![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Nov 8, 2022, 10:29 AM IST
ಚಿಕ್ಕಮಗಳೂರು: ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ಮಂಗಳವಾರ (ನ.8) ಹೊರನಾಡು, ಶೃಂಗೇರಿ ದೇವಸ್ಥಾನಗಳಲ್ಲಿ ಪೂಜೆ-ಪ್ರಸಾದದ ವ್ಯವಸ್ಥೆಯಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದೆ.
ಕಳಸ ತಾಲೂಕಿನ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದಲ್ಲಿ ಬೆಳಗ್ಗೆ 11 ರಿಂದ 12 ಗಂಟೆವರೆಗೆ ಮಾತ್ರ ಪ್ರಸಾದದ ವ್ಯವಸ್ಥೆ ಇರಲಿದೆ. 12 ಗಂಟೆ ನಂತರ ಮತ್ತೆ ಪ್ರಸಾದ ಇರುವುದಿಲ್ಲ. ಮಧ್ಯಾಹ್ನ 1.30ಕ್ಕೆ ಅನ್ನಪೂರ್ಣೇಶ್ವರಿಗೆ ಮಹಾ ಮಂಗಳಾರತಿ ನಡೆಯಲಿದ್ದು, ಸಂಜೆ 4 ಗಂಟೆವರೆಗೆ ಅರ್ಚನೆ ನಡೆಯಲಿದೆ.
ಗ್ರಹಣ ಮೋಕ್ಷ ಕಾಲದ ಬಳಿಕ ಶುದ್ದಿ ಕಾರ್ಯದ ನಂತರವೇ ಪೂಜೆ-ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಗ್ರಹಣ ಆರಂಭದಿಂದ ಅಂತ್ಯದವರೆಗೂ ಅನ್ನಪೂರ್ಣೇಶ್ವರಿಗೆ ನಿರಂತರ ಅಭಿಷೇಕ ಇರಲಿದೆ.
ಶೃಂಗೇರಿ ಶಾರದಾಂಬೆ ದೇವಾಲಯದಲ್ಲಿ ಎಂದಿನಂತೆ ಪೂಜೆ ನಡೆಯಲಿದ್ದು, ಗ್ರಹಣದ ವೇಳೆಯೂ ದರ್ಶನಕ್ಕೆ ಅವಕಾಶ ಇರುತ್ತದೆ. ಆದರೆ ಮಧ್ಯಾಹ್ನದ ಊಟ, ಪೂಜೆ-ಪ್ರಸಾದ ಸೇರಿದಂತೆ ಯಾವುದೇ ಪ್ರಸಾದದ ವ್ಯವಸ್ಥೆ ಇರುವುದಿಲ್ಲ. ದರ್ಶನಕ್ಕೆ ಮಾತ್ರ ಅವಕಾಶ ಇರಲಿದೆ. ಗ್ರಹಣದ ಬಳಿಕ ಪೂಜೆ-ಪ್ರಸಾದ ಎಂದಿನಂತೆ ನಡೆಯಲಿದೆ.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.