ಕೃಷಿ ಚಟುವಟಿಕೆಗೆ ಬಂತು ಜೀವಕಳೆ


Team Udayavani, Jun 5, 2018, 4:45 PM IST

krishi.jpg

ಆಲ್ದೂರು: ಮಳೆಗಾಲ ಆರಂಭವಾಗುತ್ತಿದ್ದು,ಮಲೆನಾಡಿನಲ್ಲಿ ಕೃಷಿ ಚಟುವಟಿಕೆಗಳಿಗೆ ಜೀವಕಳೆ ಬಂದಿದೆ. ಮಳೆಯಿಂದ
ಮೆದುವಾದ ಕೃಷಿ ಜಮೀನನ್ನು ರೈತರು ಹಸನು ಮಾಡಿಕೊಳ್ಳುತ್ತಿದ್ದು ನಾಟಿಗಾಗಿ ಭತ್ತದ ಸಸಿ ಮಡಿಗಳನ್ನು ಸಿದ್ಧಪಡಿಸಿಕೊಳ್ಳುತ್ತಿದ್ದಾರೆ. ಮಲೆನಾಡಿನ ಪ್ರಮುಖ ವಾಣಿಜ್ಯ ಬೆಳೆಗಳೆಂದರೆ ಕಾಫಿ, ಕಾಳು ಮೆಣಸು, ಭತ್ತ
ಇಲ್ಲಿನ ಪ್ರಮುಖ ಬೆಳೆ. ಕಾಫಿ ಬೆಳೆಗೆ ಇಲ್ಲಿ ಅಗ್ರ ಸ್ಥಾನ. ಇತ್ತೀಚೆಗೆ ಕಾಳು ಮೆಣಸು ಕಾಫಿ ಬೆಳೆಗೆ ಪೈಪೋಟಿ ನೀಡುತ್ತಿದೆ.

ಆಲ್ದೂರು ಹೋಬಳಿಯಲ್ಲಿ ಸುಮಾರು 625 ಹೆಕ್ಟೆರ್‌ ಕೃಷಿ ಭೂಮಿ ಇದೆ. ಮಳೆಯಾಶ್ರಿತ ಕೃಷಿ ಭೂಮಿಯೇ ಹೆಚ್ಚು. ನೀರಾವರಿ ಸೌಲಭ್ಯವನ್ನು ಬೆರಳೆಣಿಕೆಯಷ್ಟು ರೈತರು ಮಾತ್ರ ಹೊಂದಿದ್ದಾರೆ. ಆಲ್ದೂರು ವ್ಯಾಪ್ತಿಯಲ್ಲಿ ಮುಖ್ಯವಾಗಿ ಬೆಳೆಯುವ ಭತ್ತದ ತಳಿಗಳೆಂದರೆ ಕಿರುವಾಣ, ಪುಟ್ಟಭತ್ತ, ಸರ್ಕಾರಿ ಭತ್ತದ ತಳಿಗಳಾದ ತುಂಗಾ, ಬಾಂಗ್ಲಾ , ಐಆರ್‌ 64 ಇವುಗಳಿಗೆ ಬೇಡಿಕೆ ಕಡಿಮೆಯಿದ್ದು ಕೇವಲ 30 ರಿಂದ 35 ಕ್ವಿಂಟಾಲ್‌ ಬಿತ್ತನೆ ಭತ್ತ ಕೃಷಿ ಇಲಾಖೆಯಿಂದ ಸರಬರಾಜಾಗುತ್ತದೆ. ಇಳಿಮುಖವಾಗುತ್ತಿರುವ ಮಳೆಯ ಪ್ರಮಾಣ: ವರ್ಷದಿಂದ ವರ್ಷಕ್ಕೆ ಮಲೆನಾಡಿನಲ್ಲಿ ಮಳೆಯ ಪ್ರಮಾಣದಲ್ಲಿ ವ್ಯತ್ಯಾಸವಾಗುತ್ತಿದ್ದು ಕೃಷಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಕೆಲವು ಬಾರಿ ನಾಟಿ ಮಯದಲ್ಲಿ ಉತ್ತಮ ಮಳೆಯಾಗಿದ್ದರೂ ತೆನೆಗಟ್ಟುವ ಸಮಯದಲ್ಲಿ ಮಳೆ ಬಾರದೆ ಇಳುವರಿ ಕುಂಠಿತವಾಗುತ್ತದೆ.  ಆಲ್ದೂರು ಭಾಗದಲ್ಲಿ ಸರಾಸರಿ 75 ರಿಂದ 80 ಇಂಚು ಮಳೆಯಾಗುತ್ತಿದ್ದು, 2014-15 ರಲ್ಲಿ 77 ಇಂಚು ಮಳೆಯಾಗಿದ್ದು, 2016 ರಲ್ಲಿ 52 ಇಂಚು ಮಳೆಯಾಗಿದ್ದು, 2017 ರಲ್ಲಿ 56 ಇಂಚು ಮಳೆಯಾಗಿದೆ.

ಇಳಿಮುಖವಾಗುತ್ತಿರುವ ಭತ್ತದ ಕೃಷಿ:
ಆಲ್ದೂರು ಸುತ್ತಮುತ್ತ ಈ ಹಿಂದಿನ ಅವಧಿಯಲ್ಲಿ 825 ಹೆಕ್ಟೆರ್‌ ಕೃಷಿ ಜಮೀನಿದ್ದು ಈಗ 625 ಹೆಕ್ಟೆರ್‌ಗೆ ಇಳಿದಿದೆ. ಕೂಲಿ ಕಾರ್ಮಿಕರ ಸಮಸ್ಯೆ, ಬೆಳೆಗೆ ಉತ್ತಮ ಬೆಲೆ ಸಿಗದಿರುವುದು ಹಾಗೂ ಸರಿಯಾದ ಸಮಯಕ್ಕೆ ಮಳೆ ಬಾರದೆ ಇರುವುದು ಹಾಗೂ ಬೆಳೆಗಾರರು ವಾಣಿಜ್ಯ ಬೆಳೆಗಳತ್ತ ಮುಖ ಮಾಡುತ್ತಿರುವುದು ಹಾಗೂ ಭತ್ತದ ಗದ್ದೆಗಳನ್ನು ಕಾಫಿ ತೋಟಗಳನ್ನಾಗಿ ಮಾಡುತ್ತಿರುವುದರಿಂದ ಭತ್ತದ ಬೆಳೆ ಕಡಿಮೆಯಾಗಿದೆ.

ಕಾಡುತ್ತಿರುವ ಸೈನಿಕ ಹುಳು ಭಾದೆ:
ಮಲೆನಾಡಿನ ಭತ್ತದ ಬೆಳೆಯನ್ನು ಸೈನಿಕ ಹುಳು ಬಾದೆ ಕಾಡುತ್ತಿದ್ದು ರೈತರು ಕಂಗಾಲಾಗಿದ್ದಾರೆ. ಈ ಹಿಂದೆ ಭತ್ತದ ಬೆಳೆಯನ್ನು ಬೆಂಕಿ ರೋಗ, ಸಣ್ಣ ಪುಟ್ಟ ಕೀಟ ಭಾದೆಗಳು ಕಾಡುತ್ತಿದ್ದು, ಔಷಧಿ ಸಿಂಪಡನೆಯಿಂದ ಹತೋಟಿಗೆ ಬರುತ್ತಿತ್ತು. ಆದರೆ ಕಳೆದ ಬಾರಿಯಿಂದ ಕಾಣಿಸಿಕೊಂಡಿರುವ ಸೈನಿಕ ಹುಳು ಭಾದೆ ರೈತರನ್ನು ಕಂಗೆಡಿಸಿದೆ. ಭತ್ತದ ಫಸಲು ಕಟಾವಿಗೆ ಬರುವ ಸಮಯಕ್ಕೆ ಭತ್ತದ ತೆನೆಯನ್ನು ಸೈನಿಕ ಹುಳುಗಳು ಕಟಾವು ಮಾಡಿ ಬರಿ ಹುಲ್ಲನ್ನು ಮಾತ್ರ ಬಿಡುತ್ತಿದ್ದು ಇದರಿಂದ ರೈತರು ಹೈರಾಣಾಗಿದ್ದಾರೆ. ಈ ಬಾರಿ ಕೃಷಿ ಇಲಾಖೆ ಈ ರೋಗವನ್ನು ಹತೋಟಿಗೆ ತರಲು ಮುಂಜಾಗ್ರತಾ ಕ್ರಮವನ್ನು ಕೈಗೊಂಡು ರೈತರ ನೆರವಿಗೆ ಧಾವಿಸಬೇಕಿದೆ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara-Bill

Kottigehara: 35 ವರ್ಷಗಳ ಹಿಂದೆ ಸೇವಿಸಿದ್ದ ಊಟದ ಬಿಲ್‌ ಪಾವತಿ!

13-kudremukh-1

Kudremukh-ಎಸ್.ಕೆ.ಬಾರ್ಡರ್ ರಾಜ್ಯ ಹೆದ್ದಾರಿ; ಗುಂಡಿಗಳ ರಸ್ತೆ

1-ckm

Chikkamagaluru: ಕಿರುಕುಳ, ಮಹಿಳೆ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಸರ್ವೇ ಸಿಬಂದಿ ಆತ್ಮಹತ್ಯೆ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

12

Mudigere: ನೇಣು ಬಿಗಿದುಕೊಂಡು‌ ಆತ್ಮಹ*ತ್ಯೆಗೆ ಶರಣಾದ ಸರ್ವೇ ಅಧಿಕಾರಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.