![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 10, 2020, 8:54 AM IST
ಶೃಂಗೇರಿ(ಚಿಕ್ಕಮಗಳೂರು) : ತಾಲೂಕಿನಲ್ಲಿ ಆಶ್ಲೇಷಾ ಮಳೆ ಅರ್ಭಟ ಅಲ್ಪ ಮಟ್ಟಿಗೆ ತಗ್ಗಿದ್ದು, ತುಂಗಾ ನದಿಯ ಪ್ರವಾಹ ಇಳಿಕೆಯಾಗಿದೆ.
ಕಳೆದ ನಾಲ್ಕು ದಿನದಿಂದ ತುಂಬಿ ಹರಿಯುತ್ತಿದ್ದ ನದಿ ಪಟ್ಟಣದ ಬೈಪಾಸ್ ರಸ್ತೆ, ಕೆವಿಆರ್ ರಸ್ತೆಯಿಂದ ಕೆಳಕ್ಕೆ ಇಳಿದಿದೆ. ತಾಲೂಕಿನಲ್ಲಿ ವ್ಯಾಪಕ ಮಳೆಯಿಂದ ತೀವ್ರ ಹಾನಿ ಸಂಭವಿಸಿದ್ದು, ಗ್ರಾಮೀಣ ಪ್ರದೇಶದಲ್ಲಿ ಮತ್ತಷ್ಟು ವರದಿ ಬರುತ್ತಿದೆ. ಭೂಕುಸಿತ, ಮರ ಬಿದ್ದು ಹಾನಿಯಾಗಿರುವ ಪ್ರದೇಶಕ್ಕೆ ಅಧಿಕಾರಿಗಳು, ಜನ ಪ್ರತಿನಿಧಿಗಳು ಭೇಟಿ ನೀಡುತ್ತಿದ್ದು, ಪರಿಸ್ಥಿತಿಯ ಅವಲೋಕನ ನಡೆಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 169 ರ ನೆಮ್ಮಾರ್ ಸಾಲುಮರದ ಸಮೀಪ ತುಂಗಾ ನದಿ ಪ್ರವಾಹದಿಂದ ರಸ್ತೆ ಕುಸಿದಿದ್ದು, ರಸ್ತೆ ಅಪಾಯ ಸ್ಥಿತಿ ತಲುಪಿದೆ. ಇದರಿಂದ ಶೃಂಗೇರಿ ಕಾರ್ಕಳ ರಸ್ತೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು, ಕಾರ್ಕಳದಿಂದ ಶೃಂಗೇರಿಗೆ ಬರುವ ಪ್ರಯಾಣಿಕರಿಗೆ ಆಗುಂಬೆ ಅಥವಾ ಕುದುರೆಮುಖ ಮಾರ್ಗವಾಗಿ ಸಂಚರಿಸುವಂತೆ ತಿಳಿಸಲಾಗಿದೆ.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.