Bhadra Reservoir : ತೆಪ್ಪ ಮಗುಚಿ ವ್ಯಕ್ತಿ ಸಾವು
Team Udayavani, Aug 15, 2023, 2:20 PM IST
ಚಿಕ್ಕಮಗಳೂರು: ಮೀನು ಹಿಡಿಯಲು ಹೋದಾಗ ಭಾರೀ ಗಾಳಿಗೆ ತೆಪ್ಪ ಮಗುಚಿ ಬಿದ್ದು ಓರ್ವ ಸಾವನ್ನಪ್ಪಿ, ಇಬ್ಬರು ಪಾರಾಗಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ ಗ್ರಾಮದ ಭದ್ರಾ ಜಲಾಶಯದಲ್ಲಿ ನಡೆದಿದೆ.
ಮೃತನನ್ನು 40 ವರ್ಷದ ಕೃಷ್ಣ ಎಂದು ಗುರುತಿಸಲಾಗಿದೆ.
ಭದ್ರಾ ಜಲಾಶಯದಲ್ಲಿ ಕೃಷ್ಣ, ಅಜಯ್ ಹಾಗೂ ರಾಜೇಶ್ ಮೀನು ಹಿಡಿಯಲು ಹೋಗಿದ್ದರು. ಈ ವೇಳೆ ಬೀಸಿದ ಭಾರೀ ಗಾಳಿಯಿಂದ ಉಕ್ಕಡ ಮಗುಚಿ ಬಿದ್ದಿದೆ. ಉಕ್ಕಡ ಮಗುಚಿ ಬೀಳುತ್ತಿದ್ದಂತೆ ಅಜಯ್ ಹಾಗೂ ರಾಜೇಶ್ ಈಜಿ ದಡ ಸೇರಿದ್ದಾರೆ. ಆದರೆ, ಕೃಷ್ಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ನೀರಿನಲ್ಲಿ ಮುಳುಗುತ್ತಿದ್ದ ಕೃಷ್ಣನನ್ನ ಬದುಕಿಸಲು ರಾಜೇಶ್ ಹಾಗೂ ಅಜಯ್ ಹೋರಾಡಿದ್ದಾರೆ. ಆದರೆ, ಭಾರೀ ಗಾಳಿಗೆ ನೀರಿನ ಅಲೆಗಳು ರಭಸವಾಗಿದ್ದ ಕಾರಣ ಆತನ್ನು ಬದುಕಿಸಲು ಸಾಧ್ಯವಾಗಿಲ್ಲ.
ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಕೃಷ್ಣ ಅವರ ಮೃತದೇಹವನ್ನು ಉಡುಪಿಯ ಮಲ್ಪೆ ಮೂಲದ ಈಜು ತಜ್ಞ ಈಶ್ವರ್ ಮಲ್ಪೆ ಹಾಗೂ ತಂಡದವರು ಹುಡುಕಿ ಹೊರ ತಂದಿದ್ದಾರೆ. ಮೃತ ಕೃಷ್ಣ ಮೂಲತಃ ತರೀಕೆರೆ ತಾಲೂಕಿನವನು. ಲಕ್ಕವಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ
MUDA Case: ಸಿದ್ದರಾಮಯ್ಯ ಕಳಂಕ ರಹಿತರೆಂದು ತನಿಖೆಯಲ್ಲಿ ಸಾಬೀತಾಗಲಿ: ಎಂಎಲ್ಸಿ ಸಿ.ಟಿ.ರವಿ
ಮುತ್ತೋಡಿ ಅಭಯಾರಣ್ಯಕ್ಕೆ ರಜತ ಸಂಭ್ರಮ; ಕಣ್ಮನ ಸೆಳೆಯುತ್ತಿವೆ ಜೀವ ಸಂಕುಲ
Kottigehara: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು
Navaratri: ಅ.3ರಿಂದ ಕೊಟ್ಟಿಗೆಹಾರ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ ಆರಂಭ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.