
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Team Udayavani, Dec 18, 2024, 8:50 PM IST

ಚಿಕ್ಕಮಗಳೂರು: ಅಂತರ್ಜಾತಿ ಪ್ರೇಮಿಗಳು ವಿವಾಹವಾಗಿ ರಕ್ಷಣೆ ಕೋರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮೆಟ್ಟಿಲೇರಿ ರುವ ಘಟನೆ ನಡೆದಿದೆ.
ಅಜೇಯ್ ಹಾಗೂ ಶಾಲಿನಿ ಅಂತರ್ಜಾತಿ ಪ್ರೇಮಿಗಳಾಗಿದ್ದು, ಮದುವೆಗೆ ಮನೆಯವರು ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|ವಿಕ್ರಮ್ ಅಮಟೆಯವರನ್ನು ಭೇಟಿಯಾಗಿ ರಕ್ಷಣೆ ನೀಡುವಂತೆ ಕೋರಿಕೊಂಡಿದ್ದಾರೆ.
ದಲಿತ ಸಂಘರ್ಷ ಸಮಿತಿ ಮುಖಂಡ ಮರ್ಲೆ ಅಣ್ಣಯ್ಯ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿದ ಅಂತರ್ಜಾತಿ ಪ್ರೇಮಿಗಳು ದೇವಸ್ಥಾನದಲ್ಲಿ ಮದುವೆಯಾದ ನಂತರವೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಹಾರ ಬದಲಾಯಿಸಿಕೊಂಡು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಘಟನೆ ಸಂಬಂಧ ಮಾಹಿತಿ ಪಡೆದು ಸುದ್ದಿಗಾರರ ಜತೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|ವಿಕ್ರಮ್ ಅಮಟೆ ಅಜೇಯ್ ಮತ್ತು ಶಾಲಿನಿ ಅಂತರ್ಜಾತಿ ಪ್ರೇಮಿಗಳಾಗಿದ್ದು, ಕುಟುಂಬಸ್ಥರು ಮದುವೆಗೆ ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ದೇವಸ್ಥಾನದಲ್ಲಿ ಮದುವೆಯಾಗಿರುವುದಾಗಿ ತಿಳಿಸಿದ್ದಾರೆ.
ಇಬ್ಬರು ವಯಸ್ಕರಾಗಿದ್ದು, ಕಾನೂನಿನಲ್ಲಿ ಇವರ ವಿವಾಹಕ್ಕೆ ಮಾನ್ಯತೆ ಇದೆ. ಶಾಲಿನಿ ಭದ್ರಾವತಿ ಮೂಲದವರು ಅಜೇಯ್ ತರೀಕೆರೆ ತಾಲೂಕು ಲಕ್ಕವಳ್ಳಿ ಸಮೀಪದ ರಂಗೇನಹಳ್ಳಿಯವರಾಗಿದ್ದು ತಮ್ಮಗೆ ರಕ್ಷಣೆಬೇಕೆಂದು ತಮ್ಮನ್ನು ಭೇಟಿಯಾಗಿದ್ದಾರೆ. ಅಜೇಯ್ ಪೋಷಕರು ಮತ್ತು ಶಾಲಿನಿಯವರ ಪೋಷಕರನ್ನು ಕರೆದು ಮಾತನಾಡುವಂತೆ ತರೀಕೆರೆ ಪೊಲೀಸ್ ಠಾಣೆಯ ಠಾಣಾ ಧಿಕಾರಿಗೆ ಸೂಚನೆ ನೀಡಲಾಗಿದೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದರು.
ಮಂಗಳವಾರ ದಿನ ಹುಡುಗಿ ಪೋಷಕರು ತರೀಕೆರೆ ಪೊಲೀಸ್ ಠಾಣೆಗೆ ಬಂದಿದ್ದು, ಹುಡುಗ, ಹುಡುಗಿ ಠಾಣೆಗೆ ಬಾರದಿರುವ ಕಾರಣ ಹಿಂದುರುಗಿದ್ದಾರೆ. ಅವರನ್ನು ಮತ್ತೇ ಪೊಲೀಸ್ ಠಾಣೆಗೆ ಕರೆಸಿ ತಿಳುವಳಿಕೆ ನೀಡಲಾಗುವುದು ಎಂದು ಹೇಳಿದರು.
ಇದನ್ನೂ ಓದಿ: Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.