿರುವ ಕಾಫಿ ಗಿಡಗಳಲ್ಲಿ ಬೇಗ ಹಣ್ಣು ಆಗುತ್ತಿದೆ. ಕಾಫಿ ತೋಟದಲ್ಲಿ ಬಹುತೇಕ ಒಂದೇ ಬಾರಿ ಹಣ್ಣು ಕೊಯ್ಲು ಮಾಡುತ್ತಾರೆ. ಅಡಕೆ ತೋಟದಲ್ಲಿ ಮಧ್ಯೆ- ಮಧ್ಯೆ ಹಣ್ಣಾಗುತ್ತಿದ್ದು, ಕೊಯ್ಲು ಮಾಡಲು ಅಡ್ಡಿಯಾಗಿದೆ. ಕೊಯ್ಲು ಮಾಡದೇ ಬಿಟ್ಟರೇ ಅದು ಕಾಡುಪ್ರಾಣಿಗಳ ಪಾಲಾಗುತ್ತದೆ. ಕಾಫಿ ಕೊಯ್ಲಿಗೂ ಸುಧಾರಿತ ಯಂತ್ರದ ಅಗತ್ಯವಿದೆ.  ತೋಟದಕುಂಬ್ರಿ ಸತೀಶ್‌, ಶೃಂಗೇರಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara-Bill

Kottigehara: 35 ವರ್ಷಗಳ ಹಿಂದೆ ಸೇವಿಸಿದ್ದ ಊಟದ ಬಿಲ್‌ ಪಾವತಿ!

13-kudremukh-1

Kudremukh-ಎಸ್.ಕೆ.ಬಾರ್ಡರ್ ರಾಜ್ಯ ಹೆದ್ದಾರಿ; ಗುಂಡಿಗಳ ರಸ್ತೆ

1-ckm

Chikkamagaluru: ಕಿರುಕುಳ, ಮಹಿಳೆ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಸರ್ವೇ ಸಿಬಂದಿ ಆತ್ಮಹತ್ಯೆ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

12

Mudigere: ನೇಣು ಬಿಗಿದುಕೊಂಡು‌ ಆತ್ಮಹ*ತ್ಯೆಗೆ ಶರಣಾದ ಸರ್ವೇ ಅಧಿಕಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.